30.9 C
Mumbai
June 8, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಕೆ ಭೋಜರಾಜ್ ರವರಿಗೆ ನುಡಿ ನಮನ ಕಾರ್ಯಕ್ರಮ.





ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಕೆ ಭೋಜರಾಜ್ ರವರಿಗೆ ನುಡಿ ನಮನ ಕಾರ್ಯಕ್ರಮವು ದಿನಾಂಕ 14.12.2025 ರಂದು 5 ಗಂಟೆಗೆ ಸರಿಯಾಗಿ ಸಂಘದ ವಠಾರದಲ್ಲಿ ಜರಗಿತು.

ಪ್ರಾರಂಭದಲ್ಲಿ ಗುರು ಪೂಜೆ ಮಾಡಿ ದಿವಂಗತ ಕೆ ಭೋಜರಾಜ್ ರವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸಭೆಯನ್ನು ಪ್ರಾರಂಭಿಸಲಾಯಿತು.

ಪ್ರಾರಂಭದಲ್ಲಿ ಸ್ಥಳೀಯ ಸಮಿತಿಯ ಗೌ. ಕಾರ್ಯದರ್ಶಿಯವರು ಕೆ ಭೋಜರಾಜ್ ರವರ ಪರಿಚಯವನ್ನು ಸಭೆಯಲ್ಲಿ ತಿಳಿಸಿದರು ಶ್ರದ್ಧಾಂಜಲಿ ಅರ್ಪಿಸಿದರು. ತದನಂತರ ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಉಪಾಧ್ಯಕ್ಷರಾದ ಪುರುಷೋತ್ತಮ ಕೋಟ್ಯಾನ್ ಮತ್ತು ಭಾಸ್ಕರ್ ಕರ್ನಿರೆ, ಚಂದ್ರಹಾಸ ಪಾಲನ್, ದೇವದಾಸ್ ಗುಜರನ್, ದೇವರಾಜ್ ಪೂಜಾರಿ, ತಿಲಕ್ ಸನಿಲ್, ಮತ್ತು ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್ , ಪುರಂದರ ಪೂಜಾರಿ ಯವರು ಕೆ ಭೋಜರಾಜ್ ರವರಿಗೆ ನುಡಿ ನಮನ ಸಲ್ಲಿಸಿದರು.

ಕೊನೆಗೆ ಕೆ ಭೋಜರಾಜ್ ರವರಿಗೆ ಆತ್ಮಕ್ಕೆ ಪರಮಾತ್ಮ ಸದ್ಗತಿಯನ್ನು ಕೊಡಲಿ ಮತ್ತು ಸಮಾಜಕ್ಕೆ ಆದ ನಷ್ಟ ಮತ್ತು ಸಂಸಾರಕ್ಕೆ ಆದ ದುಃಖವನ್ನು ಸಹಿಸುವ ಶಕ್ತಿಯನ್ನು ಶ್ರೀ ಗುರು ದೇವರು ಕೊಡಲಿ ಎಂದು ಎರಡು ನಿಮಿಷದ ಮೌನ ಪ್ರಾರ್ಥನೆ ಮಾಡಲಾಯಿತು.



Related posts

ವಸಾಯಿ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ವಿಶ್ವನಾಥ್ ಪಿ.ಶೆಟ್ಟಿ, ಅಧ್ಯಕ್ಷರಾಗಿ ದೇವೇಂದ್ರ ಬುನ್ನನ್

Mumbai News Desk

ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕಿನ ಮೇಲೆ ನಿರ್ಬಂಧ ಹೇರಿದ ಆರ್ ಬಿ ಐ – ಆತಂಕದಲ್ಲಿ ಗ್ರಾಹಕರು

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಸಮಿತಿ – ಭಕ್ತಿಭಾವ ಮತ್ತು ವಿಜೃಂಭಣೆಯಿಂದ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ.

Mumbai News Desk

ಕುಲಾಲ ಸಂಘ ಮುಂಬಯಿ  ಇದರ 2024-26 ರ ಸಾಲಿನ ಅವಧಿಗೆ ಪದಾಧಿಕಾರಿಗಳ ಆಯ್ಕೆ

Mumbai News Desk

ಎಸ್ ಎಸ್ ಸಿ ಯಲ್ಲಿ ಅನನ್ಯಾ ಹರೀಶ್ ಪೂಜಾರಿ ಶೇ 97.80 ಅಂಕ

Mumbai News Desk

ಶ್ರೀ ಮಹಿಷಮರ್ದಿನಿ ದೇವಸ್ಥಾನ ಬೊರಿವಲಿ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನ ,

Mumbai News Desk