July 23, 2026
Mumbai News Kannada
ಸುದ್ದಿ

ಉಡುಪಿ ರೈಲು ನಿಲ್ದಾಣದಲ್ಲಿ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ








ಕರಾವಳಿ ಜಿಲ್ಲೆಗಳ ರೈಲ್ವೆ ಮೇಲ್ದರ್ಜೆಗೇರಿಸಲು 100 ಕೋಟಿ ರೂಪಾಯಿ ಅನುಮೋದನೆ: ಸಂಸದ ಕೋಟ

 ಕರಾವಳಿ ಜಿಲ್ಲೆಗಳ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ₹100 ಕೋಟಿಯ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ನೀಡಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿ ರೈಲು ನಿಲ್ದಾಣ ಪರಿಸರದಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಷನ್ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆಯನ್ನು ಬುಧವಾರ ನೆರವೇರಿಸಿ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ಪ್ರಥಮ ಹಂತದ ಕಾಮಗಾರಿಗಳಲ್ಲಿ ಪ್ಲಾಟ್ ಫಾರ್ಮ್ 2 ಅನ್ನು ₹2.6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಹಿರಿಯ ನಾಗರಿಕರ ಅನುಕೂಲಕ್ಕಾಗಿ ಮೂರು ಲಿಫ್ಟ್‌ಗಳನ್ನು ಅಳವಡಿಸಲಾಗುವುದು. ಬಾರಕೂರು-ಮುಲ್ಕಿ ರೈಲ್ವೆ ಪ್ಲಾಟ್ ಫಾರ್ಮ್‌ಗಳನ್ನು ₹4.28 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ₹ 105 ಕೋಟಿ ವೆಚ್ಚದಲ್ಲಿ 10 ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಕೇಂದ್ರದಿಂದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು.

ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಉಡುಪಿ ರೈಲು ನಿಲ್ದಾಣಕ್ಕೆ ಹೊಸ ಕಾಯಕಲ್ಪ ನೀಡಲಾಗುವುದು. ಮಂಗಳೂರಿನಿಂದ ಕಾರವಾರದವರೆಗೆ ದ್ವಿಪಥ ರೈಲ್ವೆ ಹಳಿಗಳು ಈಗಿನ ಅವಶ್ಯಕತೆಯಾಗಿದ್ದು, ಅದಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಗುವುದು.
ಮಡಗಾಂವ್ – ಮಂಗಳೂರು ವಂದೇ ಭಾರತ್ ರೈಲನ್ನು ಮುಂಬೈವರೆಗೆ ಮತ್ತು ಬೆಂಗಳೂರು-ಮಂಗಳೂರು ರೈಲನ್ನು ಕಾರವಾರದವರೆಗೆ ವಿಸ್ತರಣೆ ಮಾಡಿದಲ್ಲಿ ಕರಾವಳಿಯ ಜನರಿಗೆ ಅನುಕೂಲವಾಗಲಿದ್ದು, ಈ ನಿಟ್ಟಿನಲ್ಲಿ ಕೊಂಕಣ ರೈಲ್ವೆಯೊಂದಿಗೆ ಸಮಾಲೋಚಿಸಿ ಅಡಚಣೆಗಳನ್ನು ನಿವಾರಿಸುವ ಹಾಗೂ ಉಡುಪಿ ರೈಲು ನಿಲ್ದಾಣಕ್ಕೆ ಶ್ರೀಕೃಷ್ಣ ರೈಲು ನಿಲ್ದಾಣ ಎಂದು ಹೆಸರಿಸಲು ಪ್ರಯತ್ನ ನಡೆಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕೊಂಕಣ ರೈಲ್ವೆ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಝಾ, ಕಾರವಾರ ವಲಯ ರೈಲ್ವೆ ವ್ಯವಸ್ಥಾಪಕಿ ಆಶಾ ಶೆಟ್ಟಿ ಭಾಗವಹಿಸಿದ್ದರು.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (03/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನವಿಶ್ವ ಸುದ್ದಿ :

Mumbai News Desk

ಕಾಂತಾವರ : ಶೋಧನ್ ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ಲೋಕಾರ್ಪಣೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (11/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಡಾ. ಪಿ.ವಿ. ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮುಂಬೈನಲ್ಲಿ ಭವ್ಯ ಸ್ವಾಗತ

Mumbai News Desk

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ,   ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಶೆಟ್ಟಿ ಆಯ್ಕೆ.

Mumbai News Desk

ಕರ್ನಾಟಕ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸನವ್ಯ ಎಸ್ ಗೆ ಶೇ. 97.5 ಅಂಕ

Mumbai News Desk