September 6, 2026
Mumbai News Kannada
ಸುದ್ದಿ

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ : ಕಾಪು ಮಾರಿಯಮ್ಮ ದರುಶನ





ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಡಿಸೆಂಬರ್ 24ರಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.

ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಸ್ವಾಗತಿಸಿ ಗೌರವಿಸಲಾಯಿತು.

ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ನನಗೆ ಇದು ಜೀವನದಲ್ಲಿ ಅತ್ಯಂತ ಶ್ರೇಷ್ಠವಾದ ದಿನ, ಇಂತಹ ಚರಿತ್ರೆಯುಳ್ಳ ದೇವಸ್ಥಾನಕ್ಕೆ ಬಂದಿರುವುದು ನನ್ನ ಪೂರ್ವ ಜನ್ಮದ ಪುಣ್ಯ, ಕೋಟಿ ದುಡ್ಡು ಕೊಟ್ಟರು ಸಿಗದ ಮಾನಸಿಕ ನೆಮ್ಮದಿಯ ಅನುಭವವಾಗಿದೆ, ದೇಶದಲ್ಲಿ ರಾಜ್ಯದಲ್ಲಿ ಎಲ್ಲಿಯೂ ನಡೆಯದ ರೀತಿಯಲ್ಲಿ ಈ ದೇಗುಲದ ಜೀರ್ಣೋದ್ಧಾರ ನಡೆದಿದೆ, ಅ ತಾಯಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದರು.

ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಶಾಸಕ ಮತ್ತು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾಧವ ಆರ್. ಪಾಲನ್, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಹುಬ್ಬಳ್ಳಿ ಧಾರವಾಡ ಸಮಿತಿಯ ಸಂಚಾಲಕರಾದ ಸುಗ್ಗಿ ಸುಧಾಕರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಶೇಖರ ಸಾಲ್ಯಾನ್,ರವೀಂದ್ರ ಮಲ್ಲಾರ್, ಮನೋಹರ ರಾವ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ, ಪ್ರಚಾರ ಸಮಿತಿ ಸಂಚಾಲಕ ಜಯರಾಮ್ ಆಚಾರ್ಯ, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.



Related posts

ಖಾರ್ ಪೂರ್ವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿಯಾದ ಯೋಗೇಶ್ ಕೆ. ಹೆಜ್ಮಾಡಿ ಹಾಗೂ ಅವರ ಧರ್ಮಪತ್ನಿಯವರಾದ ಲೀಲಾವತಿ ವೈ. ಹೆಜ್ಮಾಡಿ* ಯವರು ದಾಂಪತ್ಯ ಜೀವನದ ಸುವರ್ಣ ಮಹೋತ್ಸವಕ್ಕೆ ಪಾದಾರ್ಪಣೆ

Mumbai News Desk

ಶಾಲಾ ಹಂತದಲ್ಲೇ ಈಜು ಕಲಿಕೆ – ಮೂಲತ್ವ ವಿಶ್ವ ಪ್ರಶಸ್ತಿ ಸ್ವೀಕರಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಸಲಹೆ

Mumbai News Desk

ದ್ವಮ್ದ್ವ’ ಕನ್ನಡ ಕಲಾತ್ಮಕ ಚಿತ್ರ ಬಿಡುಗಡೆ – ಪತ್ರಕರ್ತರಿಗೆ ವಿಶೇಷ ಪ್ರದರ್ಶನ

Mumbai News Desk

19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ – 2024

Mumbai News Desk

ಐಸಿಎಸ್ ಸಿ  10 ತರಗತಿಯ ಫಲಿತಾಂಶ – ಪೂರ್ಣ ಶ್ರೀಧರ ಭಂಡಾರಿ.ಶೇ  98.2% ಅಂಕ 

Mumbai News Desk

ಕಾಪು ಮೊಗವೀರ ಮಹಾಸಭಾ, ಮುಂಬಯಿ ಇದರ 84 ನೇ ವಾರ್ಷಿಕ ಮಹಾಸಭೆ

Mumbai News Desk