July 22, 2026
Mumbai News Kannada
ಸುದ್ದಿ

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ







.

ಮೀರಾಭಯಂದರ್ ಮಹಾನಗರಪಾಲಿಕೆಯ ಜ.15ರಂದು ನಡೆದ ಚುನಾವಣೆಯಲ್ಲಿ ವಾರ್ಡ್ ನಂಬ್ರ 3 ರಿಂದ ಬಿಜೆಪಿ ಅಭ್ಯರ್ಥಿಯಾಗಿ ಗಣೇಶ್ ಗೋಪಾಲ್ ಶೆಟ್ಟಿಯವರು ಚುನಾಯಿತರಾಗಿದ್ದಾರೆ. ಈ ವಾರ್ಡಿನಲ್ಲಿ 16234 ಮತಗಳ ಚಲಾವಣೆ ಆಗಿದ್ದು ಅದರಲ್ಲಿ 4915 ಮತ ಪಡೆದು ಸಮೀಪದ ಪ್ರತಿಸ್ಪರ್ಧಿ ಶಿವಸೇನೆಯ ದಿನೇಶ್ ನಲವಡೆಯವರಿಂದ ಸುಮಾರು 800 ಮತಗಳು ಅಂತರದಿಂದ ಶೆಟ್ಟಿಯವರು ವಿಜಯಿಯಾಗಿದ್ದಾರೆ.
ಕಳೆದ 2007ರಿಂದ ನಗರ ಸೇವಕರಾಗಿ ಪರಿಸರದಲ್ಲಿ ಸಮಾಜಸೇವೆ ಮಾಡುತ್ತಿದ್ದು ಮತ್ತೊಮ್ಮೆ ಅವಕಾಶ ಲಭಿಸಿದ ಶೆಟ್ಟಿಯವರನ್ನು ಪರಿಸರದ ಸಂಘಸಂಸ್ಥೆಗಳು, ತುಳು ಕನ್ನಡಿಗರು ಅಭಿನಂದಿಸಿದ್ದಾರೆ
ಭಾಯಂದರ್ ಪಶ್ಚಿಮದ ಎಸ್.ವಿ.ರೋಡ್ ನಿವಾಸಿಯಾಗಿರುವ ಶೆಟ್ಟಿಯವರು 2007ರಿಂದ ನಗರ ಸೇವಕರಾಗಿ ಜನಸೇವೆಯಲ್ಲಿ ನಿರತರಾಗಿದ್ದಾರೆ. ಪರಿಸರದ ಯಾವುದೇ ಸಂಘಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಸಭೆಯಲ್ಲಿ ಉಪಸ್ಥಿತರಿದ್ದು, ಸಂಪೂರ್ಣ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುತ್ತಾ ಜಾತಿಭೇದ ಮಾಡದೆ ಅಪಾರ ಅಭಿಮಾನಿಗಳನ್ನು ಪಡೆದಿದ್ದಾರೆ.ತನ್ನ ವಾರ್ಡಿನಲ್ಲಿ ಸುರಕ್ಷೆ ಮತ್ತು ಸ್ವಚ್ಛತೆಗಾಗಿ ಹೆಚ್ಚಿನ ಒತ್ತು ನೀಡಿ ಪರಿಸರದಲ್ಲಿ ಹಿರಿಯ ನಾಗರಿಕರ ಸೆಲ್ಫೀ ಪೋಯಿಂಟ್ ಸ್ಟ್ಯಾಂಡ್ ನಿರ್ಮಿಸಿ ಪ್ರಶಂಶಿಸಲ್ಪಟ್ಟಿದ್ದಾರೆ.



Related posts

ಪಶ್ಚಿಮ ಬಂಗಾಳ ವಿಧಾನಸಭಾ ವಿಸರ್ಜನೆ: ಮಮತಾ ಬ್ಯಾನರ್ಜಿ ರಾಜೀನಾಮೆ ನಿರಾಕರಣೆ ಹಾಗೂ ರಾಜ್ಯಪಾಲರ ಕಠಿಣ ಕ್ರಮ

Mumbai News Desk

ಮೊಗವೀರ ಮಹಾಜನ ಸೇವಾ ಸಂಘದ ವಾರ್ಷಿಕ ಮಹಾಸಭೆ. ಒಗ್ಗಟ್ಟಿನಿಂದ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸೋಣ, :ರಾಜು ಮೆಂಡನ್ 

Mumbai News Desk

ಮಹಾಭಾರತದಲ್ಲಿ ಕರ್ಣನ ಪಾತ್ರ ನಿರ್ವಹಿಸಿದ ನಟ ಪಂಕಜ್ ಧೀರ್ 68ನೇ ವಯಸ್ಸಿನಲ್ಲಿ ನಿಧನ

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಭಾರತ್ ಬ್ಯಾಂಕ್ ಗೆ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯ ಗರಿ

Mumbai News Desk

ಅವಧಿಗೂ ಮೊದಲೇ ಮುಂಬೈಗೆ ಮಾನ್ಸೂನ್ ಪ್ರವೇಶ : 107 ವರ್ಷಗಳ ದಾಖಲೆ ಮುರಿದ ಮಳೆ.

Mumbai News Desk