September 6, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಗಣರಾಜ್ಯೋತ್ಸವ ಆಚರಣೆ.





ಬಿಲ್ಲವರ ಅಸೋಸಿಯೇಷನ್ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ದಿನಾಂಕ 26.01.2026 ರಂದು ಸಂಘದ ವಠಾರದಲ್ಲಿ ಜರಗಿತು.

ಅಂದು ಬೆಳಗ್ಗೆ ಗುರುಪೂಜೆ ಆದ ನಂತರ ಮುಖ್ಯ ಅತಿಥಿಯಾಗಿ ಆಗಮಿಸಿದ ಹಿರಿಯ ಸದಸ್ಯರಾದ ರಾಜು ಪೂಜಾರಿ ದಂಪತಿಯವರಿಂದ ಧ್ವಜಾರೋಹಣ ನೆರವೇರಿಸಿ ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲಾಯಿತು.

ತದ ನಂತರ ಜರಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್ ರವರು ವಹಿಸಿದರು. ಮುಖ್ಯ ಅತಿಥಿಯಾಗಿ ರಾಜು ಪೂಜಾರಿಯವರು ಮತ್ತು ಅವರ ಧರ್ಮ ಪತ್ನಿ ಗಿರಿಜಕ್ಕನವರು ಉಪಸ್ಥಿತರಿದ್ದರು.
ಸಭಿಕರಲ್ಲಿ ಪುಟಾಣಿಗಳು ದೇಶ ಭಕ್ತಿ ಗೀತೆ ಮತ್ತು ರಾಷ್ಟ್ರದ ಬಗ್ಗೆ ಭಾಷಣ ಮಾಡಿದರು, ಈ ಸಂದರ್ಭದಲ್ಲಿ ಅಥಿತಿಗಳನ್ನು ಫಲಪುಷ್ಪ ಸ್ಮರಣಿಕೆ ಮತ್ತು ಶಾಲು ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಉಪ ಕಾರ್ಯಾಧ್ಯಕ್ಷರಾದ ಚಂದ್ರಹಾಸ ಪಾಲನ್ ಮತ್ತು ಸಚಿನ್ ಪೂಜಾರಿ, ಗೌರವ ಕಾರ್ಯಾಧ್ಯಕ್ಷರಾದ ಮಂಜಪ್ಪ ಪೂಜಾರಿ ಮತ್ತು ಜತೆ ಕೋಶಾಧಿಕಾರಿ ಜಗನ್ನಾಥ್ ಸನಿಲ್ ರವರು ಉಪಸ್ಥಿತರಿದ್ದರು.
ಅತಿಥಿಗಳು ತಮ್ಮ ಭಾಷಣದಲ್ಲಿ ತನ್ನ ಅನುಭವ ಮತ್ತು ಪ್ರಸಕ್ತ ದೇಶದ ರಾಜಕೀಯದ ಬಗ್ಗೆ ಮಾತನಾಡಿದರು.

ಗೌರವ ಕಾರ್ಯದರ್ಶಿ ಜೇ ಜೇ ಕೋಟ್ಯಾನ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.



Related posts

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ: 49ನೇ ವಾರ್ಷಿಕ ಮಹಾಪೂಜೆ; ಶನೇಶ್ವರ ಪೂಜೆ

Mumbai News Desk

ಮುಂಬೈ : ಬ್ರೇಕ್ ಫೇಲ್ ಆಗಿ ಎದುರಿದ್ದ ವಾಹನಗಳು, ಜನರ ಮೇಲೆ ಹರಿದ ಬಸ್, 7 ಸಾವು, 49 ಮಂದಿಗೆ ಗಂಭೀರ ಗಾಯ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವಾರ್ಷಿಕ ಮಹಾಸಭೆ

Mumbai News Desk

12ನೇ ತರಗತಿಯ ಪರೀಕ್ಷೆಯಲ್ಲಿ. ಅನನ್ಯ ಬಿ ಕುಲಾಲ್. ಶೇ  86.50% 

Mumbai News Desk

ಮುಂಬೈ ಒತ್ತೆಯಾಳು ಬಿಕ್ಕಟ್ಟಿನ ಹಿಂದಿನ ವ್ಯಕ್ತಿ ರೋಹಿತ್ ಆರ್ಯ ಯಾರು? ಆತನ ಹಿನ್ನೆಲೆ ಏನು?

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಕಾಲೇಜು–ಸಾಫ್ಟ್‌ಲಿಂಕ್ ಗ್ಲೋಬಲ್ ಸಹಯೋಗ: ವಿದ್ಯಾರ್ಥಿಗಳಿಗೆ ಲಾಜಿಸ್ಟಿಕ್ಸ್‌ ಕ್ಷೇತ್ರದ ಕೌಶಲ್ಯ ತರಬೇತಿ

Mumbai News Desk