July 23, 2026
Mumbai News Kannada
ಪ್ರಕಟಣೆ

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ: ಜ.17 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ







ಮುಂಬಯಿ : ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ, ಮಲಾಡ್ ಇದರ ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮವು ಶನಿವಾರ ಜ. 17 ರಂದು ಸಂಜೆ  6 ರಿಂದ ಉತ್ಕರ್ಷ ಸಭಾಗೃಹ, ಉತ್ಕರ್ಷ ವಿದ್ಯಾ ಮಂದಿರ, ಮಲಾಡ್ ಪೂರ್ವ ಇಲ್ಲಿ ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ ಯ ಅಧ್ಯಕ್ಷರಾದ ನ್ಯಾ. ಜಗನ್ನಾಥ್ ಎನ್. ಶೆಟ್ಟಿ ಪಣಿಯೂರು  ಇವರ ಅಧ್ಯಕ್ಷತೆಯಲ್ಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಕುಮರೇಶ್ ಆಚಾರ್ಯ ಇವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಸಮಾರಂಭದಲ್ಲಿ ಮಹಿಳಾ ವಿಭಾಗದವರಿಂದ ಭಜನೆ, ಯುವ ವಿಭಾಗದವರಿಂದ ಕುಣಿತ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ನಡೆಯಲಿರುವ ಸಭಾ ಕಾರ್ಯಕ್ರಮ. ಮುಖ್ಯ ಅತಿಥಿಯಾಗಿ, ಬಂಟರ ಸಂಘ ಮುಂಬಯಿಯ ಅಂಧೇರಿ -ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಅಮರ್ ನಾಥ್ ಶೆಟ್ಟಿ, ಮಲಾಡ್ ಪೂರ್ವ ಅಂಚೆ ಇಲಾಖೆಯ ಮುಖ್ಯಸ್ಥೆ ಜಯ ಬಂಗೇರ ಮತ್ತು ಸಾಫಲ್ಯ ತ್ರೈಮಾಸಿಕದ ಸಂಪಾದಕಿ ಡಾ. ಜಿ. ಪಿ. ಕುಸುಮ ಪಾಲ್ಗೊಳ್ಳಲಿದ್ದಾರೆ. 

ಬಳಿಕ ಹಳದಿ ಕುಂಕುಮ ನಡೆಯಲಿದೆ. 

 ಈ ಕಾರ್ಯಕ್ರಮಕ್ಕೆ ಸದಸ್ಯರು  ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ  ಪೂಜಾ ಸಮಿತಿಯ ಮಹಿಳಾ ವಿಭಾಗದ  ಕಾರ್ಯದರ್ಶಿ ಶ್ರೀಲಾ ಎಂ. ಪೂಜಾರಿ, ಕೋಶಾಧಿಕಾರಿ ನಳಿನಿ ಪಿ. ಕರ್ಕೇರ, ಉಪಕಾರ್ಯಾಧ್ಯಕ್ಷೆರುಗಳಾದ ಗೀತಾ ಜೆ. ಮೆಂಡನ್, ಲಲಿತಾ ಎಸ್ ಗೌಡ, ಸಂಧ್ಯ ಎಸ್. ಪ್ರಭು, ಜೊತೆ  ಕಾರ್ಯದರ್ಶಿಗಳಾದ ಭಾರತಿ ಎಸ್ ಆಚಾರ್ಯ, ವಿಧ್ಯಾ ಡಿ. ಆಚಾರ್ಯ, ಜೊತೆ  ಕೋಶಾಧಿಕಾರಿಗಳಾದ  ಶೋಭಾ ಎಲ್ ರಾವ್, ವಿಧ್ಯಾ ಎಸ್ ನಾಯಕ್, ಸಲಹಾ ಸಮಿತಿಯ ಮೋಹಿನಿ ಜೆ. ಶೆಟ್ಟಿ ಮತ್ತು ರತ್ನಾ ಡಿ. ಕುಲಾಲ್ ಹಾಗೂ ಮಹಿಳಾ ವಿಭಾಗದ ಎಲ್ಲಾ ಸದಸ್ಯರು ವಿನಂತಿಸಿದ್ದಾರೆ.

———-

.

 



Related posts

ಮರಳುಗಾಡಿನಿಂದ ಮಹಾನಗರಕ್ಕೆ ಗಮ್ಮತ್ ಕಲಾವಿದೆರ್, ಅ. 27ರಂದು ಕನ್ನಡ ಸಂಘ ಸಯನ್ ನ ವಾರ್ಷಿಕೋತ್ಸವದ ಅಂಗವಾಗಿ ದುಬಾಯಿಯ ಕಲಾವಿದರಿಂದ “ವಾ ಗಳಿಗೆಡ್ ಪುಟುದನಾ” ತುಳು ಹಾಸ್ಯಮಯ ನಾಟಕ ಪ್ರದರ್ಶನ

Mumbai News Desk

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ

Mumbai News Desk

ಮೇ. 16: ಕಾಸರಗೋಡಿನಲ್ಲಿ ದತ್ತಿನಿಧಿ ಪ್ರಶಸ್ತಿ,, ಕನ್ನಡ ಸಾಂಸ್ಕೃತಿಕ ಉತ್ಸವ : ಪತ್ರಕರ್ತ ಸುಭಾಷ್ ಶಿರಿಯ ಅವರಿಗೆ ದತ್ತಿನಿಧಿ ಪ್ರಶಸ್ತಿ ಪ್ರಧಾನ

Mumbai News Desk

ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ ಮತ್ತು ಯಕ್ಷಗಾನ ಸಮಾರಾಧನೆಯ ತ್ರಿಶಂತ್ ಉತ್ಸವವ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಶ್ರೀ ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ ಇಲ್ಲಿ ನವೆಂಬರ್ 13 ರಂದುತುಳಸೀ ಪೂಜೆ ಹಾಗೂ ಕಾರ್ತಿಕ ದೀಪೋತ್ಸವ

Mumbai News Desk

ಬೆಂಗಳೂರಿನ ಶ್ರೀ ಮಹಾಲಕ್ಷ್ಮೀ ಸನ್ನಿಧಿ, ನಂಬಿದ ಭಕ್ತರ ಪಾಲಿನ ಕರುಣಾನಿಧಿ

Mumbai News Desk