31.6 C
Mumbai
June 7, 2026
Mumbai News Kannada
ಸುದ್ದಿ

ಭಿವಂಡಿ:ಹಿರಿಯ ಹೋಟೆಲ್ ಉದ್ಯಮಿ ಸಮಾಜ ಸೇವಕ ದೇವು ಎಸ್ ಪೂಜಾರಿ ನಿಧನ





ಭಿವಂಡಿ, ಜ.8-  ಭಿವಂಡಿ ಪದ್ಮ ನಗರ್ ನಿವಾಸಿ ಹಿರಿಯ ಹೋಟೆಲ್ ಉದ್ಯಮಿ ಸಮಾಜ ಸೇವಕ ದೇವು ಎಸ್. ಪೂಜಾರಿಯವರು(88)  ಜ.8 ರಂದು ನಿಧನ ಹೊಂದಿದರು.ಭಿವಂಡಿ ದಾಮನ್ ನಾಕಾದಲ್ಲಿನ ಸರಾಯಿ ಬಾರ್ ಆ್ಯಂಡ್ ರೆಸ್ಟೋರೆಂಟ್(ಪ್ರಿಯಾ)ಮಾಲಕರಾಗಿದ್ದ ದೇವು ಎಸ್. ಪೂಜಾರಿಯವರು  ಬಿಲ್ಲವರ ಎಸೋಸಿಯೇಷನ್ ಮುಂಬಯಿಯ ಹಿರಿಯ ಸದಸ್ಯ, ಭಿವಂಡಿ ಸ್ಥಳೀಯ ಕಚೇರಿಯ ಸ್ಥಾಪಕ ಕಾರ್ಯಾಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದರು. ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ದೇವು ಪೂಜಾರಿಯವರು ಭಿವಂಡಿ  ಸ್ಥಳೀಯ ಕಚೇರಿ ಜಾಗ ಎಸೋಸಿಯೇಷನ್ ಗೆ ದಾನ ಮಾಡಿದ ಕೊಡುಗೈ ದಾನಿಯಾಗಿರುವರು.ಮೂಲತಃ ಗಂಜಿಮಠದವರಾಗಿದ್ದ ದೇವು ಪೂಜಾರಿಯವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ,ಅಳಿಯ,ಸೊಸೆಯಂದಿರು, ಮೊಮ್ಮಕ್ಕಳ ಸಹಿತ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ದೇವು ಪೂಜಾರಿಯವರ ನಿಧನಕ್ಕೆ

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಅಧ್ಯಕ್ಷ ಹರೀಶ್ ಜಿ ಅಮೀನ್ ಹಾಗೂ ಪದಾಧಿಕಾರಿಗಳು,ಭಿವಂಡಿ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಜಯಂತ್ ಎಸ್ ಸಾಲಿಯಾನ್ ಹಾಗೂ ಪದಾಧಿಕಾರಿಗಳು ಸದಸ್ಯರು, ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ, ಮಾಜಿನಗರ ಸೇವಕ ಭಿವಂಡಿ ಸಂತೋಷ್ ಎಂ ಶೆಟ್ಟಿ ,ಭಿವಂಡಿ ಹೋಟೆಲ್ ಓನರ್ಸ ಅಸೋಸಿಯೇಷನ್ ಅಧ್ಯಕ್ಷ ದೊಂಡೆರಂಗಡಿ ಭಾಸ್ಕರ್ ಟಿ.ಶೆಟ್ಟಿ ಇವರೆಲ್ಲ ಶೋಕವನ್ನು ವ್ಯಕ್ತಪಡಿಸಿದ್ದಾರೆ.



Related posts

ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಮುಖ್ಯ: ಬಿ.ಕೆ.ಹರಿಪ್ರಸಾದ್.

Mumbai News Desk

ಪಾಲ್ಘರ್ ತಾಲೂಕು ಹೋಟೆಲ್ ಓನರ್ಸ್ ಅಸೋಸಿಯೇಶನ್ ವತಿಯಿಂದ ಶ್ರೀ ರಾಮ ಪ್ರಸಾದ ವಿತರಣೆ

Mumbai News Desk

ಉಡುಪಿ : ಪೊಲೀಸರಿಂದ ಯುವತಿಗೆ ಹಲ್ಲೆ ಪ್ರಕರಣ, ಬಿಲ್ಲವ ಸಮುದಾಯದ ಆಕ್ರೋಶ – ಘಟನೆಯ ಹಿನ್ನೆಲೆ ಏನು?

Mumbai News Desk

ಪಂಚರಾಜ್ಯ ವಿಧಾನಸಭಾ ಚುನಾವಣೆ 2026: ಐತಿಹಾಸಿಕ ಫಲಿತಾಂಶ ಮತ್ತು ರಾಜಕೀಯ ವಿಶ್ಲೇಷಣೆ

Mumbai News Desk

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್.ಕೋಡಿ ತೋಕೂರಿನಲ್ಲಿ ಬೇಸಿಗೆ ಶಿಬಿರ – ಚಿನ್ನರ ಹಬ್ಬ-2025ಕ್ಕೆ ಚಾಲನೆ

Mumbai News Desk

ಹಿರಿಯ ರಂಗಕರ್ಮಿ, ಚಿತ್ರ ನಿರ್ಮಾಪಕ ಸದಾನಂದ ಸುವರ್ಣ ನಿಧನ

Mumbai News Desk