September 6, 2026
Mumbai News Kannada
ಸುದ್ದಿ

ಮೀರಾ ಭಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿ ವಿಜಯ





.

ಮೀರಾಭಯಂದರ್ ಮಹಾನಗರಪಾಲಿಕೆಯ ಜ.15ರಂದು ನಡೆದ ಚುನಾವಣೆಯಲ್ಲಿ ವಾರ್ಡ್ ನಂಬ್ರ 3 ರಿಂದ ಬಿಜೆಪಿ ಅಭ್ಯರ್ಥಿಯಾಗಿ ಗಣೇಶ್ ಗೋಪಾಲ್ ಶೆಟ್ಟಿಯವರು ಚುನಾಯಿತರಾಗಿದ್ದಾರೆ. ಈ ವಾರ್ಡಿನಲ್ಲಿ 16234 ಮತಗಳ ಚಲಾವಣೆ ಆಗಿದ್ದು ಅದರಲ್ಲಿ 4915 ಮತ ಪಡೆದು ಸಮೀಪದ ಪ್ರತಿಸ್ಪರ್ಧಿ ಶಿವಸೇನೆಯ ದಿನೇಶ್ ನಲವಡೆಯವರಿಂದ ಸುಮಾರು 800 ಮತಗಳು ಅಂತರದಿಂದ ಶೆಟ್ಟಿಯವರು ವಿಜಯಿಯಾಗಿದ್ದಾರೆ.
ಕಳೆದ 2007ರಿಂದ ನಗರ ಸೇವಕರಾಗಿ ಪರಿಸರದಲ್ಲಿ ಸಮಾಜಸೇವೆ ಮಾಡುತ್ತಿದ್ದು ಮತ್ತೊಮ್ಮೆ ಅವಕಾಶ ಲಭಿಸಿದ ಶೆಟ್ಟಿಯವರನ್ನು ಪರಿಸರದ ಸಂಘಸಂಸ್ಥೆಗಳು, ತುಳು ಕನ್ನಡಿಗರು ಅಭಿನಂದಿಸಿದ್ದಾರೆ
ಭಾಯಂದರ್ ಪಶ್ಚಿಮದ ಎಸ್.ವಿ.ರೋಡ್ ನಿವಾಸಿಯಾಗಿರುವ ಶೆಟ್ಟಿಯವರು 2007ರಿಂದ ನಗರ ಸೇವಕರಾಗಿ ಜನಸೇವೆಯಲ್ಲಿ ನಿರತರಾಗಿದ್ದಾರೆ. ಪರಿಸರದ ಯಾವುದೇ ಸಂಘಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಸಭೆಯಲ್ಲಿ ಉಪಸ್ಥಿತರಿದ್ದು, ಸಂಪೂರ್ಣ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುತ್ತಾ ಜಾತಿಭೇದ ಮಾಡದೆ ಅಪಾರ ಅಭಿಮಾನಿಗಳನ್ನು ಪಡೆದಿದ್ದಾರೆ.ತನ್ನ ವಾರ್ಡಿನಲ್ಲಿ ಸುರಕ್ಷೆ ಮತ್ತು ಸ್ವಚ್ಛತೆಗಾಗಿ ಹೆಚ್ಚಿನ ಒತ್ತು ನೀಡಿ ಪರಿಸರದಲ್ಲಿ ಹಿರಿಯ ನಾಗರಿಕರ ಸೆಲ್ಫೀ ಪೋಯಿಂಟ್ ಸ್ಟ್ಯಾಂಡ್ ನಿರ್ಮಿಸಿ ಪ್ರಶಂಶಿಸಲ್ಪಟ್ಟಿದ್ದಾರೆ.



Related posts

ರಾಷ್ಟ್ರ, ಕರ್ನಾಟಕ ಮತ್ತು ಮಹಾರಾಷ್ಟ್ರದ ಇಂದಿನ ಸಂಕ್ಷಿಪ್ತ ಮುಖ್ಯಾಂಶಗಳು

Mumbai News Desk

ಡೊಂಬಿವಲಿ – ವೆಂಕಟೇಶ್ ಕೆ. ಕೋಟ್ಯಾನ್ ನಿಧನ.

Mumbai News Desk

ಮುಂಬೈ : ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಗುಂಡಿನ ದಾಳಿ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅಧಿಕೃತ ಚಾಲನೆ

Mumbai News Desk

ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ  ಸಮಾಲೋಚನಾ ಸಭೆ.

Mumbai News Desk