31 C
Mumbai
March 6, 2026
Mumbai News Kannada
ಸುದ್ದಿ

ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಐಬಿಎ (IBA) ಪ್ರಶಸ್ತಿಗಳ ಗರಿ: ಡಿಜಿಟಲ್ ಸೇಲ್ಸ್ ಮತ್ತು ಐಟಿ ರಿಸ್ಕ್ ಮ್ಯಾನೇಜ್‌ಮೆಂಟ್‌ನಲ್ಲಿ ಅತ್ಯುತ್ತಮ ಸಾಧನೆ





ದೇಶದ ಪ್ರಮುಖ ಹಣಕಾಸು ಸಂಸ್ಥೆಗಳಲ್ಲಿ ಒಂದಾದ ಭಾರತ್ ಬ್ಯಾಂಕ್, ಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನ ಅಪ್ರತಿಮ ಸಾಧನೆಗಾಗಿ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನೀಡುವ ಅತ್ಯುತ್ತಮ ‘ಡಿಜಿಟಲ್ ಸೇಲ್ಸ್’ (Best Digital Sales) ಮತ್ತು ಅತ್ಯುತ್ತಮ ‘ಐಟಿ ರಿಸ್ಕ್ ಮ್ಯಾನೇಜ್‌ಮೆಂಟ್’ (Best IT Risk Management) ಪ್ರಶಸ್ತಿಗಳನ್ನು ಪಡೆದಿದೆ.

ಮುಂಬೈನ ನರಿಮನ್ ಪಾಯಿಂಟ್‌ನಲ್ಲಿರುವ ‘ದಿ ಟ್ರೈಡೆಂಟ್’ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್‌ನ (RBI) ಡೆಪ್ಯುಟಿ ಗವರ್ನರ್ ಶ್ರೀ ಟಿ. ರಬಿ ಶಂಕರ್ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷರಾದ ಶ್ರೀ ಸೂರ್ಯಕಾಂತ್ ಜಯ ಸುವರ್ಣರು ಬ್ಯಾಂಕಿನ ಪರವಾಗಿ ಈ ಗೌರವವನ್ನು ಸ್ವೀಕರಿಸಿದರು.

ಸಮಾರಂಭದಲ್ಲಿ ಐಐಟಿ ಬಾಂಬೆಯ ಪ್ರೊಫೆಸರ್ ಎಮೆರಿಟಸ್ ಡಾ. ದೀಪಕ್ ಫಾಟಕ್, ಐಬಿಎ ಸಿಇಒ ಶ್ರೀ ಅತುಲ್ ಕುಮಾರ್ ಗೋಯಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಬ್ಯಾಂಕಿನ ಪರವಾಗಿ ಜಂಟಿ ವ್ಯವಸ್ಥಾಪಕ ನಿರ್ದೇಶಕ ಶ್ರೀ ದಿನೇಶ್ ಬಿ. ಸಾಲಿಯಾನ್, CISO ಶ್ರೀ ಭಾಸ್ಕರ್ ರಾವ್, ಸಹಾಯಕ ಮಹಾಪ್ರಬಂಧಕರಾದ ಶ್ರೀ ಯಶೋಧರ್ ಪೂಜಾರಿ ಮತ್ತು ಶ್ರೀ ರಾಜೇಶ್ ಅಮೀನ್ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

“ಈ ಗೌರವವು ನಮಗೆ ಮತ್ತಷ್ಟು ಜವಾಬ್ದಾರಿಯನ್ನು ತಂದಿದೆ. ತಂತ್ರಜ್ಞಾನ ಮತ್ತು ಸುರಕ್ಷತೆಯ ನಡುವೆ ಸಮತೋಲನ ಕಾಯ್ದುಕೊಳ್ಳುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಲು ನಾವು ಬದ್ಧರಾಗಿದ್ದೇವೆ. ಈ ಯಶಸ್ಸು ನಮ್ಮ ತಂಡದ ಒಗ್ಗಟ್ಟು ಮತ್ತು ಕಠಿಣ ಪರಿಶ್ರಮದ ಫಲವಾಗಿದೆ,” ಎಂದು ಬ್ಯಾಂಕಿನ ಕಾರ್ಯಾಧ್ಯಕ್ಷರು ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.

ಭಾರತ್ ಬ್ಯಾಂಕ್ ಮುಂದಿನ ದಿನಗಳಲ್ಲಿಯೂ ಡಿಜಿಟಲ್ ಯುಗಕ್ಕೆ ತಕ್ಕಂತೆ ಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಮಾದರಿಯನ್ನು ಸೃಷ್ಟಿಸಲು ಸನ್ನದ್ಧವಾಗಿದೆ.

ಈ ಪ್ರಶಸ್ತಿಗಳು ಕೇವಲ ಬ್ಯಾಂಕಿನ ತಾಂತ್ರಿಕ ಪ್ರಗತಿಯನ್ನು ಮಾತ್ರವಲ್ಲದೆ, ಭಾರತ್ ಬ್ಯಾಂಕ್ ಕುಟುಂಬದ ಪ್ರತಿಯೊಬ್ಬ ಸದಸ್ಯರ ಶಿಸ್ತು, ನಾವೀನ್ಯತೆ ಮತ್ತು ಪ್ರಾಮಾಣಿಕತೆಗೆ ಸಂದ ಜಯವಾಗಿದೆ. ಬ್ಯಾಂಕಿನ ಎಲ್ಲ ಸಿಬ್ಬಂದಿಯಿಂದ ಹಿಡಿದು ಆಡಳಿತ ಮಂಡಳಿಯವರೆಗೆ ಪ್ರತಿಯೊಬ್ಬರ ಸಮರ್ಪಣಾ ಮನೋಭಾವ ಈ ಸಾಧನೆಗೆ ನಾಂದಿ ಹಾಡಿದೆ.



Related posts

ತುಳು ರಂಗಭೂಮಿ ಹಿರಿಯ ಕಲಾವಿದ, ಚಲನ ಚಿತ್ರ ನಟ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ

Mumbai News Desk

ಭಾಷೆಗಳು ಸ್ನೇಹ ಸೌಹಾರ್ದತೆಯ ಸಂಕೇತ’ -ಆಶಿಶ್ ಶೇಲಾರ್

Mumbai News Desk

ಮಹಾಭಾರತದಲ್ಲಿ ಕರ್ಣನ ಪಾತ್ರ ನಿರ್ವಹಿಸಿದ ನಟ ಪಂಕಜ್ ಧೀರ್ 68ನೇ ವಯಸ್ಸಿನಲ್ಲಿ ನಿಧನ

Mumbai News Desk

ಧಾರ್ಮಿಕ ಕ್ಷೇತ್ರಗಳ ಬಗ್ಗೆ ಸ್ಥಾಪಿತ ಹಿತಾ ಶಕ್ತಿಗಳ ಅಪಪ್ರಚಾರ ಮೂಲಕ ಭಕ್ತಾಭಿಮಾನಿಗಳ ದಿಕ್ಕು ತಪ್ಪಿಸುವುದು ಸನಾತನ ಧರ್ಮಕ್ಕೆ ಮಾರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

Mumbai News Desk

ಶ್ರೇಯಾ ವಿ. ಸಾಲಿಯಾನ್ ಸಿ.ಎ.ಉತ್ತೀರ್ಣ

Mumbai News Desk