30 C
Mumbai
April 24, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಗಣರಾಜ್ಯೋತ್ಸವ ಆಚರಣೆ.





ಬಿಲ್ಲವರ ಅಸೋಸಿಯೇಷನ್ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ದಿನಾಂಕ 26.01.2026 ರಂದು ಸಂಘದ ವಠಾರದಲ್ಲಿ ಜರಗಿತು.

ಅಂದು ಬೆಳಗ್ಗೆ ಗುರುಪೂಜೆ ಆದ ನಂತರ ಮುಖ್ಯ ಅತಿಥಿಯಾಗಿ ಆಗಮಿಸಿದ ಹಿರಿಯ ಸದಸ್ಯರಾದ ರಾಜು ಪೂಜಾರಿ ದಂಪತಿಯವರಿಂದ ಧ್ವಜಾರೋಹಣ ನೆರವೇರಿಸಿ ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲಾಯಿತು.

ತದ ನಂತರ ಜರಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್ ರವರು ವಹಿಸಿದರು. ಮುಖ್ಯ ಅತಿಥಿಯಾಗಿ ರಾಜು ಪೂಜಾರಿಯವರು ಮತ್ತು ಅವರ ಧರ್ಮ ಪತ್ನಿ ಗಿರಿಜಕ್ಕನವರು ಉಪಸ್ಥಿತರಿದ್ದರು.
ಸಭಿಕರಲ್ಲಿ ಪುಟಾಣಿಗಳು ದೇಶ ಭಕ್ತಿ ಗೀತೆ ಮತ್ತು ರಾಷ್ಟ್ರದ ಬಗ್ಗೆ ಭಾಷಣ ಮಾಡಿದರು, ಈ ಸಂದರ್ಭದಲ್ಲಿ ಅಥಿತಿಗಳನ್ನು ಫಲಪುಷ್ಪ ಸ್ಮರಣಿಕೆ ಮತ್ತು ಶಾಲು ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಉಪ ಕಾರ್ಯಾಧ್ಯಕ್ಷರಾದ ಚಂದ್ರಹಾಸ ಪಾಲನ್ ಮತ್ತು ಸಚಿನ್ ಪೂಜಾರಿ, ಗೌರವ ಕಾರ್ಯಾಧ್ಯಕ್ಷರಾದ ಮಂಜಪ್ಪ ಪೂಜಾರಿ ಮತ್ತು ಜತೆ ಕೋಶಾಧಿಕಾರಿ ಜಗನ್ನಾಥ್ ಸನಿಲ್ ರವರು ಉಪಸ್ಥಿತರಿದ್ದರು.
ಅತಿಥಿಗಳು ತಮ್ಮ ಭಾಷಣದಲ್ಲಿ ತನ್ನ ಅನುಭವ ಮತ್ತು ಪ್ರಸಕ್ತ ದೇಶದ ರಾಜಕೀಯದ ಬಗ್ಗೆ ಮಾತನಾಡಿದರು.

ಗೌರವ ಕಾರ್ಯದರ್ಶಿ ಜೇ ಜೇ ಕೋಟ್ಯಾನ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.



Related posts

ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಗೆ ಚುನಾವಣಾ ದಿನಾಂಕ ಪ್ರಕಟ : ಜನವರಿ 15ರಂದು ಮತದಾನ, ಜ. 16ಕ್ಕೆ ಫಲಿತಾಂಶ

Mumbai News Desk

ಶ್ರೀ ರಜಕ ಸಂಘ ಮುಂಬಯಿಯ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ

Mumbai News Desk

 ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನ (ರಿ) ಮುಂಬೈಯ 26ನೇ ವಾರ್ಷಿಕ ಉತ್ಸವ ಸಂಭ್ರಮ,

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ತನಿಶ್ ಕಿರೋಡಿಯನ್ ಗೆ ಶೇ 88 ಅಂಕ.

Mumbai News Desk

ವಿಶ್ವ ರಂಗ ದಿನಾಚರಣೆ- 2024ರ ಅಂಗವಾಗಿನಾಟಕ ರಚನಾ ಕಮ್ಮಟ ಮತ್ತು ರಂಗ ನಿರ್ದೇಶಕರ ಸಮ್ಮಿಲನ

Mumbai News Desk

ಮೈಸೂರು ಅಸೋಸಿಯೇಷನ್‌ನಲ್ಲಿ ‘ಶ್ರೀರಂಗ ಸ್ಮರಣೆ’ ನಾಟಕೋತ್ಸವ: -ವೀಕ್ಷಕರನ್ನು ಮನರಂಜಿಸಿದ “ಕಾಲಜ್ಞಾನಿ ಕನಕ”

Mumbai News Desk