32 C
Mumbai
March 7, 2026
Mumbai News Kannada
ಮುಂಬಯಿ

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ (ರಿ ) – ವಾರ್ಷಿಕ  ವಿಹಾರಕೂಟ.






ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ (ರಿ) ಇದರ ವಾರ್ಷಿಕ ವಿಹಾರಕೂಟವು  ಜನವರಿ 24 ಮತ್ತು 25 ರಂದು ಎಷ್ಟೆಲ್ಲಾ ಫಾರ್ಮ್ ಅಂಡ್ ರೆಸಾರ್ಟ್, ಮನೋರಿ ಮಲಾಡ್ (ಪ ) ಮುಂಬೈ, ಇಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು. ಸಂಘದ ಸದಸ್ಯರು, ಮಹಿಳಾ ಸದಸ್ಯೆಯರು ಮತ್ತು ಮಕ್ಕಳು ತುಂಬಾ  ಉತ್ಸಾಹದಿಂದ ಭಾಗವಸಿದರು.

ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಮಹಿಳಾ ಸದಸ್ಯೆಯರಿಂದ ಅರಸಿನ  ಕುಂಕುಮ ಕಾರ್ಯಕ್ರಮ ನಡೆಯಿತು. ಕಾಪು ಮೊಗವೀರ ಸಭಾ ಮುಂಬೈ ಇದರ ಅಧ್ಯಕ್ಷರಾದ ಸತೀಶ್ ಕರ್ಕೇರರು ಅರಸಿನ ಕುಂಕುಮದ ಮಹತ್ವದ ಬಗ್ಗೆ ವಿವರಿಸಿದರು. ಸದಸ್ಯರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸಂಘದ ಸದಸ್ಯರು ಮಹಿಳಾ ಸದಸ್ಯೆಯರು ಮತ್ತು ಮಕ್ಕಳು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರು.
ಅಧ್ಯಕ್ಷರು, ಅತಿಥಿಗಳು  ಮತ್ತು ಪದಾಧಿಕಾರಿಗಳು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಮಹಿಳಾ ಸದಸ್ಯೆಯರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು

ಗೌರವ ಅಧ್ಯಕ್ಷರಾದ ಮಾಧವ ಟಿ ಪುತ್ರನ್ ಮಾತನಾಡಿ ಸಭೆ ಮತ್ತು ಇತರ ಕಾರ್ಯಕ್ರಮಗಳಲ್ಲಿ ಮಹಿಳಾ ಮತ್ತು ಯುವ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸಂತೋಷದ ವಿಷಯ, ಮತ್ತು ಇಂತಹ ಕಾರ್ಯಕ್ರಮಗಳಿಂದ ನಮ್ಮ ಸದಸ್ಯರ ಕಷ್ಟ ಸುಖಗಳನ್ನು ಅರಿತುಕೊಳ್ಳಲು ಮತ್ತು ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು. ಅಧ್ಯಕ್ಷರಾದ ಜನಾರ್ದನ್ ಮೆಂಡನ್, ಉಪಾಧ್ಯಕ್ಷರಾದ   ಶಂಕರ್ ಪುತ್ರನ್ ಮಾತನಾಡಿದರು.



Related posts

ತ್ರಿಶಾ ಉದಯ ಶೆಟ್ಟಿ ಶೇಗೆ   80.00 %

Mumbai News Desk

ಬಂಟರ ಸಂಘ ಮುಂಬಯಿ ; ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿ ಯುವ ವಿಭಾಗದ ವತಿಯಿಂದ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ: ನವಿ ಮುಂಬೈ ಶಾಖೆಯಲ್ಲಿ ಮಂಡಳಿಯ 124ನೇ ಸಂಸ್ಥಾಪನಾ ದಿನಾಚರಣೆ

Mumbai News Desk

ಮಲಾಡ್ ಪೂರ್ವ ದ  ಲಕ್ಷ್ಮಣ್ ನಗರದ ಶ್ರೀ ಶನೀಶ್ವರ ಮಹೋತಭಾರ  ದೇವಸ್ಥಾನದ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗು ಶಿಕ್ಷಣದ ನೆರವು.

Mumbai News Desk

ಥಾಣೆ ಘೋಡ್ ಬಂದರ್ ರೋಡ್ ಕನ್ನಡ ಅಸೋಸಿಯೇಷನ್ ದಶಮಾನೋತ್ಸವ, ಸಾಂಸ್ಕೃತಿಕ ವೈಭವ

Mumbai News Desk

ರತನ್ ಪೂಜಾರಿ ಯವರಿಗೆ ಶ್ರೀ ವಿಷ್ಣು ಮಂದಿರದಲ್ಲಿ ಗೌರವಾರ್ಪಣೆ.

Mumbai News Desk