July 23, 2026
Mumbai News Kannada
ಕರ್ನಾಟಕ

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ







ಬೆಂಗಳೂರು: ಸಿವಿಲ್‌ ಪ್ರಕರಣವೊಂದರಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯ ಇದೀಗ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಹಿರಿಯ ಐಪಿಎಸ್‌ ಅಧಿಕಾರಿ ಬಿಆರ್ ರವಿಕಾಂತೇಗೌಡ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅಬ್ದುಲ್‌ ಸಲೀಂ, ‘ಪವರ್ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರಿಗೆ ಶೈಲು ಶಿಕ್ಷೆ ವಿಧಿಸಿದ್ದಾರೆ.

‘ಈ ಪ್ರಕರಣದಲ್ಲಿ 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ ರಾಕೇಶ್ ಶೆಟ್ಟಿ ಅವರು ಉಲ್ಲಂಘಿಸಿದ್ದು, ನ್ಯಾಯಾಲಯದ ಆದೇಶಕ್ಕೆ ಅವಿಧೇಯರಾಗಿ ನಡೆದುಕೊಂಡಿರುವುದು ಸಾಬೀತಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

‘ಈ ಹಿನ್ನೆಲೆಯಲ್ಲಿ ರಾಕೇಶ್‌ ಶೆಟ್ಟಿ ಅವರು ಮೂರು ತಿಂಗಳು ಜೈಲು ವಾಸ ಅನುಭವಿಸಬೇಕು. ಜೈಲಿನಲ್ಲಿ ರಾಕೇಶ್ ಶೆಟ್ಟಿ ಅವರಿಗೆ ತಗಲುವ ಖರ್ಚು ವೆಚ್ಚಗಳನ್ನು ರವಿಕಾಂತೇಗೌಡ ಅವರೇ ಭರಿಸಬೇಕು’ ಎಂದು ಆದೇಶದಲ್ಲಿ



Related posts

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Mumbai News Desk

ಕರ್ನಾಟಕ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ದಾಖಲೆಯ ಶೇ.86 ಫಲಿತಾಂಶ : ಆಳ್ವಾಸ್ ಕಾಲೇಜ್ ನ ದಿಶಾ ರಾಜ್ಯಕ್ಕೆ ಪ್ರಥಮ

Mumbai News Desk

ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ. ಶಿವಕುಮಾರ್ – ನಂತರ ಸ್ಪಷ್ಟನೆ !

Mumbai News Desk

ಕರ್ನಾಟಕ : ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

Mumbai News Desk

ಎಸ್ ಎಸ್ ಎಲ್ ಸಿ ಫಲಿತಾಂಶ- ಶ್ರೀಷಾ ಜಯ ಪೂಜಾರಿಗೆ ಶೇ.97.12 ಅಂಕ

Mumbai News Desk

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ. ಆರ್. ಪ್ರತಿಭಾ ಅಧಿಕಾರ ಸ್ವೀಕಾರ: ಜನಪರ ಆಡಳಿತಕ್ಕೆ ಸಂಕಲ್ಪ

Mumbai News Desk