July 23, 2026
Mumbai News Kannada
ತುಳುನಾಡು

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ







ಉಪ್ಪುರು ಉಗ್ಗೇಲ್ ಬೆಟ್ಟು ನಿವಾಸಿ ಕುಮಾರಿ ಅಕ್ಷತಾ ಪೂಜಾರಿ ಅವರ ಮನೆಗೆ 10/12/2025 ರಂದು ಮುಂಜಾನೆ ಸುಮಾರು 4:00 ಗಂಟೆಗೆ 4 ಮಂದಿ ಮನೆಗೆ ಬಂದು ತಾವು ಪೊಲೀಸ್ ಎಂದು ಹೇಳಿಕೊಂಡು ದಾಂದಲೆ ನಡೆಸಿ, ಅಕ್ಷತಾ ಅವರ ಮೇಲೆ ಹಲ್ಲೆ ನಡೆಸಿರುವುದು ವರದಿಯಾಗಿದೆ.

ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದಾಗ, ನ್ಯಾಯ ದೊರಕುವ ಬದಲು ಅವರ ಮೇಲೆಯೇ FIR ದಾಖಲಾಗಿರುವುದು ವಿಷಾದಕರ ವಿಷಯವಾಗಿದೆ. ಪ್ರಸ್ತುತ ಅವರು ಅಜ್ಜೆರ್ಕಾಡು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ತನಗೆ ನ್ಯಾಯ ದೊರಕಿಸಿಕೊಡಬೇಕೆಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯನ್ನು ಸಂಪರ್ಕಿಸಿದ್ದಾರೆ.

ಈ ಗಂಭೀರ ವಿಷಯದ ಬಗ್ಗೆ ಚರ್ಚಿಸಿ ಮುಂದಿನ ಕ್ರಮಗಳನ್ನು ನಿರ್ಧರಿಸುವ ಸಲುವಾಗಿ ಸರ್ವ ಸಂಘಗಳ ತುರ್ತು ಸಭೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಉಡುಪಿ, ಕೆಳಗಿನಂತೆ ಕರೆಯಲಾಗಿದೆ:

ದಿನಾಂಕ: 15/12/2025
ಸಮಯ: ಸಂಜೆ 4:00 ಗಂಟೆ
ಸ್ಥಳ: ಬಿಲ್ಲವರ ಸೇವಾ ಸಂಘ(ರಿ.) ಬನ್ನಂಜೆ, ಉಡುಪಿ

ದಯವಿಟ್ಟು ಎಲ್ಲ ಸ್ವಜಾತಿ ಭಾಂದವರು ಸರಿಯಾದ ಸಮಯಕ್ಕೆ ಹಾಜರಾಗಿ ಸಹಕರಿಸಬೇಕಾಗಿ ವಿನಂತಿ.

ಧನ್ಯವಾದಗಳು 🙏

ಅಧ್ಯಕ್ಷರು ಹಾಗೂ ಸರ್ವ ಸದಸ್ಯರು

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.)



Related posts

ಮೂಲ್ಕಿ ಸುರಭಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಸಂಸ್ಥೆಯಿಂದ ಅಂಗನವಾಡಿ ಮಕ್ಕಳಿಗೆ ಕ್ರೀಡಾ ಸಾಮಗ್ರಿ ಮತ್ತು ಕುರ್ಚಿಗಳ ಕೊಡುಗೆ

Mumbai News Desk

ಯುವವಾಹಿನಿ ಮೂಲ್ಕಿ ಆಟಿಡೊಂಜಿ ದಿನ :ಹಿಂದಿನ ಆಟಿಯ ದಿನಗಳನ್ನು ನೆನಪು ಮಾಡುವ ಕಾರ್ಯಕ್ರಮ

Mumbai News Desk

ಹೆಜಮಾಡಿ : ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಮತ್ತು ವನಮಹೋತ್ಸವ ಆಚರಣೆ

Mumbai News Desk

ಪಡುಬಿದ್ರಿ : ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಸಂಸ್ಮರಣೆ, ದತ್ತಿ ನಿಧಿ ವಿತರಣೆ, ಉಪನ್ಯಾಸ

Mumbai News Desk

ಅಸಹಾಯಕ ಕುಟುಂಬಕ್ಕೆ ಸೂರು ನಿರ್ಮಿಸಿ ಆಸರೆಯಾದ ಕುತ್ಯಾರು ಕುಲಾಲ ಸಂಘ..

Mumbai News Desk

ಹೆಜಮಾಡಿ ಬಿರುವೆರ್ ಬ್ರದರ್ಸ್ ನ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಪೂಜಾರಿ ಆಯ್ಕೆ.

Mumbai News Desk