27.7 C
Mumbai
July 23, 2026
Mumbai News Kannada
ಸುದ್ದಿ

ಮತ್ಸ್ಯಗಂಧ ರೈಲಿನಲ್ಲಿ 45.8.ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ







ಮುಂಬೈನಿಂದ ಉಡುಪಿಗೆ ಕುಟುಂಬ ಸಮೇತ ಪ್ರಯಾಣಿಸುತ್ತಿದ್ದ ವೃದ್ದ ಮಹಿಳೆಯೊಬ್ಬರು ರೈಲಿನಲ್ಲಿ ಮಲಗಿದ್ದಾಗ ಅವರ ಚಿನ್ನಾಭರಣ ಮತ್ತು ನಗದು ದೋಚಲ್ಪಟ್ಟ ಘಟನೆ ನಡೆದಿದೆ. ಮಹಾರಾಷ್ಟ್ರದ ಮುಂಬೈನ ಚೆಂಬೂರು ನಿವಾಸಿಯಾಗಿರುವ 78 ವರ್ಷದ ಹೆಲ್ಮಿನಾ ಸಲಿನ್ಸ್ ಎಂಬ ದೂರುದಾರರು ಡಿಸೆಂಬರ್ 26ರಂದು ತಮ್ಮ ಮಗಳು ಮತ್ತು ಅಳಿಯ ಮತ್ತು ಮೊಮ್ಮಗಳೊಂದಿಗೆ ಮತ್ಸ್ಯಗಂಧ ಎಕ್ಸ್ಪ್ರೆಸ್ ನಲ್ಲಿ(12619) ಉಡುಪಿಗೆ ಪ್ರಯಾಣಿಸುತ್ತಿದ್ದರು. ಅವರು ಚಿನ್ನದ ಆಭರಣಗಳನ್ನು ಹೊಂದಿರುವ ವ್ಯಾನಿಟಿ ಬ್ಯಾಗ್, ಬಟ್ಟೆಗಳನ್ನು ಹೊಂದಿರುವ ಕೈ ಚೀಲ ಮತ್ತು ಸೂಟ್ಕೇಸ್ ಗಳನ್ನು ಹೊಂದಿದ್ದರು.
​ ದೂರುದಾರರು ಆಭರಣಗಳಿದ್ದ ವ್ಯಾನಿಟಿ ಬ್ಯಾಗ್ ಅನ್ನು ತಮ್ಮ ತಲೆಯ ಬಳಿ ಇಟ್ಟುಕೊಂಡು ರಾತ್ರಿ ಮಲಗಿದ್ದರು.
ಡಿಸೆಂಬರ್ 27 ರಂದು ಬೆಳಿಗ್ಗೆ ಸುಮಾರು 6.10 ರ ಸುಮಾರಿಗೆ, ರೈಲು ಮುರುಡೇಶ್ವರ ರೈಲ್ವೆ ನಿಲ್ದಾಣವನ್ನು ಹಾದು ಹೋಗುತ್ತಿದ್ದಾಗ ದೂರುದಾರರ ಮಗಳು ವ್ಯಾನಿಟಿ ಬ್ಯಾಗ್ ತನ್ನ ತಾಯಿಯ ತಲೆ ಬಳಿ ಇಲ್ಲದಿರೋದನ್ನು ಗಮನಿಸಿದರು. ಸ್ವಲ್ಪ ಸಮಯದ ಬಳಿಕ ಬ್ಯಾಗ್ ಟಿ ಟೇಬಲ್ ಬಳಿ ಪತ್ತೆಯಾಯಿತು. ಬ್ಯಾಗ್ ಪರಿಶೀಲಿಸಿದಾಗ 45. 8 ಲಕ್ಷ ರೂಪಾಯಿ ಮೌಲ್ಯದ 408 ಗ್ರಾಂ ತೂಕದ ಚಿನ್ನಾಭರಣ ಮತ್ತು 15,000 ನಗದು ಕದ್ದಿರುವುದು ಕಂಡು ಬಂದಿದೆ, ದೂರಿನ ಆಧಾರದ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
​ಈ ಬಗ್ಗೆ ಅನಾಮಧೇಯ ವ್ಯಕ್ತಿಗಳ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈಯಿಂದ ಉಡುಪಿ-ಮಂಗಳೂರಿಗೆ ಪ್ರಯಾಣಿಸುವ ಸಂಧರ್ಭದಲ್ಲಿ ಇಂತಹ ಕಳ್ಳತನದ ಎಷ್ಟೋ ಘಟನೆಗಳು ನಡೆದರೂ, ಪ್ರಯಾಣಿಕರು ಇನ್ನೂ ಜಾಗ್ರತರಾಗದಿರುವುದು ಖೇದಕರ.​ರೈಲು ಪ್ರಯಾಣದ ಸಮಯದಲ್ಲಿ ಅಮೂಲ್ಯ ವಸ್ತುಗಳ ಬಗ್ಗೆ ಹೆಚ್ಚಿನ ಜಾಗರೂಕತೆ ವಹಿಸುವುದು ಅವಶ್ಯಕ ಎಂದು ಈ ಘಟನೆ ಮತ್ತೊಮ್ಮೆಎಚ್ಚರಿಸುತ್ತದೆ.



Related posts

ದುಬಾಯಿಯಲ್ಲಿ ಸಾಧಕರಿಗೆ ಸಂಮಾನದ ಜೊತೆ ದಶಮಾನದ ಸಂಭ್ರಮಜೂ.29 ರಂದು ಏಳು ಮಂದಿ ಸಾಧಕರಿಗೆ ಸನ್ಮಾನ ಮೂರು ಸಾಧಕ ಸಂಸ್ಥೆಗಳಿಗೆ ಗೌರವ

Mumbai News Desk

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

ಮಂಗಳೂರಿನ ಕುಲಾಲ ಭವನದಲ್ಲಿ ಮುಂಬಯಿ ಕುಲಾಲರ ಸ್ನೇಹ ಸಮ್ಮಿಲನ

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರ :17ನೇ ವರ್ಧಂತ್ಯುತ್ಸವ ಸಂಪನ್ನ  

Mumbai News Desk

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಮಯೂರ್ ಉಳ್ಳಾಲ್ ಆಯ್ಕೆ

Mumbai News Desk