32 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ಜ. 27ಕ್ಕೆ ವಾರ್ಷಿಕ ಮಹೋತ್ಸವದ ಸಂಭ್ರಮ:






ಜೋಗೇಶ್ವರಿ ಪೂರ್ವ ಕ್ರಷ್ಣ ನಗರ,ಪೌರಾಣಿಕ ಹಿನ್ನೆಲೆಯ ಗುಂಪ ಟೇಕ್ಡಿ ಸಮೀಪದ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ವಿಶ್ವಾಸು ನಾಮ ಸಂವತ್ಸರದ ಮಕರ ಮಾಸ 14ನೇ ದಿನವಾದ ಜನವರಿ 27 ಮಂಗಳವಾರದಂದು ವಾರ್ಷಿಕ ಮಹೋತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಲಿದೆ. ದೇವಸ್ಥಾನದ ಪ್ರಧಾನ ಅರ್ಚಕರಾದ ಪಾದೂರು ಶ್ರೀ ನರಹರಿ ತಂತ್ರಿಗಳ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ.


ಅಂದು ಬೆಳಗ್ಗೆ 8.30ರಿಂದ ಪ್ರಾರ್ಥನೆ, ಸಂಕಲ್ಪ, ಶುದ್ಧ ಪುಣ್ಯಾಹ, ಎಲ್ಲಾ ಪರಿವಾರ ದೇವರುಗಳಿಗೆ ಪಂಚಾಮೃತ ಸಹಿತ ನವಕ ಕಲಶ ಅಭಿಷೇಕ, ಪ್ರಸನ್ನ ಪೂಜೆ, ಹಾಗೂ ಶ್ರೀ ದೇವರಿಗೆ ಪಂಚಾಮೃತ ಸಹಿತ 25 ಕಲಶ ಅಭಿಷೇಕ, ಪ್ರಧಾನ ಹೋಮ, ಪ್ರಸನ್ನ ಪೂಜೆ, ಮಹಾಪೂಜೆ ನಡೆದು ಮಧ್ಯಾಹ್ನ ಅನ್ನ ಸಂತರ್ಪಣೆ ಜರುಗಲಿದೆ.
ಮಧ್ಯಾಹ್ನ 2.30ರಿಂದ ಶ್ರೀ ಜಗದಂಬಾ ಯಕ್ಷಗಾನ ಕಲಾಮಂಡಳಿ ಮತ್ತು ಊರಿನ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ‘ಸುಧನ್ವ ಮೋಕ್ಷ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಸಂಜೆ 6 ಗಂಟೆಗೆ ಶ್ರೀ ದೇವರ ಉತ್ಸವ ಬಲಿ ಹಾಗೂ ರಾತ್ರಿ 7.30ಕ್ಕೆ ರಂಗಪೂಜೆ, ಮಹಾಪೂಜೆ ಮತ್ತು ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮಗಳು ಜರಗಲಿದೆ.

ಆಡಳಿತ ಸಮಿತಿಯ ಅಧ್ಯಕ್ಷ/ಆಡಳಿತದ ಮೊಕ್ತೇಸರ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ಟ್ರಸ್ಟಿ /ಉಪಾಧ್ಯಕ್ಷ ಎಚ್. ಬಾಬು ಪೂಜಾರಿ, ಟ್ರಸ್ಟಿ/ಗೌರವ ಕಾರ್ಯದರ್ಶಿ ದೇವದಾಸ್ ಎಸ್. ಸುವರ್ಣ, ಟ್ಟ್ರಸ್ಟಿ /ಕೋಶಾಧಿಕಾರಿ ಡಿ. ಟಿ. ಕುಂದರ್, ಟ್ರಸ್ಟಿಗಳಾದ ಸಂಜೀವ ಪಿ. ಪೂಜಾರಿ, ಎಂ. ಸಿ. ಸುವರ್ಣ, ಜಿ. ಟಿ. ಆಚಾರ್ಯ, ಸುಂದರ್ ಸಿ. ಪೂಜಾರಿ, ಸಂತೋಷ್ ಜೆ. ಶೆಟ್ಟಿ, ಲಕ್ಷ್ಮಣ್ ಸಿ. ಪೂಜಾರಿ, ಶೇಖರ್ ಕರ್ಕೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವನಿತಾ ಜೆ. ಶೆಟ್ಟಿ, ಉಪಕಾರ್ಯಾಧ್ಯಕ್ಷೆ ಸರಸ್ವತಿ ಪೂಜಾರಿ, ಸಂಚಾಲಕಿ ಕಲಾವತಿ ಡಿ. ಪೂಜಾರಿ ಹಾಗೂ ಸೇವಾ ಸಮಿತಿಯ ಸರ್ವ ಸದಸ್ಯರು ಈ ಭಕ್ತಿಪೂರ್ವಕ ಸಮಾರಂಭಕ್ಕೆ ಸಮಸ್ತ ಭಕ್ತಾಭಿಮಾನಿಗಳನ್ನು ಆಹ್ವಾನಿಸಿದ್ದಾರೆ.



Related posts

ಚಿತ್ರಾಪು ಬಿಲ್ಲವರ ಸಂಘ (ರಿ), ಮುಂಬಯಿ,ಡಿ.29 ರಂದು ವಾರ್ಷಿಕ ಮಹಾಸಭೆ,

Mumbai News Desk

ಮೀರಾಗಾಂವ್: ಜ.1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘ : ನ. 17 ಮತ್ತು 18ಕ್ಕೆ ಶತಮಾನೋತ್ತರ ಬೆಳ್ಳಿ ಹಬ್ಬ ಆಚರಣೆ.

Mumbai News Desk

ಸೆ.20 : ಮಾತೃಭೂಮಿ ಕೋ -ಆಪರೇಟಿವ್ ಕ್ರೆಡಿಟ್ ಸೊಸೈಟಿ ಇದರ 37ನೇ ವಾರ್ಷಿಕ ಮಹಾಸಭೆ

Mumbai News Desk

ಕನ್ನಡ ಸಂಘ ಸಯನ್ : ಮಾ. 29ರಂದು ಬೃಹತ್ ಉದ್ಯೋಗ ಮೇಳ

Mumbai News Desk

ಹವ್ಯಕ ವೆಲ್ಫೇರ್ ಟ್ರಸ್ಟ್ ನ ಸಂಯೋಜನೆಯಲ್ಲಿ ಜು. 28ಕ್ಕೆ ಯಕ್ಷಗಾನ ಪ್ರದರ್ಶನ

Mumbai News Desk