30.9 C
Mumbai
June 8, 2026
Mumbai News Kannada
ಪ್ರಕಟಣೆ

ಸಾಂತಕ್ರೂಸ್   ಶ್ರೀ ಮಂತ್ರ ದೇವಿ   ದೇವಸ್ಥಾನ ವಾರ್ಷಿಕ ಮಹಾಪೂಜೆ.





ಧರ್ಮ ಕಾರ್ಯದಲ್ಲಿ ಪಾಲ್ಗೊಂಡಾಗ ಬದುಕು ಪಾವನ: ವಾಸುದೇವ ಬಂಜನ್

ಚಿತ್ರ ವರದಿ : ದಿನೇಶ್ ಕುಲಾಲ್

ಧಾರ್ಮಿಕ ಮುಖಂಡರಾಗಿ, ಸಾಮಾಜಿಕ ಸೇವೆಯ ಮೂಲಕ ಸಾಂತಕ್ರೂಸ್ ಪರಿಸರದಲ್ಲಿ ಜನಾನುರಾಗಿರುವ 
ವಾಸುದೇವ ಬಂಜನ್  ಅವರು  ಸಾಂತಕ್ರೂಸ್, ಆಶಾ ಚಾಲ್, ಮಿಲನ್ ಸಬ್ ವೇ ರೋಡ್, ಸಂತಾಕ್ರೂಸ್, (ಪ.) ಇಲ್ಲಿ ಸ್ಥಾಪಿಸಿರುವ ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್ ಆಡಳಿತದ ಶ್ರೀ ಮಂತ್ರದೇವಿ ದೇವಸ್ಥಾನದ ವಾರ್ಷಿಕ ಮಹಾಪೂಜೆಯು  ಭಕ್ತಿ ಸಂಭ್ರಮದೊಂದಿಗೆ ಸಂಪನ್ನಗೊಂಡಿದೆ.

ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ದೇವಿಗೆ ನವಕ ಪ್ರಧಾನ ಹೋಮ, ಕಲಶಾಭಿಷೇಕ ನಡೆದು ಸ್ನಾನಿಧ್ಯ ದೇವರಿಗೆ ಪಂಚಾಮೃತ ಅಭಿಷೇಕ ಹಾಗೂ ಪರಿವಾರ ದೇವತೆಗಳಿಗೆ ಹೋಮಪರ್ವ ಹಾಗೂ ಅಮ್ಮನವರಿಗೆ ಗದ್ದಿಗೆ ಏರಿಸಿ ಶ್ರೀ ದೇವಿಯ ಆವೇಶದೊಂದಿಗೆ ಪ್ರಸಾದ ವಿತರಣೆ ಹಾಗೂ ಮಹಾ ಪ್ರಸಾದ ಅನ್ನಸಂತರ್ಪಣೆ   ನಡೆಯಿತು.

ಮಧ್ಯಾಹ್ನ ಮಹಾ ಮಂಗಳಾರತಿ ನಡೆದು ಬಳಿಕ ಸಂಜೆ ತನಕ ಮಹಾ ಅನ್ನದಾನ ಸೇವೆ ನಡೆಯಿತು. ಈ ಪುಣ್ಯ ಕಾರ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀದೇವರ ದರ್ಶನ ಪಡೆದರು.
ಕ್ಷೇತ್ರದ ಧಾನಿಗಳನ್ನು,ವಿಶೇಷ ಅತಿಥಿ ಮೊಕ್ತೇಸರಸರರಾದ ವಾಸುದೇವ ಬಂಜನ್ (ಅರ್ಚಕರು) ಅಧ್ಯಕ್ಷರು, ಟ್ರಸ್ಟಿ ಮಧ್ಯಸ್ಥರು, ಕಾರ್ಯಕಾರಿ ಸಮಿತಿಯವರು, ಮಹಿಳಾ ವಿಭಾಗದ ಸದಸ್ಯರು ಗೌರವಿಸಿದ

ಕ್ಷೇತ್ರದ  ಮೊತ್ತೇಸರರಾದ ವಾಸುದೇವ ಬಂಜನ್ ಅವರು ಭಕ್ತರಿಗೆ ಪ್ರಸಾದ ನೀಡಿದ ಬಳಿಕ ಆಶೀರ್ವಚನದ ನೀಡುತ್ತಾ “ಧರ್ಮ ಕಾರ್ಯದಲ್ಲಿ ನಡೆದಾಗ ಬದುಕು ಪಾವನ, ನಿರಂತರ ಭಗವಂತನ  ಸ್ಮರಣೆ ಮಾಡಿದಾಗ ನಮಗೆ ಸತ್ಕಾರ್ಯಗಳು   ಮಾಡಲು ಸಾಧ್ಯವಾಗುತ್ತದೆ” ಎಂದು ನುಡಿದರು.
  ದಿನೇಶ್ ಕೋಟ್ಯಾನ್ ಜೆರಿಮೆರಿ ಇವರಿಂದ  ಸ್ಯಾಕ್ರೋಫೋನ್, ಚಂಡೆ ಮದ್ದಳೆ ವಾದನದ ಸೇವೆ, ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆಯಿತು.



Related posts

ವಸಯಿ ತಾಲೂಕು ಮೊಗವೀರ ಸಂಘ : ನಾಳೆ (ಮಾ.16) ಮಹಿಳಾ ದಿನಾಚರಣೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಮೂಲತ್ವ ದಸರಾ ಮಹೋತ್ಸವ

Mumbai News Desk

ಸಾಂತಾಕ್ರೂಸ್ :  ಶ್ರೀ ಮಂತ್ರ ದೇವಿ ದೇವಸ್ಥಾನದಲ್ಲಿ ಅ 3 ರಿಂದ 11 ವರೆಗೆ ನವರಾತ್ರಿ ಉತ್ಸವ.

Mumbai News Desk

ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಏಪ್ರಿಲ್ 24 ರಿಂದ 26 ರವರೆಗೆ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಿಲಿ : ನಾಳೆ( ಅ. 15)   ಶಿಯಳಾಭಿಷೇಕ ಸೇವೆ

Mumbai News Desk

ಫೆ.1 ರಿಂದ 3 ರ ವರಗೆ ಶ್ರೀ ಶನೀಶ್ವರ ಮಂದಿರ (ರಿ), ಭಟ್ಟಿಪಾಡದ 40ನೇ ವಾರ್ಷಿಕ ಮಹಾಪೂಜೆ.

Mumbai News Desk