September 6, 2026
Mumbai News Kannada
ತುಳುನಾಡು

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ





ಉಪ್ಪುರು ಉಗ್ಗೇಲ್ ಬೆಟ್ಟು ನಿವಾಸಿ ಕುಮಾರಿ ಅಕ್ಷತಾ ಪೂಜಾರಿ ಅವರ ಮನೆಗೆ 10/12/2025 ರಂದು ಮುಂಜಾನೆ ಸುಮಾರು 4:00 ಗಂಟೆಗೆ 4 ಮಂದಿ ಮನೆಗೆ ಬಂದು ತಾವು ಪೊಲೀಸ್ ಎಂದು ಹೇಳಿಕೊಂಡು ದಾಂದಲೆ ನಡೆಸಿ, ಅಕ್ಷತಾ ಅವರ ಮೇಲೆ ಹಲ್ಲೆ ನಡೆಸಿರುವುದು ವರದಿಯಾಗಿದೆ.

ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದಾಗ, ನ್ಯಾಯ ದೊರಕುವ ಬದಲು ಅವರ ಮೇಲೆಯೇ FIR ದಾಖಲಾಗಿರುವುದು ವಿಷಾದಕರ ವಿಷಯವಾಗಿದೆ. ಪ್ರಸ್ತುತ ಅವರು ಅಜ್ಜೆರ್ಕಾಡು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ತನಗೆ ನ್ಯಾಯ ದೊರಕಿಸಿಕೊಡಬೇಕೆಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯನ್ನು ಸಂಪರ್ಕಿಸಿದ್ದಾರೆ.

ಈ ಗಂಭೀರ ವಿಷಯದ ಬಗ್ಗೆ ಚರ್ಚಿಸಿ ಮುಂದಿನ ಕ್ರಮಗಳನ್ನು ನಿರ್ಧರಿಸುವ ಸಲುವಾಗಿ ಸರ್ವ ಸಂಘಗಳ ತುರ್ತು ಸಭೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಉಡುಪಿ, ಕೆಳಗಿನಂತೆ ಕರೆಯಲಾಗಿದೆ:

ದಿನಾಂಕ: 15/12/2025
ಸಮಯ: ಸಂಜೆ 4:00 ಗಂಟೆ
ಸ್ಥಳ: ಬಿಲ್ಲವರ ಸೇವಾ ಸಂಘ(ರಿ.) ಬನ್ನಂಜೆ, ಉಡುಪಿ

ದಯವಿಟ್ಟು ಎಲ್ಲ ಸ್ವಜಾತಿ ಭಾಂದವರು ಸರಿಯಾದ ಸಮಯಕ್ಕೆ ಹಾಜರಾಗಿ ಸಹಕರಿಸಬೇಕಾಗಿ ವಿನಂತಿ.

ಧನ್ಯವಾದಗಳು 🙏

ಅಧ್ಯಕ್ಷರು ಹಾಗೂ ಸರ್ವ ಸದಸ್ಯರು

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.)



Related posts

ಮೂಲ್ಕಿ ಕಾಂತು ಸೇವೆಗಾರ ಧರ್ಮ ಚಾವಡಿ ಟ್ರಸ್ಟ್(ರಿ)ಇದರ ಅಧ್ಯಕ್ಷರಾಗಿ ವಾಸು ಎಸ್. ಪೂಜಾರಿ ಕೊಲಕಾಡಿ ಆಯ್ಕೆ

Mumbai News Desk

ಹೂಡೆ : ಶ್ರೀ ಗಜಾನನ ಬಿಲ್ಲವರ ಸೇವಾ ಸಂಘದ 101ನೇ ಭಜನಾ ಮಂಗಳೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ವೈಭವ

Mumbai News Desk

ಜೇಸಿಐ ಕಾಪು ಘಟಕದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಕಾಪು ಜೇಸಿ ಭವನದಲ್ಲಿ ಆಚರಿಸಲಾಯಿತು.

Mumbai News Desk

“ಭಗವಾನ್ ದತ್ತಾತ್ರೇಯರು ವಿಶ್ವವನ್ನು ವಿದ್ಯಾಲಯವಾಗಿಸಿದವರು”: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

Mumbai News Desk

ಮೂಲ್ಕಿ ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Mumbai News Desk

ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 18ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ದತ್ತು ಸ್ವೀಕರ

Mumbai News Desk