April 23, 2026
Mumbai News Kannada
ಪ್ರಕಟಣೆ

ಡಿ. 19ರಂದು ದಹಿಸರ್‌ನಲ್ಲಿ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ





ಮುಂಬಯಿ, ಡಿ. 17: ದಹಿಸರ್ ಪೂರ್ವದ ಜಯಸ್ವಾಮಿ ಅತ್ತೂರು ಗುಂಡ್ಯಡ್ಕ ಅವರ ಆಯೋಜನೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆಯು ಇದೇ ಬರುವ ಡಿಸೆಂಬರ್ 19, ಶುಕ್ರವಾರದಂದು ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ.

​ದಹಿಸರ್ ಪೂರ್ವದ ರಾವಲ್ಪಾಡದಲ್ಲಿರುವ ಸೇಂಟ್ ಥಾಮಸ್ ಸ್ಕೂಲ್ ಸಮೀಪದ ರಾಧಾಕೃಷ್ಣ ಮಂದಿರ ಸಭಾಂಗಣದಲ್ಲಿ ಈ ಧಾರ್ಮಿಕ ಕಾರ್ಯಕ್ರಮವು ಅಂಧೇರಿಯ ಶ್ರೀ ಚಂದ್ರಹಾಸ ಗುರುಸ್ವಾಮಿ ಇನ್ನಂಜೆ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ವಿವರಗಳು:

  • ಬೆಳಿಗ್ಗೆ 5.30: ಮಹಾಗಣಪತಿ ಹೋಮ.
  • ಬೆಳಿಗ್ಗೆ 7.30: ಪ್ರಾಣಪ್ರತಿಷ್ಠೆ ಪೂಜೆ ಮತ್ತು ಅರ್ಚನೆ.
  • ಬೆಳಿಗ್ಗೆ 8.00 ರಿಂದ 9.00: ಕೇರಳ ಗ್ರೂಪ್ ತಂಡದವರಿಂದ ‘ನಾರಾಯಣೀಯಂ’ ಪಾರಾಯಣ.
  • ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 12.30: ಶ್ರೀ ದುರ್ಗಾಪರಮೇಶ್ವರಿ – ಶನೀಶ್ವರ ದೇವಸ್ಥಾನ (ರಾವಲ್ಪಾಡ, ದಹಿಸರ್ ಪೂರ್ವ) ಇವರಿಂದ ಭಜನಾ ಕಾರ್ಯಕ್ರಮ.
  • ಮಧ್ಯಾಹ್ನ 12.30 ರಿಂದ 1.00: ದೀಪಾರಾಧನೆ ಮತ್ತು ಮಹಾಪೂಜೆ.
  • ಮಧ್ಯಾಹ್ನ 1.00 ರಿಂದ 3.00: ತೀರ್ಥ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ.

​ಈ ಪುಣ್ಯ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತೀರ್ಥ ಪ್ರಸಾದಗಳನ್ನು ಸ್ವೀಕರಿಸಿ ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಸಂಘಟಕರು ಹಾಗೂ ಆಯೋಜಕರಾದ ಶ್ರೀ ಜಯಸ್ವಾಮಿ ಅತ್ತೂರು ಗುಂಡ್ಯಡ್ಕ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9902581150



Related posts

ತೋಡಾರು ಕೊಡಮಣಿತ್ತಾಯ ದೈವಸ್ಥಾನ, ಬ್ರಹ್ಮಶ್ರೀ ಬೈದರ್ಕಳ ಗರಡಿ : ಡಿ 22ರಿಂದ 26ವರೆಗೆ ಕಾಲಾವಧಿ ಜಾತ್ರೆ

Mumbai News Desk

ನಟನಾ ನೃತ್ಯ ಅಕಾಡೆಮಿ ಪೊವಾಯಿ, ಡಿ 22 ರಂದು 12ನೇ ವಾರ್ಷಿಕೋತ್ಸವ

Mumbai News Desk

ಸಾಂತಕ್ರೂಸ್   ಶ್ರೀ ಮಂತ್ರ ದೇವಿ   ದೇವಸ್ಥಾನ ವಾರ್ಷಿಕ ಮಹಾಪೂಜೆ.

Mumbai News Desk

ಎ. 25, ತುಳು ಸಂಘ, ಬೋರಿವಲಿ16ನೇ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ, ತುಳು ನಾಟಕ ಪ್ರದರ್ಶನ

Mumbai News Desk

ಆದೂರು ಶ್ರೀ ಭಗವತಿ ಕ್ಷೇತ್ರದಲ್ಲಿ ಜ. 19 ರಿಂದ 24ರ ತನಕ 351 ವರ್ಷದ ಬಳಿಕ ಪೆರುಂಕಳಿಯಾಟ್ಟ ಮಹೋತ್ಸವ

Mumbai News Desk

ಮಾರ್ಚ್ 2 ಕ್ಕೆ ಭಯಂದರ್ ನಲ್ಲಿ ನಡೆಯುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಾಯಿ ಈಶ್ವರ್ ಗುರೂಜಿ ಭಾಗಿ.

Mumbai News Desk