30 C
Mumbai
April 24, 2026
Mumbai News Kannada
ಪ್ರಕಟಣೆ

ಮುಂಬಯಿ ಕನ್ನಡ ಸಂಘ: ಡಿ. 20ರಂದು ಎರಡು ದತ್ತಿ ಉಪನ್ಯಾಸಗಳ ಕಾರ್ಯಕ್ರಮ






​ಕಳೆದ ಒಂಭತ್ತು ದಶಕಗಳಿಗೂ ಹೆಚ್ಚು ಸಮಯದಿಂದ ಕನ್ನಡ ನಾಡು ಸುಡಿಯ ಸೇವೆಯಲ್ಲಿ ನಿರತವಾಗಿದ್ದು ಇದೀಗ ಶತಮಾನದತ್ತ ಸಾಗುತ್ತಿರುವ ಮಾಟುಂಗಾ ಪೂರ್ವದ ಮುಂಬಯಿ ಕನ್ನಡ ಸಂಘದ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ ಎರಡು ದತ್ತಿ ಉಪನ್ಯಾಸಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
​ಖಾಲ್ಸಾ ಕಾಲೇಜು ಕನ್ನಡ ಪ್ರೇಮಿ ಮಂಡಳಿ ದತ್ತಿ ನಿಧಿಯ ಪರವಾಗಿ ಮುಂಬಯಿಯ ಉದಯೋನ್ಮುಖ ಕವಯಿತ್ರಿ, ಲೇಖಕಿ ದೀಪಾ ಹರೀಶ್‌ ಶೆಟ್ಟಿಯವರು “ಇಂದಿನ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳು” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ.
​ದಿ. ಜಿ. ವಿ. ರಂಗಸ್ವಾಮಿ ದತ್ತಿ ನಿಧಿಯ ಪರವಾಗಿ ಮಹಾಪೌರ ಆದರ್ಶ ಶಿಕ್ಷಕ ಪುರಸ್ಕಾರ ಪಡೆದಿರುವ ಶಿಕ್ಷಕ ಮಹದೇವ ಸಿದಮಲ್ಲಾ ಜಾವೀರರು “ನವಭಾರತದ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ.
​ಮುಂಬಯಿಯ ಹಿರಿಯ ಸಾಹಿತಿ ಡಾ. ಸುಮಾ ದ್ವಾರಕಾನಾಥ್‌ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಮುಂಬಯಿ ಕನ್ನಡ ಸಂಘದ ಅಧ್ಯಕ್ಷ ಗುರುರಾಜ್‌ ಎಸ್‌. ನಾಯಕ್‌ ಅಧ್ಯಕ್ಷತೆ ವಹಿಸಲಿದ್ದು ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸೋಮನಾಥ ಎಸ್‌. ಕಕೇರರರು ಕಾರ್ಯಕ್ರಮದ ನಿರ್ವಹಣೆ ಮಾಡುತ್ತಾರೆ.
​ಇದೇ ಸಂದರ್ಭದಲ್ಲಿ ಮುಂಬಯಿ ವಿಶ್ವವಿದ್ಯಾಲದಿಂದ ಕಳೆದ ಶೈಕ್ಷಣಿಕ ವರ್ಷದಲ್ಲಿ ನಡೆಸಲಾದ ಕನ್ನಡ ಎಂ.ಎ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿಕ್ರಂ ಜೋಶಿಯವರನ್ನು ಸಂಘದ ನಗದು ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.
​ಶನಿವಾರ ದಿನಾಂಕ 20-12-2025 ರಂದು ಸಂಜೆ ಗಂಟೆ 5-00ಕ್ಕೆ ಮೈಸೂರು ಅಸೋಸಿಯೇನ್‌ನ ತಳಮಹಡಿ ಸಭಾಗೃಹದಲ್ಲಿ ಈ ಕಾರ್ಯಕ್ರಮವು ಜರುಗಲಿದೆ. ಕಾರ್ಯಕ್ರಮದಲ್ಲಿ ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಹಾಜರಿರಬೇಕಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಸೋಮನಾಥ ಎಸ್‌. ಕರ್ಕೇರರು ಹಾಗೂ ಗೌರವ ಜೊತೆ ಕಾರ್ಯದರ್ಶಿ ರಾಮಚಂದ್ರ ಭಟ್‌ ವಿನಂತಿಸಿಕೊಂಡಿದ್ದಾರೆ.

​ಸೋಮನಾಥ ಎಸ್‌. ಕರ್ಕೇರ, ಫೋನ್‌: 9819321186



Related posts

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ :ಜ. 7 ರಂದು 36ನೇ ವಾರ್ಷಿಕೋತ್ಸವ

Mumbai News Desk

ಜ. 12ಕ್ಕೆ ಎನ್. ಪಿ. ಸುವರ್ಣ – ಪ್ರಭಾ ಸುವರ್ಣ ಅವರ ಅಭಿನಂದನಾ ಸಮಾರಂಭ.

Mumbai News Desk

ಉದ್ಯಾವರ ಶ್ರೀ ಭಗವತಿ ಕ್ಷೇತ್ರ ಮಂಜೇಶ್ವರ : ಡಿ. 14ರಿಂದ 17ರ ತನಕ ನಡಾವಳಿ ಮಹೋತ್ಸವ ಹಾಗೂ ಭೇಟಿ ಉತ್ಸವ

Mumbai News Desk

ಮೂಲ್ಕಿ: ಮಾರ್ಚ್ 10ರಂದು, ಹರಿಶ್ಚಂದ್ರ ಪಿ. ಸಾಲಿಯಾನ್ ಅವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk

ಮಾ.15, ತುಳುನಾಡ ಸೇವಾಸಮಾಜ ಮೀರಾಬಾಯಂದರ್ ವತಿಯಿಂದ ಸಂಸ್ಥಾಪಕ ದಿನಾಚರಣೆ, ವಿಶ್ವ ಮಹಿಳಾ ದಿನಾಚರಣೆ ಹಾಗೂ ಅರಸಿನ ಕುಂಕುಮ ಕಾರ್ಯಕ್ರಮ.

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ : ಸೆ. 28ರಂದು 80ನೇ ವಾರ್ಷಿಕ ಮಹಾಸಭೆ

Mumbai News Desk