32 C
Mumbai
April 24, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 65ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭ





ಸಂತಾಕ್ರೂಜ್ : ಹೊರನಾಡ ಕನ್ನಡಿಗರ ಪ್ರತಿಷ್ಟಿತ ಜಾತಿಯ ಸಂಘ-ಸಂಸ್ಥೆಗಳಲ್ಲಿ ಒಂದಾದ ಬಿಲ್ಲವರ ಅಸೋಸಿಯೇಶನ್ ಮುಂಬೈ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 65ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭವು ದಿನಾಂಕ 10 ಜನೇವರಿ 2026ರ ಶನಿವಾರ ಸಾಯಂಕಾಲ 4. 00 ಗಂಟೆಯ ಸುಮಾರಿಗೆ ಸಾಂತಾಕ್ರೂಜ್ ಪೂರ್ವದ ನೆಹರು ಮಾರ್ಗದಲ್ಲಿರುವ ಬಿಲ್ಲವ ಭವನದ 5ನೇ ಮಹಡಿಯ ಗುರು ನಾರಾಯಣ ಆಡಿಟೋರಿಯಂ ನಲ್ಲಿ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಈ ಶಾಲೆಯ ವಾರ್ಷಿಕೋತ್ಸವವು ಮಾತೃ ಸಂಸ್ಥೆಯ ಅಧ್ಯಕ್ಷ ಶ್ರೀ ಹರೀಶ ಜಿ. ಅಮೀನ್ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.

ಶಾಲೆಯ 65ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭದಲ್ಲಿ ಗೌರವ ಅಧ್ಯಕ್ಷ ಶ್ರೀ ಎಲ್. ವಿ. ಅಮೀನ್ ಮುಖ್ಯ ಅತಿಥಿಗಳಾಗಿ ಶ್ರೀಮತಿ ಜ್ಯೋತಿ ರವಿ. ಹೊಸ್ಕೋಟಿ (ಸಂಸ್ಥಾಪಕರು: ಪೋರ್ ಕ್ಲಾಜ್ ಅಕಾಡೆಮಿ IB ಮತ್ತು IGCSE ಕೋಚಿಂಗ್ ಡೊಂಬಿವಲಿ ಪೂರ್ವ) ಮತ್ತು ಗೌರವ ಅತಿಥಿಗಳಾಗಿ ಶ್ರೀ.ಸಿ ಎ.ಪ್ರಕಾಶ ಶೆಟ್ಟಿ (ಚಾರ್ಟೆಡ್ ಅಕೌಂಟೆಂಟ್ ಸಂತಾಕ್ರೂಜ್ ಪೂರ್ವ) ಇನ್ನೋರ್ವ ಅತಿಥಿಗಳಾದ
ಡಾ ಈಶ್ವರ್ ಅಲೆವೂರು ( ಪ್ರದಾನ ಸಂಪಾದಕರು: ಅಕ್ಷಯ ಮಾಸಿಕ ಪತ್ರಿಕೆ) ಆಶೀರ್ವಚನ: ಶ್ರೀ ಅಶೋಕ ಪುರೋಹಿತ (ಅಂತಾರಾಷ್ಟ್ರೀಯ ಖ್ಯಾತ ವಾಸ್ತು ಶಾಸ್ತ್ರಜ್ಞರು ಮತ್ತು ಜ್ಯೋತಿಷ್ಯರು) ಭಾಗವಹಿಸಲಿದ್ದಾರೆ.

ಶಾಲೆಯ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು,ಕನ್ನಡಾಭಿಮಾನಿಗಳು,ಶಿಕ್ಷಣ ಪ್ರೇಮಿಗಳು,ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಮಾತೃಸಂಸ್ಥೆಯ ಗೌರವ ಪ್ರದಾನ ಕಾರ್ಯದರ್ಶಿ ಶ್ರೀ ಹರೀಶ ಜಿ ಸಾಲಿಯಾನ್,ಗೌರವ ಪ್ರದಾನ ಕೋಶಾಧಿಕಾರಿ ಮತ್ತು ಶಾಲಾ ಸಮಿತಿಯ ಕಾರ್ಯಧ್ಯಕ್ಷ ಶ್ರೀ ರವಿ ಸನಿಲ್ ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ಶಕುಂತಲಾ ಕೆ. ಕೋಟ್ಯಾನ್ ಹಾಗೂ ಪದಾಧಿಕಾರಿಗಳು ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ ಸಲಹೆಗಾರ ಬನ್ನಂಜೆ ರವೀಂದ್ರ ಅಮೀನ ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಮಲ್ಲಿಕಾರ್ಜುನ ಈ.ಬಡಿಗೇರ ಮತ್ತು ಶಿಕ್ಷಕ ವೃಂದವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾರ್ಯಕ್ರಮದ ಮೊದಲು ಲಘು ಉಪಹಾರ ಮತ್ತು ರಾತ್ರಿ ಪ್ರೀತಿ ಭೋಜನದ ವ್ಯವಸ್ಥೆ ಮಾಡಲಾಗಿದೆ.

===============================

===============================



Related posts

ಡೊಂಬಿವಲಿ: ಶ್ರೀ ಜೈ ಭವಾನಿ ಶನೀಶ್ವರ ಮಂದಿರದಲ್ಲಿ ಶನಿ ಮಹಾಪೂಜಾ ಮಹೋತ್ಸವ

Mumbai News Desk

ಮೆಂಡನ್ ಮೂಲಸ್ಥಾನ ಮುಂಬಯಿ ಶಾಖೆ 92ನೇ ವಾರ್ಷಿಕ ಮಹಾಸಭೆ.

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಹಿಳಾ ವಿಭಾಗದ ‘ಹಳದಿ ಕುಂಕುಮ’ ಕಾರ್ಯಕ್ರಮ: ಸ್ತ್ರೀ ಶಕ್ತಿಯ ಸೌಹಾರ್ದ ಸಮಾಗಮ

Mumbai News Desk

ಬಂಟರ ಸಂಘ,  ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಆಟಿದ ಪೊರ್ಲ ತಿರ್ಲ್ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೇಳೈವಿಸಿದ ಜಾನಪದ ಸಂಸ್ಕೃತಿ

Mumbai News Desk

ಪದ್ಮನಾಭ ಕಟೀಲುರವರು ಆಯೋಜನೆಯಲ್ಲಿ  ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ 25ನೇ ಸಂಸ್ಮಯಣೆಯಲಿ ಗಲ್ಫ್ ರಾಷ್ಟ್ರದ ಸಾಧಕರಿಗೆ ಗೌರವಾರ್ಥನೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಸಮಾಜದ ಮಹಿಳೆಯರಿಗಾಗಿ ಆಯೋಜಿಸಿದ ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ :-

Mumbai News Desk