September 6, 2026
Mumbai News Kannada
ಕರ್ನಾಟಕ

ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪ: ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳ ಜೈಲು ಶಿಕ್ಷೆ





ಬೆಂಗಳೂರು: ಸಿವಿಲ್‌ ಪ್ರಕರಣವೊಂದರಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯ ಇದೀಗ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಹಿರಿಯ ಐಪಿಎಸ್‌ ಅಧಿಕಾರಿ ಬಿಆರ್ ರವಿಕಾಂತೇಗೌಡ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅಬ್ದುಲ್‌ ಸಲೀಂ, ‘ಪವರ್ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರಿಗೆ ಶೈಲು ಶಿಕ್ಷೆ ವಿಧಿಸಿದ್ದಾರೆ.

‘ಈ ಪ್ರಕರಣದಲ್ಲಿ 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ ರಾಕೇಶ್ ಶೆಟ್ಟಿ ಅವರು ಉಲ್ಲಂಘಿಸಿದ್ದು, ನ್ಯಾಯಾಲಯದ ಆದೇಶಕ್ಕೆ ಅವಿಧೇಯರಾಗಿ ನಡೆದುಕೊಂಡಿರುವುದು ಸಾಬೀತಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

‘ಈ ಹಿನ್ನೆಲೆಯಲ್ಲಿ ರಾಕೇಶ್‌ ಶೆಟ್ಟಿ ಅವರು ಮೂರು ತಿಂಗಳು ಜೈಲು ವಾಸ ಅನುಭವಿಸಬೇಕು. ಜೈಲಿನಲ್ಲಿ ರಾಕೇಶ್ ಶೆಟ್ಟಿ ಅವರಿಗೆ ತಗಲುವ ಖರ್ಚು ವೆಚ್ಚಗಳನ್ನು ರವಿಕಾಂತೇಗೌಡ ಅವರೇ ಭರಿಸಬೇಕು’ ಎಂದು ಆದೇಶದಲ್ಲಿ



Related posts

ಈಗ ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ, ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಪುರುಷೋತ್ತಮ ಬಿಳಿಮಲೆ

Mumbai News Desk

ಕರಾವಳಿ,‌ ಮಲೆನಾಡು ಭಾಗಕ್ಕೆ ‌ ಶೀಘ್ರದಲ್ಲಿ ಹೊಸ ಪ್ರವಾಸೋದ್ಯಮ ನೀತಿ: ಡಿ. ಕೆ. ಶಿವಕುಮಾರ್

Mumbai News Desk

ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ: ವಿಧಾನಸಭಾ ಸದಸ್ಯತ್ವ ರದ್ದು,

Mumbai News Desk

ಕರ್ನಾಟಕ : ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

Mumbai News Desk

ಕರ್ನಾಟಕ : ವಿಧಾನಮಂಡಲದಲ್ಲಿ ರಾಜ್ಯಪಾಲರ ಭಾಷಣ ಬಹಿಷ್ಕಾರ ಮತ್ತು ಸದನದ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ಹೈಡ್ರಾಮಾ

Mumbai News Desk

ಬಿಲ್ಲವ, ಬಂಟ್ಸ್ ಸಮುದಾಯಗಳ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಅನಿತಾ ಕಾಸರಗೋಡು ಬಂಧನ

Mumbai News Desk