July 23, 2026
Mumbai News Kannada
ಸುದ್ದಿ

ಮೂರು ದಶಕಗಳ ಆಯುರ್ವೇದ ಸೇವೆ: ಘಾಟ್‌ಕೋಪರ್‌ನಲ್ಲಿ ಸಾಲ್ಮರ ಆಯುರ್ವೇದದ 10ನೇ ಶಾಖೆ ಶುಭಾರಂಭ







ಮುಂಬಯಿ ಮಹಾನಗರದ ತುಳು-ಕನ್ನಡಿಗರ ಪ್ರೀತಿ, ವಿಶ್ವಾಸ ಮತ್ತು ನಿರಂತರ ಸಹಕಾರದಿಂದ ಸಾಲ್ಮರ ಆಯುರ್ವೇದ ಸಂಸ್ಥೆಯು ಇಂದು ದೊಡ್ಡ ಮಟ್ಟಕ್ಕೆ ಬೆಳೆದು ನಿಂತಿದೆ ಎಂದು ಸಂಸ್ಥೆಯ ಸಂಸ್ಥಾಪಕ, ಪಾರಂಪರಿಕ ವೈದ್ಯ ಸಂಶುದ್ದೀನ್ ಸಾಲ್ಮರ ತಿಳಿಸಿದರು.
ಘಾಟ್‌ಕೋಪರ್ ಪಶ್ಚಿಮದ ಮೆಟ್ರೋ ಪೂಲ್ ಬಿಲ್ಡಿಂಗ್‌ನಲ್ಲಿ ಸಾಲ್ಮರ ಆಯುರ್ವೇದ ಪೈಲ್ಸ್ ಕ್ಲಿನಿಕ್‌ನ ಹತ್ತನೇ ಶಾಖೆಯು ಜನವರಿ 18ರ ಆದಿತ್ಯವಾರದಂದು ಅದ್ದೂರಿಯಾಗಿ ಲೋಕಾರ್ಪಣೆಗೊಂಡಿತು. ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ಚಾರ್ಟೆಡ್ ಅಕೌಂಟೆಂಟ್ ನೌಫಾಲ್ ಅವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಕ್ಲಿನಿಕ್ ಅನ್ನು ಉದ್ಘಾಟಿಸಿದರು.
ಕಳೆದ 30 ವರ್ಷಗಳಿಂದ ಮಹಾರಾಷ್ಟ್ರದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಯು ರೋಗಿಗಳಿಗೆ ವಿಶ್ವಾಸಾರ್ಹ ಚಿಕಿತ್ಸೆ ನೀಡುವಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿ ಮೂಲವ್ಯಾಧಿ (ಪೈಲ್ಸ್) ಸಮಸ್ಯೆಯ ಜೊತೆಗೆ ಕಿಡ್ನಿ ಸ್ಟೋನ್, ವಾತ ಸಂಬಂಧಿ ರೋಗಗಳು, ಸಂಧಿವಾತ, ಪಾರ್ಶ್ವವಾಯು, ಸೊಂಟ ನೋವು, ಮಂಡಿ ನೋವು, ಕಾಮಾಲೆ (ಜಾಂಡೀಸ್), ಗ್ಯಾಸ್ ಟ್ರಬಲ್ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಗೆ ಪರಿಣಾಮಕಾರಿ ಆಯುರ್ವೇದ ಔಷಧಗಳು ಲಭ್ಯವಿವೆ.
2006ರಲ್ಲಿ ಕರ್ನಾಟಕ ಸಂಘದ ಸಹಕಾರದೊಂದಿಗೆ ಬೃಹತ್ ಉಚಿತ ನಾಟಿ ವೈದ್ಯಕೀಯ ಶಿಬಿರವನ್ನು ಮಹಾರಾಷ್ಟ್ರದಲ್ಲಿ ಆಯೋಜಿಸಿ ಸಾವಿರಾರು ರೋಗಿಗಳಿಗೆ ಉಚಿತ ಔಷಧ ವಿತರಿಸಿದ ಹೆಗ್ಗಳಿಕೆಯನ್ನು ಈ ಸಂಸ್ಥೆ ಹೊಂದಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ, ಪಾರಂಪರಿಕ ವೈದ್ಯ ಸಂಶುದ್ದೀನ್ ಸಾಲ್ಮರ “ಮಹಾನಗರದ ತುಳು-ಕನ್ನಡಿಗರ ಪ್ರೀತಿ, ವಿಶ್ವಾಸ ಮತ್ತು ನಿರಂತರ ಸಹಕಾರದಿಂದ ಸಾಲ್ಮರ ಆಯುರ್ವೇದ ಸಂಸ್ಥೆಯು ಇಂದು ದೊಡ್ಡ ಮಟ್ಟಕ್ಕೆ ಬೆಳೆದು ನಿಂತಿದೆ” ಎಂದು ನುಡಿದರು.
ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಯ ನಿಝಾರ್, ಸಲಿತ್ ಯಿಯಾನ್, ಸಹೇಲ್ ಝಾಹೆದ್, ವೈದ್ಯರಾದ ಚಾರುಶೀಲ (B.A.M.S) ಮತ್ತು ತೀಯಾ ಸಮಾಜ ಮುಂಬಯಿ ಗೌರವ ಕಾರ್ಯದರ್ಶಿ ಬಾಬು ಬೆಲ್ಚಡ ಉಪಸ್ಥಿತರಿದ್ದರು. ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ವೈದ್ಯರಾದ ಸಂಶುದ್ದೀನ್ ಸಾಲ್ಮರ ಅವರನ್ನು 9535476373 ಸಂಖ್ಯೆಯ ಮೂಲಕ ಸಂಪರ್ಕಿಸಬಹುದಾಗಿದೆ.



Related posts

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್.ಕೋಡಿ ತೋಕೂರಿನಲ್ಲಿ ಬೇಸಿಗೆ ಶಿಬಿರ – ಚಿನ್ನರ ಹಬ್ಬ-2025ಕ್ಕೆ ಚಾಲನೆ

Mumbai News Desk

ಯಕ್ಷಗಾನ ವಿಶ್ವಗಾನವಾಗಿ ಮೆರಯಲಿ – ಶ್ರೀ ಶ್ರೀ ಶ್ರೀ ಸಚ್ವಿದಾಂನಂದ ಭಾರತಿ ಸ್ವಾಮೀಜಿ

Mumbai News Desk

ಲೋಕಸಭಾ ಚುನಾವಣೆ : ಉಡುಪಿ ಗೆ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡಕ್ಕೆ ಕ್ಯಾ. ಬ್ರಿಜೇಶ್ ಚೌಟ.

Mumbai News Desk

ಕುಂಬಳೆ : ಡಿವೈಎಫ್ಐ ಪ್ರ‌ಮುಖ ನಾಯಕಿ, ಯುವ ನ್ಯಾಯವಾದಿ ರಂಜಿತಾ ಆತ್ಮಹತ್ಯೆಗೆ ಶರಣು

Mumbai News Desk

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ

Mumbai News Desk

ಮಧೂರು ಕ್ಷೇತ್ರ ಮಹಾತ್ಮೆ” ಸಹಿತ ಅನೇಕ ಪ್ರಸಂಗ ಕಾವ್ಯ ಬರೆದ ಕಾಸರಗೋಡಿಮಧೂರು ವೆಂಕಟಕೃಷ್ಣ ನಿಧನ.

Mumbai News Desk