32 C
Mumbai
April 24, 2026
Mumbai News Kannada
ಕ್ರೀಡೆ

ಫೇಮಸ್ ಯೂತ್ ಕ್ಲಬ್ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ





​ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇವರ ಮಾರ್ಗದರ್ಶನದಲ್ಲಿ, ಹಾಗೂ ರೋಟರಿ ಕ್ಲಬ್ ಬೈಕಂಪಾಡಿ, ಪ್ರಿಯದರ್ಶಿನಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಳೆಯಂಗಡಿ, ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕುಳಾಯಿ ಇವರ ಸಹಕಾರದಲ್ಲಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ, 10ನೇ ತೋಕೂರು, ಹಳೆಯಂಗಡಿ ಇವರ ಪ್ರಾಯೋಜಕತ್ವದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟ 2025-26 ಯಶಸ್ವಿಯಾಗಿ ನೆರವೇರಿತು.

​ಗೋವಿಂದ ದಾಸ ಕಾಲೇಜು ಮತ್ತು ಅನುದಾನಿತ ವಿದ್ಯಾದಾಯಿನಿ ಪ್ರೌಢಶಾಲೆ, ಸುರತ್ಕಲ್ ಇವರ ಸಹಭಾಗಿತ್ವದಲ್ಲಿ, ಗೋವಿಂದ ದಾಸ ಕಾಲೇಜು ಆಟದ ಮೈದಾನ, ಸುರತ್ಕಲ್ ಇಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.

​ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕುಸುಮಾ ಚಂದ್ರಶೇಖರ್ ರವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಮಹಾಬಲ ಪೂಜಾರಿ ಕಡಂಬೋಡಿಯವರು ದೀಪ ಪ್ರಜ್ವಲನಗೊಳಿಸಿ ನೆರವೇರಿಸಿದರು.

​ಈ ಸಂದರ್ಭದಲ್ಲಿ ಮೈ ಭಾರತ್ ದಕ್ಷಿಣ ಕನ್ನಡದ ಜಿಲ್ಲಾ ಯುವ ಅಧಿಕಾರಿ ಶ್ರೀ ಉಲ್ಲಾಸ್ ಕೆ.ಟಿ.ಕೆ., ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಅಧ್ಯಕ್ಷರಾದ ಶ್ರೀ ಸತ್ಯಜಿತ್ ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿಯ ಕಾರ್ಯದರ್ಶಿ ರೊ. ಶಿವಪ್ರಸಾದ್ ಶೆಟ್ಟಿ, ಎಚ್ ವಿ ಸಂಘ(ರಿ) ಸುರತ್ಕಲ್‌ನ ಅಧ್ಯಕ್ಷರಾದ ಶ್ರೀ ಜಯಚಂದ್ರ ಹತ್ವಾರ್ ಎಚ್., ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಮಂಗಳೂರು ಇಲ್ಲಿನ ಕೋಶಾಧಿಕಾರಿ ಮತ್ತು ಅಡ್ವೊಕೇಟ್‌ ಆದ ಶ್ರೀ ಪದ್ಮರಾಜ್ ಆರ್ ಪೂಜಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಳಾಯಿ ಇಲ್ಲಿನ ಪಿ.ಎಚ್.ಸಿ.ಓ. ಶ್ರೀಮತಿ ಶ್ವೇತಾ, ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿ, ಅಧ್ಯಕ್ಷರಾದ ಶ್ರೀ ಸಂಪತ್ ಜೆ ಶೆಟ್ಟಿ, ಮತ್ತು ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಪ್ರೇಮಲತಾ ಯೋಗೀಶ್ ರವರು ಉಪಸ್ಥಿತರಿದ್ದರು.

​ಈ ಕ್ರೀಡಾಕೂಟದಲ್ಲಿ ಕ್ರೀಡಾ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಕುಮಾರಿ ಧನಲಕ್ಷ್ಮಿ ಪೂಜಾರಿ ಮತ್ತು ಅಂತರರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಪಟು ಶ್ರೀಮತಿ ಸುಷ್ಮಾ ತಾರಾನಾಥ್ ರವರನ್ನು ಸನ್ಮಾನಿಸಲಾಯಿತು.

ಶ್ರೀ ಸತ್ಯಜಿತ್ ಸುರತ್ಕಲ್ ರವರು ಬಣ್ಣ ಬಣ್ಣದ ಬಲೂನುಗಳನ್ನು ಗಾಳಿಯಲ್ಲಿ ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

​ಕಾರ್ಯಕ್ರಮದ ಆರಂಭದಲ್ಲಿ ಮಹಿಳಾ ಮಂಡಲದ ಸದಸ್ಯರು ಪ್ರಾರ್ಥನೆಯನ್ನು ನೆರವೇರಿಸಿದರು. **ಶ್ರೀ ಉಲ್ಲಾಸ್ ಕೆ.ಟಿ.ಕೆ.**ಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಫೇಮಸ್ ಯೂತ್ ಕ್ಲಬ್‌ನ ಅಧ್ಯಕ್ಷರಾದ ಶ್ರೀ ಸಂಪತ್ ಜೆ ಶೆಟ್ಟಿಯವರು ಎಲ್ಲರಿಗೂ ಸ್ವಾಗತ ಕೋರಿದರು. ಶ್ರೀ ಭಾಸ್ಕರ್ ಅಮೀನ್ ತೋಕೂರು ರವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.



Related posts

ಸಾಫಲ್ಯ ಸೇವಾ ಸಂಘ ಮುಂಬೈ ‘ಸಾಫಲ್ಯ ಕ್ರೀಡಾ ಸ್ಪರ್ಧೆ – 2026’

Mumbai News Desk

ಎನ್ ಕೆ ಇ ಎಸ್ ಪ್ರೊ ಕಬಡ್ಡಿ ಸೀಸನ್ 1 – ಬಹುಮಾನ ವಿತರಣೆ

Chandrahas

ತುಳು ಸಂಘ ಬೊರಿವಲಿ, ಯುವ ವಿಭಾಗದಿಂದ ಗಣ್ಯರ ಉಪಸ್ಥಿತಿಯಲ್ಲಿ ಯಶಸ್ವೀ ಮ್ಯಾರಥಾನ್

Mumbai News Desk

ಡಬ್ಲ್ಯೂ ಐ ಎಫ್ ಎ ಅಂತರ್ ಜಿಲ್ಲಾ ಸಬ್ ಜ್ಯೂನಿಯರ್ ಫುಟ್ಬಾಲ್ ಪಂದ್ಯಾಟ, ಸಮರ್ಥ್ ರೈ ಅವರ ಅದ್ಬುತ ಆಟದಿಂದ ಮುಂಬಯಿ ತಂಡಕ್ಕೆ ಜಯ.

Mumbai News Desk

ಭಾಯಂದರ್, ರೈ ಸುಮತಿ ಎಜುಕೇಷನಲ್ ಟ್ರಸ್ಟ್ ನ ಸೇಂಟ್ ಆಗ್ನೆಸ್ ಆಂಗ್ಲ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ

Mumbai News Desk

N.E.S ಸೋಸೈಟಿಯ ಅಭಿನವ ಪಬ್ಲಿಕ್ ಸ್ಕೂಲ್ (CBSE Board) ನ ವಾರ್ಷಿಕ ಕ್ರೀಡಾಕೂಟ

Mumbai News Desk