ಉಪ್ಪುರು ಉಗ್ಗೇಲ್ ಬೆಟ್ಟು ನಿವಾಸಿ ಕುಮಾರಿ ಅಕ್ಷತಾ ಪೂಜಾರಿ ಅವರ ಮನೆಗೆ 10/12/2025 ರಂದು ಮುಂಜಾನೆ ಸುಮಾರು 4:00 ಗಂಟೆಗೆ 4 ಮಂದಿ ಮನೆಗೆ ಬಂದು ತಾವು ಪೊಲೀಸ್ ಎಂದು ಹೇಳಿಕೊಂಡು ದಾಂದಲೆ ನಡೆಸಿ, ಅಕ್ಷತಾ ಅವರ ಮೇಲೆ ಹಲ್ಲೆ ನಡೆಸಿರುವುದು ವರದಿಯಾಗಿದೆ.
ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದಾಗ, ನ್ಯಾಯ ದೊರಕುವ ಬದಲು ಅವರ ಮೇಲೆಯೇ FIR ದಾಖಲಾಗಿರುವುದು ವಿಷಾದಕರ ವಿಷಯವಾಗಿದೆ. ಪ್ರಸ್ತುತ ಅವರು ಅಜ್ಜೆರ್ಕಾಡು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ತನಗೆ ನ್ಯಾಯ ದೊರಕಿಸಿಕೊಡಬೇಕೆಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯನ್ನು ಸಂಪರ್ಕಿಸಿದ್ದಾರೆ.
ಈ ಗಂಭೀರ ವಿಷಯದ ಬಗ್ಗೆ ಚರ್ಚಿಸಿ ಮುಂದಿನ ಕ್ರಮಗಳನ್ನು ನಿರ್ಧರಿಸುವ ಸಲುವಾಗಿ ಸರ್ವ ಸಂಘಗಳ ತುರ್ತು ಸಭೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಉಡುಪಿ, ಕೆಳಗಿನಂತೆ ಕರೆಯಲಾಗಿದೆ:
ದಿನಾಂಕ: 15/12/2025
ಸಮಯ: ಸಂಜೆ 4:00 ಗಂಟೆ
ಸ್ಥಳ: ಬಿಲ್ಲವರ ಸೇವಾ ಸಂಘ(ರಿ.) ಬನ್ನಂಜೆ, ಉಡುಪಿ
ದಯವಿಟ್ಟು ಎಲ್ಲ ಸ್ವಜಾತಿ ಭಾಂದವರು ಸರಿಯಾದ ಸಮಯಕ್ಕೆ ಹಾಜರಾಗಿ ಸಹಕರಿಸಬೇಕಾಗಿ ವಿನಂತಿ.
ಧನ್ಯವಾದಗಳು 🙏
ಅಧ್ಯಕ್ಷರು ಹಾಗೂ ಸರ್ವ ಸದಸ್ಯರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.)




