July 23, 2026
Mumbai News Kannada
ಸುದ್ದಿ

ಉಡುಪಿ : ಡಿವೈನ್ ಪಾರ್ಕ್ ಸಂಸ್ಥಾಪಕ, ಆಧ್ಯಾತ್ಮಿಕ ಚಿಂತಕ ಎ ಚಂದ್ರಶೇಖರ್ ಉಡುಪ ನಿಧನ







ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟ್ರೋದ್ಧಾರದ ಕನಸನ್ನು ಕಾರ್ಯರೂಪಕ್ಕೆ ತರುವ ಮಹತ್ತರ ಧ್ಯೇಯದೊಂದಿಗೆ ಕಳೆದ ಸುಮಾರು ಐದು ದಶಕಗಳಿಂದ ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ, ಖ್ಯಾತ ವೈದ್ಯ ಹಾಗೂ ಆಧ್ಯಾತ್ಮಿಕ ಚಿಂತಕ ಎ. ಚಂದ್ರಶೇಖರ್ ಉಡುಪ (75) ಅವರು ಹೃದಯಾಘಾತದಿಂದ ಜ.7ರ ಬೆಳಗಿನ ಜಾವ ದೈವಾಧೀನರಾಗಿದ್ದಾರೆ.

ವೃತ್ತಿಯಲ್ಲಿ ವೈದ್ಯರಾಗಿದ್ದ ಎ. ಚಂದ್ರಶೇಖರ್ ಉಡುಪ ಅವರು, ಎಪ್ಪತ್ತರ ದಶಕದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲೇ ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಆಳವಾಗಿ ಪ್ರಭಾವಿತರಾಗಿದ್ದರು. ಇದೇ ಪ್ರೇರಣೆಯಿಂದ ಆರೋಗ್ಯ, ಅಧ್ಯಾತ್ಮ ಮತ್ತು ಮಾನವೀಯ ಮೌಲ್ಯಗಳ ಸಮನ್ವಯದ ಮೂಲಕ ಸಮಾಜ ಹಾಗೂ ರಾಷ್ಟ್ರಕ್ಕೆ ಒಳಿತು ಮಾಡುವ ಸಂಕಲ್ಪದೊಂದಿಗೆ “ಡಿವೈನ್ ಪಾರ್ಕ್” ಸಂಸ್ಥೆಯನ್ನು ಸ್ಥಾಪಿಸಿದರು.

ಡಿವೈನ್ ಪಾರ್ಕ್ ಮೂಲಕ ಯೋಗ, ಪ್ರಕೃತಿ ಚಿಕಿತ್ಸೆ, ಆಯುರ್ವೇದ ಹಾಗೂ ಆಧ್ಯಾತ್ಮಿಕ ಚಿಕಿತ್ಸಾ ಕ್ರಮಗಳನ್ನು ಸಮಾಜದ ವಿವಿಧ ವರ್ಗಗಳಿಗೆ ತಲುಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಆರೋಗ್ಯ ಕೇವಲ ದೇಹಕ್ಕೆ ಸೀಮಿತವಲ್ಲ, ಅದು ಮನಸ್ಸು ಮತ್ತು ಆತ್ಮದ ಸಮತೋಲನದಲ್ಲಿದೆ ಎಂಬ ನಂಬಿಕೆಯನ್ನು ಕಾರ್ಯರೂಪಕ್ಕೆ ತಂದವರು ಡಾ. ಚಂದ್ರಶೇಖರ್ ಉಡುಪ.
ಇವರ ಮಾರ್ಗದರ್ಶನದಲ್ಲಿ ಡಿವೈನ್ ಪಾರ್ಕ್‌ನ ಸಹಸಂಸ್ಥೆಯಾಗಿ ಎಸ್‌ಎಚ್‌ಆರ್‌ಎಫ್ (ಯೋಗಬನ) ಸ್ಥಾಪನೆಯಾಗಿ, ಯೋಗ ಮತ್ತು ಸಮಗ್ರ ಆರೋಗ್ಯದ ಕುರಿತು ಜನಜಾಗೃತಿ ಮೂಡಿಸುವ ಕಾರ್ಯ ನಡೆಯಿತು. ದೇಶದ ವಿವಿಧ ಭಾಗಗಳಲ್ಲದೇ ವಿದೇಶಗಳಲ್ಲಿಯೂ ಇವರ ಸಾವಿರಾರು ಭಕ್ತರು ಮತ್ತು ಅನುಯಾಯಿಗಳಿದ್ದು, ಎಲ್ಲರೂ ಅವರನ್ನು ಪ್ರೀತಿಯಿಂದ “ಡಾಕ್ಟರ್‌ಜೀ” ಎಂದು ಕರೆಯುತ್ತಿದ್ದರು.

