July 22, 2026
Mumbai News Kannada
ಪ್ರಕಟಣೆ

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ ಪೂರ್ವ : ಜ. 27ಕ್ಕೆ ವಾರ್ಷಿಕ ಮಹೋತ್ಸವದ ಸಂಭ್ರಮ:








ಜೋಗೇಶ್ವರಿ ಪೂರ್ವ ಕ್ರಷ್ಣ ನಗರ,ಪೌರಾಣಿಕ ಹಿನ್ನೆಲೆಯ ಗುಂಪ ಟೇಕ್ಡಿ ಸಮೀಪದ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ವಿಶ್ವಾಸು ನಾಮ ಸಂವತ್ಸರದ ಮಕರ ಮಾಸ 14ನೇ ದಿನವಾದ ಜನವರಿ 27 ಮಂಗಳವಾರದಂದು ವಾರ್ಷಿಕ ಮಹೋತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಲಿದೆ. ದೇವಸ್ಥಾನದ ಪ್ರಧಾನ ಅರ್ಚಕರಾದ ಪಾದೂರು ಶ್ರೀ ನರಹರಿ ತಂತ್ರಿಗಳ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ.


ಅಂದು ಬೆಳಗ್ಗೆ 8.30ರಿಂದ ಪ್ರಾರ್ಥನೆ, ಸಂಕಲ್ಪ, ಶುದ್ಧ ಪುಣ್ಯಾಹ, ಎಲ್ಲಾ ಪರಿವಾರ ದೇವರುಗಳಿಗೆ ಪಂಚಾಮೃತ ಸಹಿತ ನವಕ ಕಲಶ ಅಭಿಷೇಕ, ಪ್ರಸನ್ನ ಪೂಜೆ, ಹಾಗೂ ಶ್ರೀ ದೇವರಿಗೆ ಪಂಚಾಮೃತ ಸಹಿತ 25 ಕಲಶ ಅಭಿಷೇಕ, ಪ್ರಧಾನ ಹೋಮ, ಪ್ರಸನ್ನ ಪೂಜೆ, ಮಹಾಪೂಜೆ ನಡೆದು ಮಧ್ಯಾಹ್ನ ಅನ್ನ ಸಂತರ್ಪಣೆ ಜರುಗಲಿದೆ.
ಮಧ್ಯಾಹ್ನ 2.30ರಿಂದ ಶ್ರೀ ಜಗದಂಬಾ ಯಕ್ಷಗಾನ ಕಲಾಮಂಡಳಿ ಮತ್ತು ಊರಿನ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ‘ಸುಧನ್ವ ಮೋಕ್ಷ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಸಂಜೆ 6 ಗಂಟೆಗೆ ಶ್ರೀ ದೇವರ ಉತ್ಸವ ಬಲಿ ಹಾಗೂ ರಾತ್ರಿ 7.30ಕ್ಕೆ ರಂಗಪೂಜೆ, ಮಹಾಪೂಜೆ ಮತ್ತು ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮಗಳು ಜರಗಲಿದೆ.

ಆಡಳಿತ ಸಮಿತಿಯ ಅಧ್ಯಕ್ಷ/ಆಡಳಿತದ ಮೊಕ್ತೇಸರ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ಟ್ರಸ್ಟಿ /ಉಪಾಧ್ಯಕ್ಷ ಎಚ್. ಬಾಬು ಪೂಜಾರಿ, ಟ್ರಸ್ಟಿ/ಗೌರವ ಕಾರ್ಯದರ್ಶಿ ದೇವದಾಸ್ ಎಸ್. ಸುವರ್ಣ, ಟ್ಟ್ರಸ್ಟಿ /ಕೋಶಾಧಿಕಾರಿ ಡಿ. ಟಿ. ಕುಂದರ್, ಟ್ರಸ್ಟಿಗಳಾದ ಸಂಜೀವ ಪಿ. ಪೂಜಾರಿ, ಎಂ. ಸಿ. ಸುವರ್ಣ, ಜಿ. ಟಿ. ಆಚಾರ್ಯ, ಸುಂದರ್ ಸಿ. ಪೂಜಾರಿ, ಸಂತೋಷ್ ಜೆ. ಶೆಟ್ಟಿ, ಲಕ್ಷ್ಮಣ್ ಸಿ. ಪೂಜಾರಿ, ಶೇಖರ್ ಕರ್ಕೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವನಿತಾ ಜೆ. ಶೆಟ್ಟಿ, ಉಪಕಾರ್ಯಾಧ್ಯಕ್ಷೆ ಸರಸ್ವತಿ ಪೂಜಾರಿ, ಸಂಚಾಲಕಿ ಕಲಾವತಿ ಡಿ. ಪೂಜಾರಿ ಹಾಗೂ ಸೇವಾ ಸಮಿತಿಯ ಸರ್ವ ಸದಸ್ಯರು ಈ ಭಕ್ತಿಪೂರ್ವಕ ಸಮಾರಂಭಕ್ಕೆ ಸಮಸ್ತ ಭಕ್ತಾಭಿಮಾನಿಗಳನ್ನು ಆಹ್ವಾನಿಸಿದ್ದಾರೆ.



Related posts

ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬೈ ಬಿಲ್ಲವರು : ಸೆ. 27ರಂದು, ಕಾಂದಿವಲಿಯಲ್ಲಿ ಶನೀಶ್ವರ ಸಂಪೂರ್ಣ ಗ್ರಂಥ ಪಾರಾಯಣ, ಬ್ರಹ್ಮಶ್ರೀ ನಾರಾಯಣ ಗುರು ಪೂಜೆ

Mumbai News Desk

ಶ್ರೀ ಕೋಡ್ಬಬ್ಬು ದೈವಸ್ಥಾನ ಬಸ್ತಿಪಡ್ಪು, ಹೆಜಮಾಡಿ : ಎ. 3 ಹಾಗೂ ಎ. 4ರಂದು ವಾರ್ಷಿಕ ನೇಮೋತ್ಸವ

Mumbai News Desk

ಬಿ.. ಎಸ್ ಕೆ.ಬಿ. ಎಸೋಸಿಯೇಶನ್, ಗೋಕುಲ – ಶತಮಾನೋತ್ಸವ ಸಂಭ್ರಮಾಚರಣೆಗೆ ಸರ್ವಸಿದ್ಧತೆ

Mumbai News Desk

ದಶಂಬರ 20ರಂದು ಒಡಿಯೂರು ಶ್ರೀ ಸಂಸ್ಥಾನದಲ್ಲಿಶ್ರೀ ದತ್ತ ಜಯಂತಿ ಮಹೋತ್ಸವ – ಶ್ರೀ ದತ್ತ ಮಹಾಯಾಗ ಸಪ್ತಾಹ ಆರಂಭ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬಯಿ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 9ಕ್ಕೆ “ಸಾಫಲ್ಯ ಸ್ತ್ರಿ ಶಕ್ತಿ ” ವಿಶೇಷ ಕಾರ್ಯಕ್ರಮ.

Mumbai News Desk

ಜು. 20 : ಸಯಾನ್ ನ ಶ್ರೀ ನಿತ್ಯಾನಂದ ಸಭಾಗ್ರಹದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗೆ ಗುರುವಂದನೆ.

Mumbai News Desk