32 C
Mumbai
March 7, 2026
Mumbai News Kannada
ಪ್ರಕಟಣೆ

ನಾಸಿಕ್: ನಾಳೆ(ಜ.26) ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ





ನಾಸಿಕ್: ಇಲ್ಲಿನ ತುಳು ಸೇವಾ ಸಂಘದ 36ನೇ ಮಹಾಸಭೆ ಮತ್ತು ವಾರ್ಷಿಕೋತ್ಸವ ಸಮಾರಂಭವು ಜ. 26ರಂದು ಅಪರಾಹ್ನ 4 ಗಂಟೆಗೆ ನಾಸಿಕ್‌ನ ಚೇತನ್ ನಗರದ ಹೋಟೆಲ್ ಸಾಯಿ ಪ್ಯಾಲೇಸ್ ಸಮೀಪದ ಲಕ್ಷ್ಮೀನಾರಾಯಣ ಸಭಾಗೃಹದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

​ಸಂಘದ ಅಧ್ಯಕ್ಷ ನಿತ್ಯಾನಂದ ಆರ್. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪೂರ್ಣಿಮಾ ಎಸ್. ಶೆಟ್ಟಿ ಹಾಗೂ ಸಂಘಟಕ ಮತ್ತು ಪತ್ರಕರ್ತ ದಿನೇಶ್ ಕುಲಾಲ್ ಭಾಗವಹಿಸಲಿದ್ದಾರೆ.

ಸಮಾರಂಭದ ಅಂಗವಾಗಿ ಸಂಘದ ಸದಸ್ಯರಿಂದ ನೃತ್ಯ ವೈವಿಧ್ಯ ಪ್ರದರ್ಶನಗೊಳ್ಳಲಿದೆ. ಪ್ರಮುಖ ಆಕರ್ಷಣೆಯಾಗಿ ಸಂತೋಷ್ ಶೆಟ್ಟಿ ಕುಚೂರು ಮತ್ತು ಧನ್ಯಾ ಹರೀಶ್ ಶೆಟ್ಟಿ ಅವರ ಸಂಯೋಜನೆಯಲ್ಲಿ ಸಂಘದ ಸದಸ್ಯರಿಂದ ‘ದಶಾವತಾರಂ’ ವೈವಿಧ್ಯಮಯ ನೃತ್ಯ ರೂಪಕ ಪ್ರದರ್ಶನಗೊಳ್ಳಲಿದೆ.

​ಈ ಸಂಭ್ರಮದ ಕಾರ್ಯಕ್ರಮದಲ್ಲಿ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ, ಕೋಶಾಧಿಕಾರಿ ಪ್ರಕಾಶ್ ಅಚ್ಚಣ್ಣ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕಲ್ಪನಾ ಸಂಜೀವ ಬಂಗೇರ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಹರೀಶ್ ಆಳ್ವ ಮತ್ತು ಅನಿಲ್ ಕರ್ಕೇರ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಪ್ರಕಟಣೆಯಲ್ಲಿ ಕೋರಿದ್ದಾರೆ.



Related posts

ಸಿರಿಕಲಾ ಮೇಳದ ಪುಣೆ-ಮುಂಬೈ ದಶಮಾನೋತ್ಸವ ತಿರುಗಾಟ

Mumbai News Desk

ಮುಂಬಯಿ ಕನ್ನಡ ಸಂಘ : ಜ.18 ರಂದು ಶ್ರೀ ಪುರಂದರದಾಸರ ಆರಾಧನೆ

Mumbai News Desk

  ಜ 20.   ಬೋಂಬೆ ಬಂಟ್ಸ್  ಎಸೋಸಿಯೇಶನ್  ವತಿಯಿಂದ ಮಾಜಿ  ಅಧ್ಯಕ್ಷರಾದ ಜಯ ಎನ್ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ

Mumbai News Desk

ಜ. 5 : ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಾಸೋಪಾರ, 29ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ಶ್ರೀ ಗುರು ಸದ್ಗುರು ಅಯ್ಯಪ್ಪ ಭಕ್ತವೃಂದ ಟ್ರಸ್ಟ್ ಮಲಾಡ್ ಪಶ್ಚಿಮ ಡಿ 17: 28ನೇ ವರ್ಷದ ಅಯ್ಯಪ್ಪ ಮಹಾಪೂಜೆ

Mumbai News Desk

ಡಿ. 17ರಂದು  ಪೊವಾಯಿ  ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ

Mumbai News Desk