September 6, 2026
Mumbai News Kannada
ಸುದ್ದಿ

ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು ವತಿಯಿಂದ ಗಣರಾಜ್ಯೋತ್ಸವ ಆಚರಣೆ





ದೇಶಸೇವೆಗೆ ಯುವಜನತೆ ಮುಂದಾಗಲಿ: ಹಳೆಯಂಗಡಿಯಲ್ಲಿ ಸೈನಿಕ ಮೋಹನ್ ದಾಸ್ ವಿ. ಕೋಟ್ಯಾನ್ ಕರೆ

ಹಳೆಯಂಗಡಿ: “ಭಾರತಾಂಬೆಯ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಯುವಜನತೆ ಕೇವಲ ವೃತ್ತಿಜೀವನದತ್ತ ಗಮನ ಹರಿಸದೆ, ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಸೇನೆಯನ್ನು ಸೇರುವ ಮೂಲಕ ದೇಶದ ಸಾರ್ವಭೌಮತ್ವವನ್ನು ಎತ್ತಿಹಿಡಿಯಲು ಮುಂದಾಗಬೇಕು,” ಎಂದು ಭಾರತೀಯ ಸೇನೆಯ ಹಾಲಿ ಸೈನಿಕ ನಾಯಕ್ ಮೋಹನ್ ದಾಸ್ ವಿ. ಕೋಟ್ಯಾನ್ ಅವರು ಹೇಳಿದರು.

​ಅವರು ಸೋಮವಾರ ತೋಕೂರಿನಲ್ಲಿ ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ ದಕ್ಷಿಣ ಕನ್ನಡ ಜಿಲ್ಲೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಹಾಗೂ ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇವರುಗಳ ಮಾರ್ಗದರ್ಶನದಲ್ಲಿ, ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು ಇದರ ಆಶ್ರಯದಲ್ಲಿ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು. ತಮ್ಮ ಸೇವಾ ಅವಧಿಯ ರೋಚಕ ಅನುಭವಗಳನ್ನು ಹಂಚಿಕೊಂಡ ಅವರು, ಶಿಸ್ತು ಮತ್ತು ದೇಶಪ್ರೇಮ ಯುವಶಕ್ತಿಯ ಮೂಲಮಂತ್ರವಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸುರತ್ಕಲ್‌ನ ದುರ್ಗಾ ಕನ್ಸ್ಟ್ರಕ್ಷನ್ ಮಾಲೀಕರಾದ ಪ್ರವೀಣ್ ಕುಮಾರ್ ಹಳೆಯಂಗಡಿ ಮಾತನಾಡಿ, “ಗಣರಾಜ್ಯೋತ್ಸವವು ಸಂವಿಧಾನದ ಆಶಯಗಳನ್ನು ಸ್ಮರಿಸುವ ದಿನ. ಇಂತಹ ಸಮಾಜಮುಖಿ ಸಂಘಟನೆಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ದೇಶದ ಘನತೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುತ್ತಿರುವುದು ಶ್ಲಾಘನೀಯ,” ಎಂದರು.

ಇದೇ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ತ್ರಿಷಾ ಎಸ್. ಸುವರ್ಣ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ತೋರಿದ ಪ್ರತಿಭಾನ್ವಿತ ವಿದ್ಯಾರ್ಥಿ ಧನಿಶ್ ವಿ. ದೇವಾಡಿಗ ಅವರಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಯಿತು.

​ವೇದಿಕೆಯಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾದ ಯೋಗೀಶ್ ಕೋಟ್ಯಾನ್, ಅಧ್ಯಕ್ಷರಾದ ಸುರೇಶ್ ಶೆಟ್ಟಿ ಹಾಗೂ ಮಹಿಳಾ ಕಾರ್ಯದರ್ಶಿ ಶೈಲಾ ಶೆಟ್ಟಿಗಾರ್ ಉಪಸ್ಥಿತರಿದ್ದರು.

​ಕಾರ್ಯಕ್ರಮದಲ್ಲಿ ಗೌರವ ಮಾರ್ಗದರ್ಶಕರಾದ ರಮೇಶ್ ಅಮೀನ್ ಮುಂಬೈ, ಪಡುಪಣಂಬೂರು ಗ್ರಾ.ಪಂ ಸದಸ್ಯರಾದ ಗಣೇಶ್ ದೇವಾಡಿಗ ಪಂಜ ಹಾಗೂ ಸಂತೋಷ್ ಕುಮಾರ್, ಕ್ಲಬ್‌ನ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಸ್ವಾಗತಿಸಿದರು. ಕೋಶಾಧಿಕಾರಿ ಜಗದೀಶ್ ಕುಲಾಲ್ ವಂದನಾರ್ಪಣೆ ಮಾಡಿದರು. ಚಂದ್ರ ಸುವರ್ಣ ನಾಡಗೀತೆ ಹಾಡಿದರು. ನೀಮಾ ಸನಿಲ್ ಮತ್ತು ಹರ್ಷಿತಾ ದೇವಾಡಿಗ ಸನ್ಮಾನ ಪತ್ರ ವಾಚಿಸಿದರು. ಸುನಿಲ್ ದೇವಾಡಿಗ ಹಾಗೂ ಗೌತಮ್ ಬೆಲ್ಚೆಡ್ ಕಾರ್ಯಕ್ರಮಕ್ಕೆ ಸಹಕರಿಸಿದರು. ಪ್ರಧಾನ ಕಾರ್ಯದರ್ಶಿ ಸಂತೋಷ್ ದೇವಾಡಿಗ ಸಮಗ್ರ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.



Related posts

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Mumbai News Desk

ಕರ್ನಾಟಕ ಸಮಾಜ ಸೂರತ್ : “ಕರ್ನಾಟಕ ರಾಜ್ಯೋತ್ಸವ ” ಆಚರಣೆ

Mumbai News Desk

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.

Mumbai News Desk

  ’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ, ರಿಷಬ್ ಶೆಟ್ಟಿ ಸಹಿತ 30 ಜನ ಸಹಕಲಾವಿದರುಅಪಾಯದಿಂದ ಪಾರು

Mumbai News Desk

ವಿಲೇಪಾರ್ಲೆ : ಕೆಡವಲಾದ ಜೈನ ಮಂದಿರದ ಪಕ್ಕದ ಹೋಟೆಲ್ ಗೆ ಬಿಎಂಸಿ(BMC)ಯಿಂದ ನೋಟಿಸ್ ಜಾರಿ

Mumbai News Desk

ನಿಟ್ಟೆ ವಿಶ್ವವಿದ್ಯಾಲಯದ   ಮಹಾಲಿಂಗ ಅಡ್ಯಂತಾಯ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಅಫ್ ಟೆಕ್ನಾಲಜಿಯ  ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮೂಲ್ಕಿ ಜೀವನ್ ಕೆ. ಶೆಟ್ಟಿ  ಆಯ್ಕೆ

Mumbai News Desk