September 6, 2026
Mumbai News Kannada
ಸುದ್ದಿ

ಮೂರು ದಶಕಗಳ ಆಯುರ್ವೇದ ಸೇವೆ: ಘಾಟ್‌ಕೋಪರ್‌ನಲ್ಲಿ ಸಾಲ್ಮರ ಆಯುರ್ವೇದದ 10ನೇ ಶಾಖೆ ಶುಭಾರಂಭ





ಮುಂಬಯಿ ಮಹಾನಗರದ ತುಳು-ಕನ್ನಡಿಗರ ಪ್ರೀತಿ, ವಿಶ್ವಾಸ ಮತ್ತು ನಿರಂತರ ಸಹಕಾರದಿಂದ ಸಾಲ್ಮರ ಆಯುರ್ವೇದ ಸಂಸ್ಥೆಯು ಇಂದು ದೊಡ್ಡ ಮಟ್ಟಕ್ಕೆ ಬೆಳೆದು ನಿಂತಿದೆ ಎಂದು ಸಂಸ್ಥೆಯ ಸಂಸ್ಥಾಪಕ, ಪಾರಂಪರಿಕ ವೈದ್ಯ ಸಂಶುದ್ದೀನ್ ಸಾಲ್ಮರ ತಿಳಿಸಿದರು.
ಘಾಟ್‌ಕೋಪರ್ ಪಶ್ಚಿಮದ ಮೆಟ್ರೋ ಪೂಲ್ ಬಿಲ್ಡಿಂಗ್‌ನಲ್ಲಿ ಸಾಲ್ಮರ ಆಯುರ್ವೇದ ಪೈಲ್ಸ್ ಕ್ಲಿನಿಕ್‌ನ ಹತ್ತನೇ ಶಾಖೆಯು ಜನವರಿ 18ರ ಆದಿತ್ಯವಾರದಂದು ಅದ್ದೂರಿಯಾಗಿ ಲೋಕಾರ್ಪಣೆಗೊಂಡಿತು. ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಚಾರ್ಟೆಡ್ ಅಕೌಂಟೆಂಟ್ ನೌಫಾಲ್ ಅವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಕ್ಲಿನಿಕ್ ಅನ್ನು ಉದ್ಘಾಟಿಸಿದರು.
ಕಳೆದ 30 ವರ್ಷಗಳಿಂದ ಮಹಾರಾಷ್ಟ್ರದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಯು ರೋಗಿಗಳಿಗೆ ವಿಶ್ವಾಸಾರ್ಹ ಚಿಕಿತ್ಸೆ ನೀಡುವಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿ ಮೂಲವ್ಯಾಧಿ (ಪೈಲ್ಸ್) ಸಮಸ್ಯೆಯ ಜೊತೆಗೆ ಕಿಡ್ನಿ ಸ್ಟೋನ್, ವಾತ ಸಂಬಂಧಿ ರೋಗಗಳು, ಸಂಧಿವಾತ, ಪಾರ್ಶ್ವವಾಯು, ಸೊಂಟ ನೋವು, ಮಂಡಿ ನೋವು, ಕಾಮಾಲೆ (ಜಾಂಡೀಸ್), ಗ್ಯಾಸ್ ಟ್ರಬಲ್ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಗೆ ಪರಿಣಾಮಕಾರಿ ಆಯುರ್ವೇದ ಔಷಧಗಳು ಲಭ್ಯವಿವೆ.
2006ರಲ್ಲಿ ಕರ್ನಾಟಕ ಸಂಘದ ಸಹಕಾರದೊಂದಿಗೆ ಬೃಹತ್ ಉಚಿತ ನಾಟಿ ವೈದ್ಯಕೀಯ ಶಿಬಿರವನ್ನು ಮಹಾರಾಷ್ಟ್ರದಲ್ಲಿ ಆಯೋಜಿಸಿ ಸಾವಿರಾರು ರೋಗಿಗಳಿಗೆ ಉಚಿತ ಔಷಧ ವಿತರಿಸಿದ ಹೆಗ್ಗಳಿಕೆಯನ್ನು ಈ ಸಂಸ್ಥೆ ಹೊಂದಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ, ಪಾರಂಪರಿಕ ವೈದ್ಯ ಸಂಶುದ್ದೀನ್ ಸಾಲ್ಮರ “ಮಹಾನಗರದ ತುಳು-ಕನ್ನಡಿಗರ ಪ್ರೀತಿ, ವಿಶ್ವಾಸ ಮತ್ತು ನಿರಂತರ ಸಹಕಾರದಿಂದ ಸಾಲ್ಮರ ಆಯುರ್ವೇದ ಸಂಸ್ಥೆಯು ಇಂದು ದೊಡ್ಡ ಮಟ್ಟಕ್ಕೆ ಬೆಳೆದು ನಿಂತಿದೆ” ಎಂದು ನುಡಿದರು.
ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಯ ನಿಝಾರ್, ಸಲಿತ್ ಯಿಯಾನ್, ಸಹೇಲ್ ಝಾಹೆದ್, ವೈದ್ಯರಾದ ಚಾರುಶೀಲ (B.A.M.S) ಮತ್ತು ತೀಯಾ ಸಮಾಜ ಮುಂಬಯಿ ಗೌರವ ಕಾರ್ಯದರ್ಶಿ ಬಾಬು ಬೆಲ್ಚಡ ಉಪಸ್ಥಿತರಿದ್ದರು. ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ವೈದ್ಯರಾದ ಸಂಶುದ್ದೀನ್ ಸಾಲ್ಮರ ಅವರನ್ನು 9535476373 ಸಂಖ್ಯೆಯ ಮೂಲಕ ಸಂಪರ್ಕಿಸಬಹುದಾಗಿದೆ.



Related posts

ದ್ವಿತೀಯ ಪಿಯುಸಿ ಫಲಿತಾಂಶ : ವಾಣಿಜ್ಯ ವಿಭಾಗದಲ್ಲಿ ಕುಮಾರಿ ಖುಷಿ ಲಕ್ಷ್ಮಣ್ ಕುಕ್ಯಾನ್ ಗೆ 91% ಅಂಕ.

Mumbai News Desk

ರಾಷ್ಟ್ರ, ಕರ್ನಾಟಕ ಮತ್ತು ಮಹಾರಾಷ್ಟ್ರದ ಇಂದಿನ ಸಂಕ್ಷಿಪ್ತ ಮುಖ್ಯಾಂಶಗಳು

Mumbai News Desk

ಅಜಿತ್ ಪವಾರ್ ನಿಧನ : ಮಹಾರಾಷ್ಟ್ರ ಸರ್ಕಾರದ ಅಧಿಕೃತ ಪ್ರಕಟಣೆ

Mumbai News Desk

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk

ಸಚಿವೆ ಲಕ್ಶ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ : ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಬಂಧನ

Mumbai News Desk

ಮುಂಬೈ ನ್ಯೂಸ್ ನ ಛಾಯಾಗ್ರಾಹಕ, ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ

Mumbai News Desk