ಅವರು ತಮ್ಮ ಜೀವನವನ್ನು ಸಂಪೂರ್ಣವಾಗಿ ಸಮಾಜಸೇವೆಗೆ ಅರ್ಪಿಸಿಕೊಂಡಿದ್ದು, ವೈಯಕ್ತಿಕ ಲಾಭಕ್ಕಿಂತ ಮಾನವ ಕಲ್ಯಾಣವನ್ನೇ ಮೊದಲ ಆದ್ಯತೆಯಾಗಿ ಕಂಡವರು. ಅವರ ಮಾರ್ಗದರ್ಶನದಲ್ಲಿ ಅನೇಕರು ಆರೋಗ್ಯ, ಜೀವನಶೈಲಿ ಹಾಗೂ ಆಧ್ಯಾತ್ಮಿಕ ಬದುಕಿನಲ್ಲಿ ಹೊಸ ದಿಕ್ಕು ಕಂಡಿದ್ದಾರೆ.

ಮೃತರು ಪುತ್ರ ಡಾ. ವಿವೇಕ ಉಡುಪ, ಸೊಸೆ, ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಇಂದು ಬೆಳಗ್ಗೆ 10.30ರಿಂದ ಸಂಜೆ 4 ಗಂಟೆಯವರೆಗೆ ಡಿವೈನ್ ಪಾರ್ಕ್‌ನ ಜ್ಞಾನ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಳಿಕ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ ಎಂದು ಡಿವೈನ್ ಪಾರ್ಕ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.



Related posts

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

ವಿಶ್ವನಾಥ ಯು. ಮಾಡಾ ನಿಧನಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಂತಾಪ

Mumbai News Desk

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಕಳ ತಾಲೂಕು  ಯುವ ಪತ್ರಕರ್ತ ಹರಿಪ್ರಸಾದ್ ನಂದಳಿಕೆ  ಅತ್ಯುತ್ತಮ ವರದಿಗಾರ ಪ್ರಸಸ್ತಿ,

Mumbai News Desk

ತೊಕ್ಕೊಟ್ಟು ಸಾಯಿ ಪರಿವಾರ್ ನ ಆಹಾರ ಸಾಮಗ್ರಿ‌ ಕಿಟ್ ಸ್ವೀಕರಿಸಿದ ನಿಜವಾದ ಅಶಕ್ತ ಬಂದುಗಳು, ಧನ್ಯತಾ ಭಾವ, ಸಾಯಿ ಸೇವೆಗೆ ಕೃತಜ್ಞತೆ. ತೆನೆಗೆ ಹಾಲೆರೆದು ಉದ್ಘಾಟಿಸಿದ ಜೀವ ರಕ್ಷಕ ಈಶ್ವರ್ ಮಲ್ಪೆ

Mumbai News Desk

ಕರ್ನಾಟಕ : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ನಿಂದ ಷರತ್ತುಬದ್ಧ ಅನುಮತಿ

Mumbai News Desk

ನೊಂದವರ ಬಾಳಿಗೆ ಬೆಳಕಾಗುವ ‘ನೆರವು’: 4 ಸಾವಿರ ಕುಟುಂಬಗಳಿಗೆ ₹9.5 ಕೋಟಿ ಆರ್ಥಿಕ ಸಹಾಯ ಹಸ್ತ

Mumbai News Desk