September 6, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಸ್ಪಷ್ಟಿಕರಣ:







ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.)ದ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ಇರುವ ಪ್ರಧಾನ ಕಛೇರಿಯಲ್ಲಿ ಜ 12ರಂದು ಪದಾಧಿಕಾರಿಗಳ ಸಭೆ ಜರಗಿಸಲಾಯಿತು.
ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ಬಗ್ಗೆ ಮತ್ತು ಲೆಕ್ಕಪತ್ರಗಳ ನಿರ್ವಹಣೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡುತ್ತಿರುವುದರ ಬಗ್ಗೆ ಖಂಡಿಸಲಾಯಿತು.
ಕಾರ್ಯದರ್ಶಿ ಶ್ರೀ ಜಯಕರ್ ಶೆಟ್ಟಿ ಇಂದ್ರಾಳಿಯವರು ಮಾತನಾಡಿ ನಮ್ಮ ಸಂಸ್ಥೆಯು ಜಗತ್ತಿನ ಎಲ್ಲಾ ಬಂಟರ ಸಂಘಗಳ ಒಕ್ಕೂಟವಾಗಿದ್ದು ಈ ಹಿಂದಿನಿಂದಲೂ ಸಮಾಜಕ್ಕೆ ಸಮುದಾಯಕ್ಕೆ ಸಹಾಯವಾಗುವಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುತ್ತಿದ್ದು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಮನೆ ಇಲ್ಲದವರಿಗೆ ಮನೆ ನಿರ್ಮಾಣ, ಅನಾರೋಗ್ಯ ಪೀಡಿತರಿಗೆ ಆರೋಗ್ಯಕ್ಕೆ ಸಹಾಯಹಸ್ತ, ವಿದ್ಯಾಭ್ಯಾಸಕ್ಕೆ ಸಹಾಯ, ಮದುವೆ ಶುಭಕಾರ್ಯಗಳಿಗೆ ಆರ್ಥಿಕ ಸಹಾಯ ನೀಡುತ್ತಾ ಹಲವರ ಮೆಚ್ಚುಗೆಯನ್ನು ಪಡೆದಿರುತ್ತದೆ. ಅಂತಹ ಸಂಸ್ಥೆಯ ಬಗ್ಗೆ ಹಾಗೂ ಪದಾಧಿಕಾರಿಗಳ ಬಗ್ಗೆ ಹಾಗೂ ಚುನಾವಣಾ ಪ್ರಕ್ರಿಯೆ ಬಗ್ಗೆ ಮತ್ತು ಲೆಕ್ಕಪತ್ರಗಳ ನಿರ್ವಹಣೆಯ ಬಗ್ಗೆ ಸಹ ಸಮಾಜಕ್ಕೆ ತಪ್ಪು ಮಾಹಿತಿಯನ್ನು ಹರಡುತ್ತಿರುವವರಿಗೆ ಸ್ಪಷ್ಟಿಕರಣ ನೀಡಿದರು.
ಬಳಿಕ ಮಾತನಾಡಿದ ಒಕ್ಕೂಟದ ಲೆಕ್ಕಿಗರಾದ ಸಿ. ಎ. ದಯಶರಣ್ ಶೆಟ್ಟಿಯವರು ಸಂಸ್ಥೆಯು ಪ್ರತಿ ವರ್ಷ ಲೆಕ್ಕಪತ್ರಗಳನ್ನು ಸಮಯಾನುಸಾರ ಲೆಕ್ಕ ಪರಿಶೋಧನೆ ಮಾಡಿಸುತ್ತಿದ್ದು ಸರಿಯಾದ ರೀತಿಯಲ್ಲಿ ಕಾರ್ಯ ಪ್ರವೃತ್ತಿ ನಡೆಸುತ್ತಿದೆ, ಆದಾಯ ತೆರಿಗೆ ನೋಂದಾವಣೆ ಸಹ ಆಗಿದ್ದು ಎಲ್ಲಾ ರೀತಿಯಲ್ಲೂ ಸರಿ ಇರುವ ಕಾರಣ ಸಂಸ್ಥೆಯು 80G ಮತ್ತು 12A ನಂತಹ ದಾಖಲೆಯನ್ನು ಹೊಂದಿರುವುದಾಗಿ ಆ ದಾಖಲೆಗಳನ್ನು ತೋರಿಸಿ ಸ್ಪಷ್ಟವಾಗಿ ತಿಳಿಸಿದರು.
ಇತ್ತೀಚೆಗೆ ನವೆಂಬರ್ ತಿಂಗಳಿನಲ್ಲಿ ನಡೆದ ಪದಾಧಿಕಾರಿಗಳ ಚುನಾವಣೆಯನ್ನು ಸುಸೂತ್ರವಾಗಿ ನಡೆಸಿ ಕೊಟ್ಟ ವಕೀಲರಾದ ಶ್ರೀ ಕೆ. ಪೃಥ್ವಿರಾಜ್ ರೈ ಯವರು ಮಾತನಾಡಿ ಮುಂದಿನ 3 ವರ್ಷಗಳ ಅವಧಿಗೆ ಪದಾಧಿಕಾರಿಗಳ ಆಯ್ಕೆಗಾಗಿ ನಡೆಸಲಾದ ಚುನಾವಣಾ ಪ್ರಕ್ರಿಯೆ ಸಂಸ್ಥೆಯ ಬೈಲಾ ಉಪನಿಬಂಧನೆಯ ನಿಯಮದಂತೆ ನಡೆಸಲಾಗಿದೆ ಎಂದು ಸ್ಪಷ್ಟವಾಗಿ ತಿಳಿಯಪಡಿಸಿದರು.
ಸಭೆಯಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ, ಸಂಚಾಲಕರಾದ ಶ್ರೀ ಕೊಲ್ಲಾಡಿ ಬಾಲಕೃಷ್ಣ ರೈ, ಮಾಜಿ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.



