July 23, 2026
Mumbai News Kannada
ಸುದ್ದಿ

ದುಬೈನಲ್ಲಿ ಕನ್ನಡಾಭಿಮಾನಕ್ಕೆ ಪ್ರಧಾನಿ ಮೋದಿ ಶ್ಲಾಘನೆ







ತಮ್ಮ 129 ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ, ಅವರು ತಮ್ಮ ನೆಲದ ಭಾಷೆಯಾದ ಕನ್ನಡದಿಂದ ದೂರ ಆಗುತ್ತಿದ್ದಾರೆಯೇ ಅನ್ನೋ ಆತಂಕ ದುಬೈ ಕನ್ನಡಿಗರಿಗೆ ಬಂತು. ಆಗಿನಿಂದಲೇ ಅವರು ದುಬೈನಲ್ಲಿ ಕನ್ನಡ ಪಾಠ ಶಾಲೆ ಆರಂಭ‌ ಮಾಡಿದರು ಎಂದು ತಿಳಿಸಿದ್ದಾರೆ.

ಕನ್ನಡ ಪಾಠಶಾಲೆಯಲ್ಲಿ ಮಕ್ಕಳಿಗೆ ಕನ್ನಡ ಭಾಷೆ ಕಲಿಸುತ್ತಿದ್ದಾರೆ. ಕನ್ನಡ ಓದು, ಬರಹ, ಮಾತಾಡೋದು ಕಲಿಸ್ತಿದ್ದಾರೆ. ಈಗ ಆ ಪಾಠಶಾಲೆಯಲ್ಲಿ ಒಂದು ಸಾವಿರ ಮಕ್ಕಳಿಗೆ ಕನ್ನಡ ಭಾಷೆ ಕಲಿಸುವ ಕೆಲಸ ಆಗ್ತಿದೆ. ಈ ಮೂಲಕ‌ ದುಬೈನಲ್ಲಿ ಇರುವ ಕನ್ನಡಿಗರು ಭಾಷಾಭಿಮಾನ ಮೆರೆಯುತ್ತಿದ್ದಾರೆ. ಕನ್ಮಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ, ಭಾಷೆ ನಮ್ಮ ಹೆಮ್ಮೆಯಾಗಿದೆ ಎಂದು ಹಾಡಿಹೊಗಳಿದ್ದಾರೆ.

ಫಿಜಿಯಲ್ಲಿ ತಮಿಳು ದಿನ ಆಚರಣೆ ಬಗ್ಗೆಯೂ ಮೋದಿ ಮಾತನಾಡಿದ್ದಾರೆ. ಫಿಜಿಯಲ್ಲಿ ಭಾರತೀಯ ಭಾಷೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಶ್ಲಾಘನೀಯ ಉಪಕ್ರಮ ನಡೆಯುತ್ತಿದೆ. ಅಲ್ಲಿನ ಹೊಸ ಪೀಳಿಗೆಯನ್ನು ತಮಿಳು ಭಾಷೆಯೊಂದಿಗೆ ಸಂಪರ್ಕಿಸಲು ವಿವಿಧ ಹಂತಗಳಲ್ಲಿ ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಕಳೆದ ತಿಂಗಳು, ಫಿಜಿಯ ರಾಕಿರಾಕಿ ಪ್ರದೇಶದ ಒಂದು ಶಾಲೆಯು ತನ್ನ ಮೊದಲ ತಮಿಳು ದಿನ ಆಚರಣೆಯನ್ನು ನಡೆಸಿತು. ಈ ದಿನವು ಮಕ್ಕಳಿಗೆ ತಮ್ಮ ಭಾಷೆಯ ಬಗ್ಗೆ ತಮ್ಮ ಹೆಮ್ಮೆಯನ್ನು ವ್ಯಕ್ತಪಡಿಸಲು ವೇದಿಕೆಯನ್ನು ಒದಗಿಸಿತು. ಅವರು ಕವಿತೆಗಳನ್ನು ವಾಚಿಸಿದರು, ಭಾಷಣಗಳನ್ನು ನೀಡಿದರು ಎಂದು ಪ್ರಧಾನಿ ಮಾತನಾಡಿದ್ದಾರೆ.



Related posts

ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Mumbai News Desk

ಕಾಪು ರಂಗತರಂಗದ ಸ್ಥಾಪಕ ಸದಸ್ಯ, ತುಳು ನಾಟಕ ರಂಗದ ಪ್ರತಿಭಾನ್ವಿತ ನಟ ಸುಜಿತ್ ಶೆಟ್ಟಿ ಪಾದೂರು ನಿಧನ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ, ಮುಂಡ್ಕೂರು ವತಿಯಿಂದ ಏರ್ ಕಂಡಿಷನರ್ ಸ್ಫೋಟಗೊಂಡ ದುರ್ಘಟನೆಯಲ್ಲಿ ಮೃತರಾದ ತಾರಾನಾಥ ವಿ ಬಂಜನ್ ಅವರಿಗೆ ಶ್ರದ್ಧಾಂಜಲಿ.

Mumbai News Desk

ಪಶ್ಚಿಮ ಬಂಗಾಳ ವಿಧಾನಸಭಾ ವಿಸರ್ಜನೆ: ಮಮತಾ ಬ್ಯಾನರ್ಜಿ ರಾಜೀನಾಮೆ ನಿರಾಕರಣೆ ಹಾಗೂ ರಾಜ್ಯಪಾಲರ ಕಠಿಣ ಕ್ರಮ

Mumbai News Desk

19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ – 2024

Mumbai News Desk

ಪೆರುವಾಯಿ ನಾರಾಯಣ ಭಟ್ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ.

Mumbai News Desk