32.1 C
Mumbai
June 7, 2026
Mumbai News Kannada
ಪ್ರಕಟಣೆ

ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್: ಡಿ.16ರಂದು ವಾರ್ಷಿಕ ಮಹಾಪೂಜೆ





ಮುಂಬಯಿ ಡಿ.13: ಧಾರ್ಮಿಕ ಮತ್ತು ಸಾಮಾಜಿಕ ಸೇವೆಯ ಮೂಲಕ ಸಾಂತಾಕ್ರೂಜ್ ಪರಿಸರದಲ್ಲಿ ಜನಾನುರಾಗಿಗಳಾಗಿರುವ ಹುತ್ಯಾರ ಕರ್ಮಾರು ದಿಢ್ ಮನೆಯ ಶ್ರೀ ವಾಸುದೇವ ಬಂಜನ್ ಅವರು ಸ್ಥಾಪಿಸಿರುವ ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್ ಆಡಳಿತಕ್ಕೊಳಪಟ್ಟಿರುವ ಶ್ರೀ ಮಂತ್ರ ದೇವಿ ದೇವಸ್ಥಾನದಲ್ಲಿ ವಾರ್ಷಿಕ ಮಹಾಪೂಜಾ ಕಾರ್ಯಕ್ರಮವು ಡಿಸೆಂಬರ್ 16ರಂದು (ಮಂಗಳವಾರ) ಬೆಳಿಗ್ಗೆಯಿಂದಲೇ ಆರಂಭಗೊಳ್ಳಲಿದೆ.

​ದೇವಸ್ಥಾನವು ಸಂತಾಕ್ರೂಜ್, ಆಶಾ ಚಾಳ್, ಮಿಲನ್ ಸಬ್ ವೇ ರೋಡ್, ಸಂತಾಕ್ರೂಜ್ (ಪಶ್ಚಿಮ) ವಿಳಾಸದಲ್ಲಿದೆ.

​ವಾರ್ಷಿಕ ಮಹಾಪೂಜೆಯ ಅಂಗವಾಗಿ ಅಂದು ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.

  • ​ಶ್ರೀ ದೇವಿಗೆ ನವಕ ಪ್ರಧಾನ ಹೋಮ ಹಾಗೂ ಕಲಶಾಭಿಷೇಕ ನೆರವೇರಿಸಲಾಗುವುದು.
  • ​ಸಾನಿಧ್ಯ ದೇವರಿಗೆ ಪಂಚಾಮೃತ ಅಭಿಷೇಕ ಮತ್ತು ಪರಿವಾರ ದೇವತೆಗಳಿಗೆ ಹೋಮಪರ್ವಗಳು ನಡೆಯಲಿವೆ.
  • ​ಅಮ್ಮನವರಿಗೆ ಗದ್ದಿಗೆ ಏರಿಸಿ ಶ್ರೀ ದೇವಿಯ ಆವೇಶದೊಂದಿಗೆ ಪ್ರಸಾದ ವಿತರಣೆ ಇರಲಿದೆ.
  • ​ಬಳಿಕ, ಸಂಜೆ 4 ಗಂಟೆಯವರೆಗೆ ಮಹಾ ಅನ್ನಪ್ರಸಾದ ವಿತರಣೆಯು ನಡೆಯಲಿದೆ.

​ಭಕ್ತಾದಿಗಳಿಗೆ ಬೆಳಿಗ್ಗೆ 11 ರಿಂದ ಸಂಜೆ 4.00 ಗಂಟೆಯವರೆಗೆ ಶ್ರೀ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

​ಈ ಪುಣ್ಯ ಕಾರ್ಯಕ್ರಮದಲ್ಲಿ ಸಮಸ್ತ ಭಗವದ್ಭಕ್ತರೆಲ್ಲರೂ ಪಾಲ್ಗೊಂಡು, ತಮ್ಮ ತನು, ಮನ, ಧನಗಳೊಂದಿಗೆ ಸಹಕರಿಸಿ ಶ್ರೀ ದೇವಿಯ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕೆಂದು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಶ್ರೀ ವಾಸುದೇವ ಬಂಜನ್ (ಅರ್ಚಕರು), ಅಧ್ಯಕ್ಷರು, ಟ್ರಸ್ಟಿಗಳು, ಮಧ್ಯಸ್ಥರು, ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ ಮತ್ತು ಸದ್ಭಕ್ತರು ವಿನಂತಿಸಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:

  • ​9867465493
  • ​9892691681


Related posts

ಉದ್ಯಾವರ ಶ್ರೀ ಭಗವತಿ ಕ್ಷೇತ್ರ ಮಂಜೇಶ್ವರ : ಡಿ. 14ರಿಂದ 17ರ ತನಕ ನಡಾವಳಿ ಮಹೋತ್ಸವ ಹಾಗೂ ಭೇಟಿ ಉತ್ಸವ

Mumbai News Desk

ಮಹತೋಭಾರ ಶನೀಶ್ವರ ದೇವಸ್ಥಾನ – ಸುವರ್ಣ ಸಂಭ್ರಮದ ಸರಣಿ ಕಾರ್ಯಕ್ರಮ 

Mumbai News Desk

ಜೂ.1ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ ಹುಟ್ಟೂರು ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk

ಆ. 25. ಬಾಂಬೆ ಬಂಟ್ಸ್ ಅಸೋಷಿಯೇಶನ್ ವತಿಯಿಂದ ವಾರ್ಷಿಕ ಶೈಕ್ಷಣಿಕ ಸಹಾಯ ವಿತರಣಾ,ಯಕ್ಷಗಾನ,ಸಾಧಕರಿಗೆ ಸನ್ಮಾನ

Mumbai News Desk

ಜೂ. 29, ಬಂಟರ ಸಂಘ ಮುಂಬಯಿ: ಡೊಂಬಿವಲಿ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಅಶ್ರಯದಲ್ಲಿ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

Mumbai News Desk

ಏ.20 ರಂದು ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ವಾರ್ಷಿಕ ನಡಾವಳಿ ಮಹೋತ್ಸವ.

Mumbai News Desk