25 C
Mumbai
March 7, 2026
Mumbai News Kannada
ಪ್ರಕಟಣೆ

ಸಾಂತಾಕ್ರೂಜ್ ಪೇಜಾವರ ಮಠ : ಡಿ. 23ಕ್ಕೆ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರನೇ ವರ್ಷದ ಸಮಾರಾಧನೆ





ಉಡುಪಿ ಶ್ರೀ ಪೇಜಾವರ ಮಠಾಧೀಶರಾಗಿದ್ದ 
ಯತಿಕುಲ ಚಕ್ರವರ್ತಿ  ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ
6ನೆಯ ಸಮಾರಾಧನಾ ಮಹೋತ್ಸವ ಡಿ.23 ಮಂಗಳವಾರ  
ಬೆಳಗ್ಗೆ 10ರಿಂದ ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠದ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಅನುಗ್ರಹ ಮತ್ತು ಮಾರ್ಗದರ್ಶನದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯದಲ್ಲಿ ಶ್ರೀ ಭೀಮನಕಟ್ಟೆ ಮಠದ ಮಠಾಧೀಶ  ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದಂಗಳ ಉಪಸ್ಥಿತಿಯಲ್ಲಿ ಬೆಳಗ್ಗೆ 10ರಿಂದ ಶ್ರೀಗಳ ಆರನೇ ಮಹಾ ಸಮಾರಾಧನಾ ಮಹೋ ತ್ಸವದ ಪೂಜಾಧಿಗಳು ಆರಂಭಗೊಳ್ಳಲಿದೆ. ಪೂರ್ವಾಹ್ನ 11ರಿಂದ ಪ್ರವಚನ, ಶ್ರೀರಾಮ ಪೂಜೆ. ಮಧ್ಯಾಹ್ನ 12ರಿಂದ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.

ಭಕ್ತಾದಿಗಳು, ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಶ್ರೀಗುರುಗಳ ಅನುಗ್ರಹಕ್ಕೆ ಪಾತ್ರರಾಗುವಂತೆ , ಪೇಜಾವರ ಮಠ ಮುಂಬಯಿ ಶಾಖಾ ಪ್ರಧಾನ ವ್ಯವಸ್ಥಾಪಕ ರಾಮದಾಸ ಉಪಾಧ್ಯಾಯ ರೆಂಜಾಳ, ವ್ಯವಸ್ಥಾಪಕರಾದ ವಿದ್ವಾನ್ ಹರಿ ಭಟ್ ಪುತ್ತಿಗೆ, ನಿರಂಜನ್ ಗೋಗೈ, ಮಠದ ಪುರೋಹಿತ ವರ್ಗದ ಪ್ರಕಟನೆ ತಿಳಿಸಿದೆ.



Related posts

ನ. 26, 27 ಕಾಪುವಿನ ಮೂರೂ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಜಾರ್ದೆ ಮಾರಿಪೂಜೆ

Mumbai News Desk

ವರ್ಲಿ    ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್, ನ. 16 ರಂದು ಮಾಲೆ ಧಾರಣೆ , ಶಿಬಿರದಲ್ಲಿ ಅನ್ನದಾನ, ಪೂಜಾ ಕಾರ್ಯಗಳು ಪ್ರಾರಂಭ 

Mumbai News Desk

ಮಾ.8. ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಹಾಶಿವರಾತ್ರಿ ಆಚರಣೆ

Mumbai News Desk

ಸಾಫಲ್ಯ ಸೇವಾ ಸಂಘ.ಮುಂಬಯಿ ಮಾ 9;ಸಾಫಲ್ಯ ಸ್ತ್ರೀ ಶಕ್ತಿ ಕಾರ್ಯಕ್ರಮ

Mumbai News Desk

  ಜು 14; ಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಉಚಿತ ಆರೋಗ್ಯ, ಮತ್ತು ಕಣ್ಣಿನ ಪರೀಕ್ಷೆ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.

Mumbai News Desk