September 6, 2026
Mumbai News Kannada
ಸುದ್ದಿ

ಸಾಹಿತಿ ಡಾ. ವಿಶ್ವನಾಥ್ ಕಾರ್ನಡ್ ಅವರಿಗೆ ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ವತಿಯಿಂದ ಅಭಿನಂದನೆ





ಮದರ್ ಇಂಡಿಯಾ ಧರ್ಮಾರ್ಥ ರಾತ್ರಿ ಶಾಲೆಯ ಹಳೆ ವಿದ್ಯಾರ್ಥಿ, ಪ್ರಖ್ಯಾತ ಸಾಹಿತಿ, ಸಂಶೋಧಕ ಡಾ. ವಿಶ್ವನಾಥ್ ಕಾರ್ನಾಡ್ ಅವರು ಪ್ರತಿಷ್ಠಿತ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸಾಹಿತ್ಯ ಪ್ರಶಸ್ತಿ 2025ರಿಂದ ಪುರಸ್ಕೃತರಾದ ಪ್ರಯುಕ್ತ ಅವರನ್ನು ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ವತಿಯಿಂದ ಕಾರ್ನಾಡ್ ಅವರ ನಿವಾಸದಲ್ಲಿ ಅಭಿನಂದಿಸಲಾಯಿತು.
ಫೌಂಡೇಶನ್ ನ ಅಧ್ಯಕ್ಷ ಸುರೇಂದ್ರ ಪೂಜಾರಿ, ಪ್ರಧಾನ ಕಾರ್ಯದರ್ಶಿ ಹರೀಶ್ ಮೈಂದನ್, ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಕೋಶಾಧಿಕಾರಿ ಟಿ. ವಿ. ಪೂಜಾರಿ, ಜತೆ ಕಾರ್ಯದರ್ಶಿ ಅಶೋಕ್ ಸುವರ್ಣ, ಧನ ಸಂಗ್ರಹ ಸಮಿತಿಯ ಕಾರ್ಯಧ್ಯಕ್ಷ ಮುಂಜುನಾಥ್ ಪೂಜಾರಿ ಅವರು ಉಪಸ್ಥಿತರಿದ್ದರು.
ಅಧ್ಯಕ್ಷರು ಮಾತಾಡುತ್ತಾ ಮುಂಬಾಯಿಯ ರಾತ್ರಿ ಶಾಲೆಯ ಹಳೆ ವಿದ್ಯಾರ್ಥಿ ಯೋರ್ವರಿಗೆ ಈ ಪ್ರಶಸ್ತಿ ದೊರಕಿರುವುದು ರಾತ್ರಿ ಶಾಲೆಗಳ ಹಳೆ ವಿದ್ಯಾರ್ಥಿ ಗಳಿಗೆ ಅಭಿಮಾನದ ಸಂಗತಿಯಾಗಿದೆ ಎಂದು ತಮ್ಮ ಪ್ರಶಂಸೆ ವ್ಯಕ್ತಪಡಿಸಿದರು.
ಡಾ. ಕಾರ್ನಾಡ್ ಅವರು ಈ ಪ್ರಶಸ್ತಿ ಯನ್ನು ತನ್ನ ಬದುಕಿ ಗೆ ದಾರಿ ಮಾಡಿಸಿದ ಮದರ್ ಇಂಡಿಯಕ್ಕೆ ಅರ್ಪಿಸುತ್ತೇನೆ ಎಂದು ಹೇಳಿದರು.
ಕಥೆಗಾರರಾಗಿ, ಕವಿಯಾಗಿ, ನಾಟಕ ಕಲಾವಿದರಾಗಿ, ಹಿಂದಿ, ಕನ್ನಡ, ಇಂಗ್ಲೀಷ್ ಭಾಷೆಗಳ ಉಪನ್ಯಾಸಕರಾಗಿ, ಫುಟ್ಬಾಲ್ ಕ್ರೀಡಾ ಪಟು ವಾಗಿ, ವಕೀಲರಾಗಿ, ಸಂಪಾದಕರಾಗಿ, ಬ್ಯಾಂಕ್ ರ್ ಆಗಿ, ಉತ್ತಮ ವಾಗ್ಮಿ ಯಾಗಿ, ಸಂಶೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ, ಹಿಂದಿ ಭಾಷಾ ಪ್ರಚಾರಕರಾಗಿ ಬಹುಮುಖ ವ್ಯಕ್ತಿತ್ವದ ಡಾ. ಕಾರ್ನಾಡ್ 30 ಕ್ಕಿಂತಲೂ ಹೆಚ್ಚು ಕೃತಿ ಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ ಮದರ್ ಇಂಡಿಯಾದ ಹೆಮ್ಮೆ ಯ ಹಳೆ ವಿದ್ಯಾರ್ಥಿ ಎಂದು ಅಶೋಕ್ ಸುವರ್ಣ ಪರಿಚಯ ಮಾಡಿದರು.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (11/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ರೈ ಸಮಿತಿ ಎಜುಕೇಷನಲ್ ಟ್ರಸ್ಟ್‌ನ ಸೈಂಟ್ ಆಗ್ನೆಸ್ ಇಂಗ್ಲಿಷ್ ಹೈಸ್ಕೂಲ್‌ಗೆ ಕಟೀಲು ಅನಂತ ಅಸ್ರಣ್ಣರ ಭೇಟಿ

Mumbai News Desk

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ: ‘ಆರ್ಟಿಕಲ್ 370’ ಅತ್ಯುತ್ತಮ ಚಿತ್ರ, ಮಮ್ಮುಟ್ಟಿ-ಕಾರ್ತಿಕ್ ಆರ್ಯನ್‌ಗೆ ಅತ್ಯುತ್ತಮ ನಟ ಪ್ರಶಸ್ತಿ

Mumbai News Desk

ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ’ ರಜತ ಮಹೋತ್ಸವಕ್ಕೆ ಆಮಂತ್ರಣ ಪತ್ರಿಕೆ ಬಿಡುಗಡೆ; ಸೆ. 6ರಂದು ಮಂಗಳೂರಿನಲ್ಲಿ ಅದ್ದೂರಿ ಸಮಾರಂಭ

Mumbai News Desk

ಕಾರ್ಕಳ : ಬಿಜೆಪಿಯ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ನಿಧನ

Mumbai News Desk