26.3 C
Mumbai
March 7, 2026
Mumbai News Kannada
ಪ್ರಕಟಣೆ

ಸಾಂತಕ್ರೂಸ್   ಶ್ರೀ ಮಂತ್ರ ದೇವಿ   ದೇವಸ್ಥಾನ ವಾರ್ಷಿಕ ಮಹಾಪೂಜೆ.





ಧರ್ಮ ಕಾರ್ಯದಲ್ಲಿ ಪಾಲ್ಗೊಂಡಾಗ ಬದುಕು ಪಾವನ: ವಾಸುದೇವ ಬಂಜನ್

ಚಿತ್ರ ವರದಿ : ದಿನೇಶ್ ಕುಲಾಲ್

ಧಾರ್ಮಿಕ ಮುಖಂಡರಾಗಿ, ಸಾಮಾಜಿಕ ಸೇವೆಯ ಮೂಲಕ ಸಾಂತಕ್ರೂಸ್ ಪರಿಸರದಲ್ಲಿ ಜನಾನುರಾಗಿರುವ 
ವಾಸುದೇವ ಬಂಜನ್  ಅವರು  ಸಾಂತಕ್ರೂಸ್, ಆಶಾ ಚಾಲ್, ಮಿಲನ್ ಸಬ್ ವೇ ರೋಡ್, ಸಂತಾಕ್ರೂಸ್, (ಪ.) ಇಲ್ಲಿ ಸ್ಥಾಪಿಸಿರುವ ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್ ಆಡಳಿತದ ಶ್ರೀ ಮಂತ್ರದೇವಿ ದೇವಸ್ಥಾನದ ವಾರ್ಷಿಕ ಮಹಾಪೂಜೆಯು  ಭಕ್ತಿ ಸಂಭ್ರಮದೊಂದಿಗೆ ಸಂಪನ್ನಗೊಂಡಿದೆ.

ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ದೇವಿಗೆ ನವಕ ಪ್ರಧಾನ ಹೋಮ, ಕಲಶಾಭಿಷೇಕ ನಡೆದು ಸ್ನಾನಿಧ್ಯ ದೇವರಿಗೆ ಪಂಚಾಮೃತ ಅಭಿಷೇಕ ಹಾಗೂ ಪರಿವಾರ ದೇವತೆಗಳಿಗೆ ಹೋಮಪರ್ವ ಹಾಗೂ ಅಮ್ಮನವರಿಗೆ ಗದ್ದಿಗೆ ಏರಿಸಿ ಶ್ರೀ ದೇವಿಯ ಆವೇಶದೊಂದಿಗೆ ಪ್ರಸಾದ ವಿತರಣೆ ಹಾಗೂ ಮಹಾ ಪ್ರಸಾದ ಅನ್ನಸಂತರ್ಪಣೆ   ನಡೆಯಿತು.

ಮಧ್ಯಾಹ್ನ ಮಹಾ ಮಂಗಳಾರತಿ ನಡೆದು ಬಳಿಕ ಸಂಜೆ ತನಕ ಮಹಾ ಅನ್ನದಾನ ಸೇವೆ ನಡೆಯಿತು. ಈ ಪುಣ್ಯ ಕಾರ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀದೇವರ ದರ್ಶನ ಪಡೆದರು.
ಕ್ಷೇತ್ರದ ಧಾನಿಗಳನ್ನು,ವಿಶೇಷ ಅತಿಥಿ ಮೊಕ್ತೇಸರಸರರಾದ ವಾಸುದೇವ ಬಂಜನ್ (ಅರ್ಚಕರು) ಅಧ್ಯಕ್ಷರು, ಟ್ರಸ್ಟಿ ಮಧ್ಯಸ್ಥರು, ಕಾರ್ಯಕಾರಿ ಸಮಿತಿಯವರು, ಮಹಿಳಾ ವಿಭಾಗದ ಸದಸ್ಯರು ಗೌರವಿಸಿದ

ಕ್ಷೇತ್ರದ  ಮೊತ್ತೇಸರರಾದ ವಾಸುದೇವ ಬಂಜನ್ ಅವರು ಭಕ್ತರಿಗೆ ಪ್ರಸಾದ ನೀಡಿದ ಬಳಿಕ ಆಶೀರ್ವಚನದ ನೀಡುತ್ತಾ “ಧರ್ಮ ಕಾರ್ಯದಲ್ಲಿ ನಡೆದಾಗ ಬದುಕು ಪಾವನ, ನಿರಂತರ ಭಗವಂತನ  ಸ್ಮರಣೆ ಮಾಡಿದಾಗ ನಮಗೆ ಸತ್ಕಾರ್ಯಗಳು   ಮಾಡಲು ಸಾಧ್ಯವಾಗುತ್ತದೆ” ಎಂದು ನುಡಿದರು.
  ದಿನೇಶ್ ಕೋಟ್ಯಾನ್ ಜೆರಿಮೆರಿ ಇವರಿಂದ  ಸ್ಯಾಕ್ರೋಫೋನ್, ಚಂಡೆ ಮದ್ದಳೆ ವಾದನದ ಸೇವೆ, ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆಯಿತು.



Related posts

ಜ. 24/25/26 : ಬಿಲ್ಲವರ ಎಸೋಸಿಯೇಷನ್ ಮುಂಬಯಿ ಇದರ ಸಾಂಸ್ಕೃತಿಕ ಉಪ ಸಮಿತಿಯ ಆಶ್ರಯದಲ್ಲಿ ‘ ಶ್ರೀ ಗುರು ನಾರಾಯಣ ತುಳು ನಾಟಕ ಸ್ಪರ್ಧೆ ‘

Mumbai News Desk

ಜೂನ್ 8ರಂದು “ಕನ್ನಡ ವೆಲ್ಫೇರ್ ಸಂಘ” ಜೆರಿಮರಿ, ಕುರ್ಲಾ ಪಶ್ಚಿಮ – ನೂತನ ಸಂಘದ ಉದ್ಘಾಟನೆ.

Mumbai News Desk

ಡಿ.12 ರಿಂದ 23 ರ ವರಗೆ ಸೂಡ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ

Mumbai News Desk

ಇಂದು ಕಾಪು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ. ಜಯಂತ್ ಪಡುಬಿದ್ರಿ ಅವರ ಸಂಸ್ಕರಣೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ವತಿಯಿಂದ ಪೆ. 2 ರಂದು ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಕರ್ನಾಟಕ ಸಂಘ, ಕಲ್ಯಾಣ: 23 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ

Mumbai News Desk