30.6 C
Mumbai
April 23, 2026
Mumbai News Kannada
ಪ್ರಕಟಣೆ

ಚಿತ್ರಕಲಾವಿದ ಜಯ್ ಸಾಲಿಯನ್ ಅವರಿಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗೌರವ





ಮುಂಬೈ: ಚಿತ್ರಕಲಾ ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ನಿಷ್ಠೆ, ಸಮರ್ಪಣೆ ಹಾಗೂ ಸೃಜನಾತ್ಮಕತೆಯಿಂದ ಸೇವೆ ಸಲ್ಲಿಸುತ್ತಿರುವ ಮುಂಬೈ ಪವೈಯ ನಿವಾಸಿ ಜಯ್ ಸಾಲಿಯನ್ ಅವರು ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ ಚಿತ್ರಪಟ ಯೂನಿಯನ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

​ಚಿತ್ರಕಲಾ ಕ್ಷೇತ್ರದಲ್ಲಿ ಅವರು ಮಾಡಿರುವ ಗಮನಾರ್ಹ ಸಾಧನೆ ಹಾಗೂ ಸಮಾಜೋಪಯೋಗಿ ಕಾರ್ಯಗಳಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ–2025’ ಅನ್ನು ಘೋಷಿಸಲಾಗಿದೆ. ಸದ್ಯ ಜಯ್ ಸಾಲಿಯನ್ ಅವರು ಪವೈಯ ಎ.ಎಂ. ನಾಯಕ್ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜನೆವರಿ 25ರಂದು ಪ್ರದಾನ:

ಮುಂಬೈಯ ಪ್ರಭಾದೇವಿಯಲ್ಲಿರುವ ರವೀಂದ್ರ ನಾಟ್ಯ ಮಂದಿರದಲ್ಲಿ 2026ರ ಜನೆವರಿ 25ರಂದು ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮದಲ್ಲಿ ಚಿತ್ರರಂಗ, ಸಾಮಾಜಿಕ ಕ್ಷೇತ್ರ ಸೇರಿದಂತೆ ವಿವಿಧ ವಲಯಗಳ ಗಣ್ಯರು ಭಾಗವಹಿಸಲಿದ್ದಾರೆ.

ಬಾಲ್ಯದಿಂದಲೇ ಕಲೆಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಜಯ್ ಸಾಲಿಯನ್ ಅವರ ಸಾಧನೆಯ ಹಾದಿ ಸುಲಭದ್ದಾಗಿರಲಿಲ್ಲ. ಆರ್ಥಿಕ ಸಂಕಷ್ಟ, ಮಾರ್ಗದರ್ಶನದ ಕೊರತೆ ಹಾಗೂ ಸಾಮಾಜಿಕ ಅಡೆತಡೆಗಳ ನಡುವೆಯೂ ಕಠಿಣ ಪರಿಶ್ರಮದಿಂದ ಶಿಕ್ಷಣ ಪೂರ್ಣಗೊಳಿಸಿ, ಚಿತ್ರಕಲೆಯಲ್ಲಿ ತಮ್ಮದೇ ಆದ ವಿಭಿನ್ನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ.

​ವಾಸ್ತವಿಕತೆ, ಸೃಜನಶೀಲತೆ ಹಾಗೂ ವಿನೂತನ ಸ್ಪಷ್ಟತೆಯುಳ್ಳ ಅವರ ಕಲಾಕೃತಿಗಳಲ್ಲಿ ಸಾಮಾಜಿಕ ವಾಸ್ತವ, ಮಾನವೀಯ ಭಾವನೆಗಳು ಮತ್ತು ಸಾಂಸ್ಕೃತಿಕ ಪ್ರತಿಬಿಂಬಗಳು ಎದ್ದು ಕಾಣುತ್ತವೆ. ಇವರ ಸಾಧನೆಯನ್ನು ಗುರುತಿಸಿ ಗೌರವ ಸಂದಿರುವುದು ಚಿತ್ರಕಲಾ ಕ್ಷೇತ್ರ ಹಾಗೂ ಸಾಮಾಜಿಕ ವಲಯದಲ್ಲಿ ಸಂತಸ ಮೂಡಿಸಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಎ. 27ಕ್ಕೆ ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk

ಗೊರೆಗಾಂವ್‌ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮ ಜು21: ಗುರುಪೂರ್ಣಿಮಾ  ಆಚರಣೆ,

Mumbai News Desk

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.

Mumbai News Desk

ಕರ್ನಾಟಕ ಸಮಾಜ ಸೂರತ್ : ನ. 24ರಂದು ಕರ್ನಾಟಕ ರಾಜ್ಯೋತ್ಸವ

Mumbai News Desk

KARNATAKA SANGHA DUBAI GEARED UP FOR THE MEGA ‘RAJYOTSAVA 2024’ EVENT ON 10th Nov in DUBAI

Mumbai News Desk

ಕುಲಾಲ ಪ್ರತಿಷ್ಠಾನ ಮಂಗಳೂರು- ಏಪ್ರಿಲ್ 13 ರಂದು ಕುಲಾಲ ಪರ್ಬ

Mumbai News Desk