26.3 C
Mumbai
March 7, 2026
Mumbai News Kannada
ಪ್ರಕಟಣೆ

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 15 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.





ಸುದ್ದಿ ವಿವರ : ಪಿ.ಆರ್.ರವಿಶಂಕರ್

ಬೊಯಿಸರ್ :   

ಇದೇ ಡಿಸೆಂಬರ್ ತಾ. 27 ನೆಯ ಶನಿವಾರದಂದು  ಪಾಲ್ಘರ್ ಜಿಲ್ಲೆಯ ಬೊಯಿಸರ್ ನಲ್ಲಿಯ  ಸಂತಶ್ರೇಷ್ಟ ಗುರು ನಿತ್ಯಾನಂದ ಸ್ವಾಮಿ ಮಂದಿರದಲ್ಲಿ  14 ನೆಯ ವರ್ಷದ ಪ್ರತಿಷ್ಟಾಪನಾ ಉತ್ಸವವು ಜರಗಲಿದೆ.

ಪ್ರಾತಃ ಕಾಲದ 6 ಗಂಟೆಗೆ ಸಂಕಲ್ಪ ಪೂಜೆ ಹಾಗೂ ಗಣಹೋಮದೊಂದಿಗೆ ಕಾರ್ಯಕ್ರಮ ಆರಂಭವಾಗುವುದು. 7. ಗಂಟೆಗೆ  ನಿತ್ಯಾನಂದ ಬಾಬಾ ಪಂಚಾಮೃತ ಅಭಿಷೇಕ ಮತ್ತು ಪ್ರಾತಃ ಆರತಿಯು ಸರ್ವ ಭಕ್ತಾಭಿಮಾನಿಗಳ ಭಾಗವಹಿಸುವಿಕೆಯಲ್ಲಿ ಜರಗಲಿದೆ.

ಬೆಳಿಗ್ಗೆ 9 ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಸದ್ಗುರು ನಿತ್ಯಾನಂದ ಭಜನಾ ಮಂಡಳಿಯವರಿಂದ ಭಕ್ತಿ ಗೀತೆ ಹಾಗೂ ಭಜನಾ ಕಾರ್ಯಕ್ರಮವಿರುತ್ತದೆ. 12 ಗಂಟೆಗೆ ಮದ್ಯಾಹ್ನದ ಆರತಿಯ ಬಳಿಕ ಅನ್ನಸಂತರ್ಪಣೆ ಜರಗಲಿದೆ.

ಸಂಜೆ 6 ಗಂಟೆಗೆ ನಿತ್ಯಾನಂದ ಬಾಬಾ ಇವರ ಪಲ್ಲಕ್ಕಿಯಲ್ಲಿ ಭವ್ಯ ಮೆರವಣಿಗೆ ಇದ್ದು ಸಂಜೆ 8 ಗಂಟೆಯ ಮಂಗಳಾರತಿಯೊಂದಿಗೆ ಕಾರ್ಯಕ್ರಮ ಪೂರ್ಣಗೊಳ್ಳಲಿದೆ.

ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವ ಈ ಪೂರ್ಣ ದಿನದ ಪ್ರತಿಷ್ಟಾಪನೋತ್ಸವಕ್ಕೆ ಭಕ್ತಾಭಿಮಾನಿಗಳೆಲ್ಲರೂ ಸಹ ಕುಟುಂಬ ಆಗಮಿಸಿ ಭಾಗವಹಿಸಬೇಕಾಗಿ ಶ್ರೀಮತಿ ಸುಹಾಸಿನಿ ದಾಮೋದರ್ ನಾಯ್ಕ್ ಹಾಗೂ ಸದ್ಗುರು ನಿತ್ಯಾನಂದ ಸೇವಾ ಟ್ರಸ್ಟ್ ವಿಶ್ವಸ್ಥ ಮಂಡಳಿಯವರು ಸಮಸ್ಥ ಭಕ್ತಮಂಡಳಿಯ ಪರವಾಗಿ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.

ಸುದ್ದಿ ವಿವರ : ಪಿ.ಆರ್.ರವಿಶಂಕರ್

            8483980035



Related posts

ಫೆ. 19 ರಂದು ಡೊಂಬಿವಲಿ ಶ್ರೀಮಹಾವಿಷ್ಣು ಮಂದಿರದಲ್ಲಿ “ದಶಾವತಾರ “ಹರಿನಾಮವಳಿ – ಶುಭ ಚಿಂತನ

Mumbai News Desk

ಮಾರ್ಚ್ 1ರಂದು ಗೋರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಸಮಾರಂಭ : ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ಬಿಲ್ಲವರ ಅಸೋಸಿಯೇಷನ್ ಭಾಯಂದರ್ ‌ ಸ್ಥಳೀಯ ಕಚೇರಿ:ಸೆ.13 ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ

Mumbai News Desk

ಮೀರಾ ರೋಡ್   ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೂ.14 : 35ನೇ ವಾರ್ಷಿಕ ಮಹಾಪೂಜೆ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ(ರಿ) ಮುಂಬಯಿ : ಫೆ. 16 ರಂದು “ಅರಸಿನ ಕುಂಕುಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ”

Mumbai News Desk

ಫೆ. 04 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತ ದಾನ ಹಾಗೂ ಉಚಿತ ಕೀಳು – ಮೂಳೆ ತಪಾಸಣಾ ಶಿಬಿರ.

Mumbai News Desk