April 23, 2026
Mumbai News Kannada
ಸುದ್ದಿ

ಜಯಪ್ರಕಾಶ್ ಪೂಜಾರಿ, ಮುಂಬೈ ಅವರಿಗೆ ತುಳುವರ್ಲ್ಡ್ ಸಮ್ಮಾನ್





ಬೆಂಗಳೂರು: ಅಲಯನ್ಸ್ ಯೂನಿವರ್ಸಿಟಿಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ತುಳು ವಿಚಾರ ಸಂಕಿರಣದ ವೇದಿಕೆಯಲ್ಲಿ, ಮುಂಬೈನಲ್ಲಿ ತುಳು ಭಾಷೆ–ಸಂಸ್ಕೃತಿ ಹಾಗೂ ಸಮುದಾಯ ಸಂಘಟನೆಯ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಯನ್ನು ಗುರುತಿಸಿ ಶ್ರೀ ಜಯಪ್ರಕಾಶ್ ಪೂಜಾರಿ ಅವರಿಗೆ ಗೌರವಾನ್ವಿತ ತುಳುವರ್ಲ್ಡ್ ಸಮ್ಮಾನ್ ಪ್ರದಾನ ಮಾಡಲಾಯಿತು.

ಮುಂಬೈ ಮಹಾನಗರದಲ್ಲಿ ತುಳು ಸಮುದಾಯವನ್ನು ಒಂದೇ ವೇದಿಕೆಗೆ ತರುವಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಸಂಘಟನೆ ಮತ್ತು ಭಾಷಾ ಚಟುವಟಿಕೆಗಳ ಮೂಲಕ ತುಳು ನುಡಿಯನ್ನು ಜೀವಂತವಾಗಿ ಉಳಿಸುವಲ್ಲಿ ಜಯಪ್ರಕಾಶ್ ಪೂಜಾರಿ ಅವರು ವಹಿಸಿದ ಸಕ್ರಿಯ ಪಾತ್ರವನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.

ಸನ್ಮಾನ ಸಮಾರಂಭದಲ್ಲಿ ತುಳು ವರ್ಡ್ ಫೌಂಡೇಶನ್ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಅಬುಧಬಿ, ಡಾ. ಮಾಧವ ಎಂ.ಕೆ., ಡಾ. ರಾಜೇಶ್ ಆಳ್ವ, ಅಲಯನ್ಸ್ ಯುನಿವರ್ಸಿಟಿಯ ರಿಜಿಸ್ಟರ್ ಜನರಲ್ ಸುರೇಖಾ ಶೆಟ್ಟಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದು ಗೌರವ ಸಲ್ಲಿಸಿದರು.
ತುಳುನಾಡಿನ ಮಣ್ಣು ಮತ್ತು ಮಾತನ್ನು ಮಹಾನಗರದಲ್ಲೂ ಜೀವಂತವಾಗಿ ಉಳಿಸುವ ಅವರ ಸೇವೆಗೆ ದೊರೆತ ಈ ಸಮ್ಮಾನ್, ತುಳು ಸಂಸ್ಕೃತಿಯ ವಿಸ್ತಾರ ಮತ್ತು ಸಮುದಾಯ ಬಾಂಧವ್ಯಕ್ಕೆ ಮಹತ್ವದ ಮಾನ್ಯತೆಯಾಗಿದೆ.



Related posts

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ

Mumbai News Desk

ಪಡುಬಿದ್ರಿ ನಡಿಪಟ್ನ ಮೊಗವೀರ ಮಹಾಸಭಾ ಮುಂಬಯಿ ಶಾಖೆಯ 136ನೇ ವಾರ್ಷಿಕ ಮಹಾಸಭೆ.

Mumbai News Desk

ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಕುತ್ಯಾರು  ಶತ ಸಂವತ್ಸರೋತ್ಸವ

Mumbai News Desk

ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣು

Mumbai News Desk

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.

Mumbai News Desk