30 C
Mumbai
April 24, 2026
Mumbai News Kannada
ಪ್ರಕಟಣೆ

ಸಾಂತಕ್ರೂಸ್   ಶ್ರೀ ಮಂತ್ರ ದೇವಿ   ದೇವಸ್ಥಾನ ವಾರ್ಷಿಕ ಮಹಾಪೂಜೆ.





ಧರ್ಮ ಕಾರ್ಯದಲ್ಲಿ ಪಾಲ್ಗೊಂಡಾಗ ಬದುಕು ಪಾವನ: ವಾಸುದೇವ ಬಂಜನ್

ಚಿತ್ರ ವರದಿ : ದಿನೇಶ್ ಕುಲಾಲ್

ಧಾರ್ಮಿಕ ಮುಖಂಡರಾಗಿ, ಸಾಮಾಜಿಕ ಸೇವೆಯ ಮೂಲಕ ಸಾಂತಕ್ರೂಸ್ ಪರಿಸರದಲ್ಲಿ ಜನಾನುರಾಗಿರುವ 
ವಾಸುದೇವ ಬಂಜನ್  ಅವರು  ಸಾಂತಕ್ರೂಸ್, ಆಶಾ ಚಾಲ್, ಮಿಲನ್ ಸಬ್ ವೇ ರೋಡ್, ಸಂತಾಕ್ರೂಸ್, (ಪ.) ಇಲ್ಲಿ ಸ್ಥಾಪಿಸಿರುವ ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್ ಆಡಳಿತದ ಶ್ರೀ ಮಂತ್ರದೇವಿ ದೇವಸ್ಥಾನದ ವಾರ್ಷಿಕ ಮಹಾಪೂಜೆಯು  ಭಕ್ತಿ ಸಂಭ್ರಮದೊಂದಿಗೆ ಸಂಪನ್ನಗೊಂಡಿದೆ.

ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ದೇವಿಗೆ ನವಕ ಪ್ರಧಾನ ಹೋಮ, ಕಲಶಾಭಿಷೇಕ ನಡೆದು ಸ್ನಾನಿಧ್ಯ ದೇವರಿಗೆ ಪಂಚಾಮೃತ ಅಭಿಷೇಕ ಹಾಗೂ ಪರಿವಾರ ದೇವತೆಗಳಿಗೆ ಹೋಮಪರ್ವ ಹಾಗೂ ಅಮ್ಮನವರಿಗೆ ಗದ್ದಿಗೆ ಏರಿಸಿ ಶ್ರೀ ದೇವಿಯ ಆವೇಶದೊಂದಿಗೆ ಪ್ರಸಾದ ವಿತರಣೆ ಹಾಗೂ ಮಹಾ ಪ್ರಸಾದ ಅನ್ನಸಂತರ್ಪಣೆ   ನಡೆಯಿತು.

ಮಧ್ಯಾಹ್ನ ಮಹಾ ಮಂಗಳಾರತಿ ನಡೆದು ಬಳಿಕ ಸಂಜೆ ತನಕ ಮಹಾ ಅನ್ನದಾನ ಸೇವೆ ನಡೆಯಿತು. ಈ ಪುಣ್ಯ ಕಾರ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀದೇವರ ದರ್ಶನ ಪಡೆದರು.
ಕ್ಷೇತ್ರದ ಧಾನಿಗಳನ್ನು,ವಿಶೇಷ ಅತಿಥಿ ಮೊಕ್ತೇಸರಸರರಾದ ವಾಸುದೇವ ಬಂಜನ್ (ಅರ್ಚಕರು) ಅಧ್ಯಕ್ಷರು, ಟ್ರಸ್ಟಿ ಮಧ್ಯಸ್ಥರು, ಕಾರ್ಯಕಾರಿ ಸಮಿತಿಯವರು, ಮಹಿಳಾ ವಿಭಾಗದ ಸದಸ್ಯರು ಗೌರವಿಸಿದ

ಕ್ಷೇತ್ರದ  ಮೊತ್ತೇಸರರಾದ ವಾಸುದೇವ ಬಂಜನ್ ಅವರು ಭಕ್ತರಿಗೆ ಪ್ರಸಾದ ನೀಡಿದ ಬಳಿಕ ಆಶೀರ್ವಚನದ ನೀಡುತ್ತಾ “ಧರ್ಮ ಕಾರ್ಯದಲ್ಲಿ ನಡೆದಾಗ ಬದುಕು ಪಾವನ, ನಿರಂತರ ಭಗವಂತನ  ಸ್ಮರಣೆ ಮಾಡಿದಾಗ ನಮಗೆ ಸತ್ಕಾರ್ಯಗಳು   ಮಾಡಲು ಸಾಧ್ಯವಾಗುತ್ತದೆ” ಎಂದು ನುಡಿದರು.
  ದಿನೇಶ್ ಕೋಟ್ಯಾನ್ ಜೆರಿಮೆರಿ ಇವರಿಂದ  ಸ್ಯಾಕ್ರೋಫೋನ್, ಚಂಡೆ ಮದ್ದಳೆ ವಾದನದ ಸೇವೆ, ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆಯಿತು.



Related posts

ಸೆ.5 ರಂದು ಅಂಧೇರಿ ಶ್ರೀ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ತುಳು ಹರಿಕಥೆಯ ನಾದ ಲಹರಿ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ ವತಿಯಿಂದ ಮಾರ್ಚ್ 8ರಂದು ಮಹಿಳಾ ದಿನಾಚರಣೆ: ಪ್ರೊ. ನಳಿನಿ ವಿಶ್ವನಾಥ ಕಾರ್ನಾಡ್ ಸಂಸ್ಮರಣ ಪ್ರಶಸ್ತಿಗೆ ಅಮಿತಾ ಭಾಗ್ವತ್ ಆಯ್ಕೆ

Mumbai News Desk

ರಂಗ ತರಬೇತಿ ಶಿಬಿರಕ್ಕೆ ಆಹ್ವಾನ

Mumbai News Desk

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಜೋಡು ಜೀಟಿಗೆ ನಾಟಕ : ಮಂಗಳೂರಿನ ಪುರಭವನದಲ್ಲಿ ಅದ್ದೂರಿ ಕಾರ್ಯಕ್ರಮ

Mumbai News Desk

ಮುಂಬೈ: ಯಕ್ಷಗಾನದ ಕಂಪನ್ನು ಪಸರಿಸುತ್ತಿರುವ ‘ಯಕ್ಷಪ್ರಿಯ ಬಳಗ’; ಫೆ. 14ರಂದು ಯಕ್ಷನವಮಿ ಸಂಭ್ರಮ

Mumbai News Desk

ಬಂಟರ ಸಂಘ ಮುಂಬಯಿ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ, ಮಾ. 8ಕ್ಕೆ , ಸಮಾಜ ಕಲ್ಯಾಣ ಸಮಿತಿ ವತಿಯಿಂದ ಆರ್ಥಿಕ ಸಹಾಯದ ಅರ್ಜಿ ವಿತರಣೆ,

Mumbai News Desk