32 C
Mumbai
March 7, 2026
Mumbai News Kannada
ಪ್ರಕಟಣೆ

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ: ಜ.17 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ





ಮುಂಬಯಿ : ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ, ಮಲಾಡ್ ಇದರ ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮವು ಶನಿವಾರ ಜ. 17 ರಂದು ಸಂಜೆ  6 ರಿಂದ ಉತ್ಕರ್ಷ ಸಭಾಗೃಹ, ಉತ್ಕರ್ಷ ವಿದ್ಯಾ ಮಂದಿರ, ಮಲಾಡ್ ಪೂರ್ವ ಇಲ್ಲಿ ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ ಯ ಅಧ್ಯಕ್ಷರಾದ ನ್ಯಾ. ಜಗನ್ನಾಥ್ ಎನ್. ಶೆಟ್ಟಿ ಪಣಿಯೂರು  ಇವರ ಅಧ್ಯಕ್ಷತೆಯಲ್ಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಕುಮರೇಶ್ ಆಚಾರ್ಯ ಇವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಸಮಾರಂಭದಲ್ಲಿ ಮಹಿಳಾ ವಿಭಾಗದವರಿಂದ ಭಜನೆ, ಯುವ ವಿಭಾಗದವರಿಂದ ಕುಣಿತ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ನಡೆಯಲಿರುವ ಸಭಾ ಕಾರ್ಯಕ್ರಮ. ಮುಖ್ಯ ಅತಿಥಿಯಾಗಿ, ಬಂಟರ ಸಂಘ ಮುಂಬಯಿಯ ಅಂಧೇರಿ -ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಅಮರ್ ನಾಥ್ ಶೆಟ್ಟಿ, ಮಲಾಡ್ ಪೂರ್ವ ಅಂಚೆ ಇಲಾಖೆಯ ಮುಖ್ಯಸ್ಥೆ ಜಯ ಬಂಗೇರ ಮತ್ತು ಸಾಫಲ್ಯ ತ್ರೈಮಾಸಿಕದ ಸಂಪಾದಕಿ ಡಾ. ಜಿ. ಪಿ. ಕುಸುಮ ಪಾಲ್ಗೊಳ್ಳಲಿದ್ದಾರೆ. 

ಬಳಿಕ ಹಳದಿ ಕುಂಕುಮ ನಡೆಯಲಿದೆ. 

 ಈ ಕಾರ್ಯಕ್ರಮಕ್ಕೆ ಸದಸ್ಯರು  ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ  ಪೂಜಾ ಸಮಿತಿಯ ಮಹಿಳಾ ವಿಭಾಗದ  ಕಾರ್ಯದರ್ಶಿ ಶ್ರೀಲಾ ಎಂ. ಪೂಜಾರಿ, ಕೋಶಾಧಿಕಾರಿ ನಳಿನಿ ಪಿ. ಕರ್ಕೇರ, ಉಪಕಾರ್ಯಾಧ್ಯಕ್ಷೆರುಗಳಾದ ಗೀತಾ ಜೆ. ಮೆಂಡನ್, ಲಲಿತಾ ಎಸ್ ಗೌಡ, ಸಂಧ್ಯ ಎಸ್. ಪ್ರಭು, ಜೊತೆ  ಕಾರ್ಯದರ್ಶಿಗಳಾದ ಭಾರತಿ ಎಸ್ ಆಚಾರ್ಯ, ವಿಧ್ಯಾ ಡಿ. ಆಚಾರ್ಯ, ಜೊತೆ  ಕೋಶಾಧಿಕಾರಿಗಳಾದ  ಶೋಭಾ ಎಲ್ ರಾವ್, ವಿಧ್ಯಾ ಎಸ್ ನಾಯಕ್, ಸಲಹಾ ಸಮಿತಿಯ ಮೋಹಿನಿ ಜೆ. ಶೆಟ್ಟಿ ಮತ್ತು ರತ್ನಾ ಡಿ. ಕುಲಾಲ್ ಹಾಗೂ ಮಹಿಳಾ ವಿಭಾಗದ ಎಲ್ಲಾ ಸದಸ್ಯರು ವಿನಂತಿಸಿದ್ದಾರೆ.

———-

.

 



Related posts

ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ ಭಾಂಡುಪ್ : ಜ. 30ರಿಂದ, ಫೆ. 1ರ ತನಕ 41ನೇ ವಾರ್ಷಿಕ ಮಹಾಪೂಜೆ.

Mumbai News Desk

ಮುಂಬಯಿ ಕನ್ನಡ ಸಂಘ: ಡಿ. 20ರಂದು ಎರಡು ದತ್ತಿ ಉಪನ್ಯಾಸಗಳ ಕಾರ್ಯಕ್ರಮ

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ, ಇರಾನಿ ಕಾಲೋನಿ ಮಲಾಡ್.ಭಕ್ತಿ ಸಂಭ್ರಮದೊಂದಿಗೆ ಶನಿ ಜಯಂತಿ ಆಚರಣೆ.

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ (ರಿ), ಕಿಸಾನ್ ನಗರ ಥಾಣೆ :ಡಿ. 19ರಿಂದ 21ರ ತನಕ ರಜತ ಮಹೋತ್ಸವ, 25ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ : ದೀಪಾವಳಿ ಹಬ್ಬದ ಪ್ರಯುಕ್ತ ಭಜನಾ ಸಂಕೀರ್ತನೆ

Mumbai News Desk

ಶ್ರೀ ಗುರು ಸದ್ಗುರು ಅಯ್ಯಪ್ಪ ಭಕ್ತವೃಂದ ಟ್ರಸ್ಟ್ ಮಲಾಡ್ ಪಶ್ಚಿಮ ಡಿ 17: 28ನೇ ವರ್ಷದ ಅಯ್ಯಪ್ಪ ಮಹಾಪೂಜೆ

Mumbai News Desk