ಮೀರಾರೋಡ್ (ಡಿ.30): ಇಲ್ಲಿನ ಮೀರಾಗಾಂವ್ನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹೊಸ ವರ್ಷದ ಮೊದಲ ದಿನವಾದ ಜನವರಿ 1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯು ಸಂಭ್ರಮದಿಂದ ಜರುಗಲಿದೆ.
ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಿಮಂತೂರು ಮಜಲಗುತ್ತು ಬಾಬಾ ರಂಜನ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ನಡೆಯುವ ಈ ಧಾರ್ಮಿಕ ಕಾರ್ಯಕ್ರಮಕ್ಕೆ ದೇವಸ್ಥಾನದ ಪ್ರಧಾನ ಅರ್ಚಕ ಸಾಣೂರು ಸಾಂತಿಂಜ ಜನಾರ್ದನ್ ಭಟ್ ಅವರು ಪೌರೋಹಿತ್ಯ ವಹಿಸಲಿದ್ದಾರೆ.
ಕಾರ್ಯಕ್ರಮದ ವಿವರ:
- ಸಂಜೆ 6.00 ರಿಂದ 7.30: ಶ್ರೀ ಸತ್ಯನಾರಾಯಣ ಮಹಾಪೂಜೆ.
- ಸಂಜೆ 7.30 ರಿಂದ 8.00: ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ.
- ರಾತ್ರಿ 8.00ಕ್ಕೆ: ಮಹಾ ಮಂಗಳಾರತಿ.
- ರಾತ್ರಿ 8.30ಕ್ಕೆ: ಮಹಾ ಪ್ರಸಾದ ವಿತರಣೆ (ಅನ್ನದಾನ).
ದೇವಸ್ಥಾನದ ಸ್ಥಾಪಕರಾದ ದಿ. ವಿಶ್ವನಾಥ ಪೂಂಜ ಅವರ ಪರಿವಾರದವರು, ಕೃಷ್ಣ ಶೆಟ್ಟಿ ದಂಪತಿ, ಪ್ರಧಾನ ಅರ್ಚಕ ಸಾಂತಿಂಜ ಮಾಧವ್ ಭಟ್, ಶ್ರೀ ಮಹಾಲಿಂಗೇಶ್ವರ ಟ್ರಸ್ಟ್ನ ಸದಸ್ಯರು ಹಾಗೂ ಮೀರಾ ಸೊಸೈಟಿ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಭಕ್ತಿಪೂರ್ವಕ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ಕೋರಲಾಗಿದೆ.




