September 6, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ವಿಶೇಷ ಗುರು ಪೂಜೆ. ನಾರಾವಿ ಸತೀಶ್ ಸ್ವಾಮಿಯ ಸನ್ಮಾನ





ಚಿತ್ರ,ವರದಿ: ಉಮೇಶ್ ಕೆ. ಅಂಚನ್

ಮುಂಬಯಿ, ಜ.2:ಬಿಲ್ಲವರ ಅಸೋಸಿಯೇಶನ್ ಇದರ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ನೂತನ ವರ್ಷದ ಮೊದಲ ಗುರುವಾರದ ವಿಶೇಷ ಗುರುಪೂಜೆಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.

ಆರಂಭದಲ್ಲಿ ಸ್ಥಳೀಯ ಸದಸ್ಯರಿಂದ ಭಜನೆ ಹಾಗೂ ಫೋರ್ಟ್ ವೆಸ್ಟರ್ನ್ ಇಂಡಿಯಾ ಶನಿ ಪೂಜಾ ಸಮಿತಿಯ ಪ್ರಧಾನ ಅರ್ಚಕರಾದ ಸತೀಶ್ ಕೋಟ್ಯಾನ್ ರವರಿಂದ ಗುರು ಪೂಜೆ ಹಾಗೂ ಮಂಗಳಾರತಿ ನಡೆಯಿತು.

ಪ್ರಸಾದ ವಿತರಣೆ ಹಾಗೂ ಭಾಯಂದರ್ ಪಶ್ಚಿಮದ ಧನರಾಜ್ ಶೆಟ್ಟಿ, ಹೇಮಾ ಜೆ. ಶೆಟ್ಟಿಯವರು ಸೇವಾ ರೂಪದಲ್ಲಿ ಅನ್ನಸಂತರ್ಪಣೆ ನೀಡಿ ಸಹಕರಿಸಿದ್ದರು.


ಈ ಸಂದರ್ಭದಲ್ಲಿ 18ನೇ ಬಾರಿ ಶಬರಿಮಲೆ ಯಾತ್ರೆ ಗೈಯುತ್ತಿರುವ ಸ್ಥಳೀಯ ಕಚೇರಿಯ ಉಪಕಾರ್ಯಾಧ್ಯಕ್ಷ ನಾರಾವಿ ಸತೀಶ್ ಪೂಜಾರಿಯವರನ್ನು ಸನ್ಮಾನಿಸಲಾಯಿತು. ಹಾಗೂ ಇತ್ತೀಚೆಗೆ ಬಿಲ್ಲವರ ಅಸೋಸಿಯೇಶನ್ ಇದರ ಕೋಟಿ ಚೆನ್ನಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ ಕಚೇರಿಯ ಜೊತೆ ಕಾರ್ಯದರ್ಶಿ ಜಯಶ್ರೀ ಸಂತೋಷ್ ಕರ್ಕೇರ , ಭಗವದ್ಗೀತೆ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ಪಡೆದ ಸಾಗರ್ ಪೂಜಾರಿ, ಅನ್ನಸಂತರ್ಪಣೆ ನೀಡಿ ಸಹಕರಿಸಿದ ಹೇಮಾ ಜೆ.ಶೆಟ್ಟಿ ಹಾಗೂ ಪೂಜಾ ಕಾರ್ಯವನ್ನು ನಡೆಸಿಕೊಟ್ಟ ಸತೀಶ್ ಕೋಟ್ಯಾನ್ ರವರನ್ನು ಸತ್ಕರಿಸಲಾಯಿತು.


ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಶೇಖರ್ ರಾಮ ಪೂಜಾರಿ , ಉಪ ಕಾರ್ಯಾಧ್ಯಕ್ಷ ಸುಧಾಕರ್ ಜಿ.ಪೂಜಾರಿ(ಗುರುಸ್ವಾಮಿ),ಮುಖ್ಯ ಸಲಹೆಗಾರ ಚಿತ್ರಾಪು ಕೆ.ಎಮ್.ಕೋಟ್ಯಾನ್, ಜೊತೆ ಕಾರ್ಯದರ್ಶಿ ದೀಪಕ್ ಕರ್ಕೇರ, ಕೋಶಾಧಿಕಾರಿ ಹರೀಶ್ ಪಲಿಮಾರು, ಜೊತೆ ಕೋಶಾಧಿಕಾರಿ ಅಶೋಕ್ ಪೂಜಾರಿ,ಯುವ ವಿಭಾಗದ ಗಣೇಶ್ ಅಂಚನ್, ಶ್ರೀನಿವಾಸ್ ಗುರುಸ್ವಾಮಿ ದಹಿಸರ್ ಸುನಿಲ್ ಸ್ವಾಮಿ ಹಾಗೂ ಕಚೇರಿಯ ಪದಾಧಿಕಾರಿಗಳು, ವಿಶೇಷ ಆಮಂತ್ರಿತರು, ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ್ದರು.
.



Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರಾಚಿ ಭಂಡಾರಿ ಗೆ ಶೇ 93.40 ಅಂಕ.

Mumbai News Desk

ಬಿಲ್ಲವರ ಅಸೋಸಿಯೇಶನ್ , ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿ : 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Mumbai News Desk

ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯಲ್ಲಿ, ಬಂಟರ ಸಂಘ ಮುಂಬಯಿ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಧನ ಸಹಾಯ ವಿತರಣೆ ಹಾಗೂ ಟಾಟಾ ಐಐಎಸ್ – ಸಂಜೀವಿನಿ ಲೋಕಾರ್ಪಣೆ

Mumbai News Desk

ಅಯ್ಯಪ್ಪ ಸ್ವಾಮಿ ಭಕ್ತವೃಂದ ಚೆಂಬೂರು, ವಾರ್ಷಿಕ ಪಡಿಪೂಜೆ ಮತ್ತು ಮಹಾಪೂಜೆ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಎಂಟನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಛೇರಿಯಲ್ಲಿ ಗಣರಾಜ್ಯೋತ್ಸವ

Mumbai News Desk