Related posts

ಕಾಪು ರಂಗತರಂಗದ ಸ್ಥಾಪಕ ಸದಸ್ಯ, ತುಳು ನಾಟಕ ರಂಗದ ಪ್ರತಿಭಾನ್ವಿತ ನಟ ಸುಜಿತ್ ಶೆಟ್ಟಿ ಪಾದೂರು ನಿಧನ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 10ಕ್ಕೆ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ಭಾರತ್ ಬ್ಯಾಂಕ್‌ನ ಹಿರಿಯ ಸಿಬ್ಬಂದಿಗಳಾದ ಹರೀಶ್ ಕೋಟ್ಯಾನ್, ಉದಯ ಅಂಚನ್ ಅವರಿಗೆ ಗೌರವಪೂರ್ವಕ ಬೀಳ್ಕೊಡುಗೆ

Mumbai News Desk

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ :ಸ್ವಾಗತ ಗೋಪುರ(ಮಹಾದ್ವಾರ)ದ  ಮತ್ತೆ ತಮ್ಮದೇ ಹೆಸರಲ್ಲಿ‌ ನಿರ್ಮಿಸುವಂತೆ ಐಕಳ ಹರೀಶ್ ಶೆಟ್ಟಿಯವರಿಂದ ದೇವಸ್ಥಾನದ ಆಡಳಿತ ಮಂಡಳಿಗೆ  ಮನವಿ.

Mumbai News Desk

1,000 ಕ್ಕೂ ಹೆಚ್ಚು ವಿಮಾನ ರದ್ದತಿಗೆ ಇಂಡಿಗೋ ಕ್ಷಮೆಯಾಚಣೆ ; ಡಿಸೆಂಬರ್ 10 ರಿಂದ ಸಾಮಾನ್ಯ ಸ್ಥಿತಿಗೆ ಮರಳುವ ನಿರೀಕ್ಷೆ

Mumbai News Desk