30.5 C
Mumbai
June 8, 2026
Mumbai News Kannada
ಕರ್ನಾಟಕ

ಬಸ್ ಸಂಚಾರ ಸ್ಥಗಿತ: ಪಳ್ಳಿ-ನಿಂಜೂರು ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ






ಉಡುಪಿ: ಕಾರ್ಕಳ – ಬೈಲೂರು – ಕಣಜಾರು–ಪಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ ಸೇವೆಯನ್ನು ಕಳೆದ ಗುರುವಾರದಿಂದ 08 -01 -2026 ರಿಂದ ದಿಢೀರ್ ಸ್ಥಗಿತಗೊಳಿಸಿರುವುದನ್ನು ಪ್ರತಿಭಟಿಸಿ, ಪಳ್ಳಿ ಮತ್ತು ನಿಂಜೂರು ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಗಳಾದ ಅಬೀದ್ ಗದ್ಯಾಳ ಅವರಿಗೆ ಗ್ರಾಮಸ್ಥರು ಅಹವಾಲು ಸಲ್ಲಿಸಿದರು.

ಸಂಕಷ್ಟದಲ್ಲಿ ವಿದ್ಯಾರ್ಥಿಗಳು ಮತ್ತು ಮಹಿಳೆಯರು :
ಈ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್ಸನ್ನೇ ನಂಬಿಕೊಂಡಿದ್ದ ವಿದ್ಯಾರ್ಥಿಗಳು, ಉದ್ಯೋಗಸ್ಥರು ಮತ್ತು ವೃದ್ಧರು ಬಸ್ ಸ್ಥಗಿತದಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಖಾಸಗಿ ಬಸ್‌ಗಳಲ್ಲಿ ಜಾಗವಿಲ್ಲದೆ ಬಾಗಿಲಲ್ಲಿ ನೇತಾಡಿಕೊಂಡು ಪ್ರಯಾಣಿಸುವಂತಾಗಿದೆ. ಸರ್ಕಾರದ ಉಚಿತ ಬಸ್ ಯೋಜನೆಯ ಲಾಭ ಪಡೆಯುತ್ತಿದ್ದ ಮಹಿಳೆಯರಿಗೂ ಈಗ ಆರ್ಥಿಕ ಹೊರೆ ಮತ್ತು ಸಂಚಾರದ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಪ್ರಮುಖ ಬೇಡಿಕೆಗಳು:
ಸ್ಥಗಿತಗೊಂಡಿರುವ ಕಾರ್ಕಳ – ಪಳ್ಳಿ – ಉಡುಪಿ ಸರ್ಕಾರಿ ಬಸ್ ಸಂಚಾರವನ್ನು ತಕ್ಷಣವೇ ಪುನಾರಂಭಿಸಬೇಕು.
ಸಾರ್ವಜನಿಕ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರ ಸೇವೆ ಖಾತರಿಪಡಿಸಬೇಕು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ರಘುನಾಥ ಶೆಟ್ಟಿ ಪಳ್ಳಿ, ದಿನಕರ್ ಶೆಟ್ಟಿ ನಿಂಜೂರು, ವಿಶ್ವನಾಥ ಭಂಡಾರಿ, ಫಿಲೋಮಿನ ಮೆಂಡೋನ್ಸಾ, ಸಂತೋಷ್ ಶೆಟ್ಟಿ, ದಿಲೀಪ್ ಹೆಗ್ಡೆ, ವಿಲ್ಸನ್ ಲೋಬೋ, ನೆಲ್ಸನ್ ಡಿಸೋಜ, ಪ್ರವೀಣ್ ಶೆಟ್ಟಿ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿಗಳು, ಈ ಕುರಿತು ಸಂಬಂಧಪಟ್ಟ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ವರದಿ: ಚಂದ್ರಹಾಸ ಮೆಂಡನ್



Related posts

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಶೇ. 66.14 ವಿದ್ಯಾರ್ಥಿಗಳು ತೇರ್ಗಡೆ,-ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

Mumbai News Desk

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ

Mumbai News Desk

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 2025 ಪ್ರಕಟ : ಮುಂಬೈ ಯ ಡಾ ಪಿ. ವಿ. ಶೆಟ್ಟಿ ಸೇರಿದಂತೆ, 70 ಮಂದಿಗೆ ಗೌರವ

Mumbai News Desk

ಕರ್ನಾಟಕ SSLC ಫಲಿತಾಂಶ 2026 ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ, ಉಡುಪಿ ದ್ವಿತೀಯ ಮತ್ತು ಕಲಬುರಗಿ ಕೊನೆಯ ಸ್ಥಾನ

Mumbai News Desk

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Mumbai News Desk

ಬೆಳಗಾವಿ : ಸದನದಲ್ಲಿ ಗೃಹಲಕ್ಷ್ಮಿ ಗದ್ದಲ; ತಪ್ಪೊಪ್ಪಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Mumbai News Desk