July 23, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಗಣರಾಜ್ಯೋತ್ಸವ ಆಚರಣೆ.







ಬಿಲ್ಲವರ ಅಸೋಸಿಯೇಷನ್ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ದಿನಾಂಕ 26.01.2026 ರಂದು ಸಂಘದ ವಠಾರದಲ್ಲಿ ಜರಗಿತು.

ಅಂದು ಬೆಳಗ್ಗೆ ಗುರುಪೂಜೆ ಆದ ನಂತರ ಮುಖ್ಯ ಅತಿಥಿಯಾಗಿ ಆಗಮಿಸಿದ ಹಿರಿಯ ಸದಸ್ಯರಾದ ರಾಜು ಪೂಜಾರಿ ದಂಪತಿಯವರಿಂದ ಧ್ವಜಾರೋಹಣ ನೆರವೇರಿಸಿ ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸಲಾಯಿತು.

ತದ ನಂತರ ಜರಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್ ರವರು ವಹಿಸಿದರು. ಮುಖ್ಯ ಅತಿಥಿಯಾಗಿ ರಾಜು ಪೂಜಾರಿಯವರು ಮತ್ತು ಅವರ ಧರ್ಮ ಪತ್ನಿ ಗಿರಿಜಕ್ಕನವರು ಉಪಸ್ಥಿತರಿದ್ದರು.
ಸಭಿಕರಲ್ಲಿ ಪುಟಾಣಿಗಳು ದೇಶ ಭಕ್ತಿ ಗೀತೆ ಮತ್ತು ರಾಷ್ಟ್ರದ ಬಗ್ಗೆ ಭಾಷಣ ಮಾಡಿದರು, ಈ ಸಂದರ್ಭದಲ್ಲಿ ಅಥಿತಿಗಳನ್ನು ಫಲಪುಷ್ಪ ಸ್ಮರಣಿಕೆ ಮತ್ತು ಶಾಲು ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಉಪ ಕಾರ್ಯಾಧ್ಯಕ್ಷರಾದ ಚಂದ್ರಹಾಸ ಪಾಲನ್ ಮತ್ತು ಸಚಿನ್ ಪೂಜಾರಿ, ಗೌರವ ಕಾರ್ಯಾಧ್ಯಕ್ಷರಾದ ಮಂಜಪ್ಪ ಪೂಜಾರಿ ಮತ್ತು ಜತೆ ಕೋಶಾಧಿಕಾರಿ ಜಗನ್ನಾಥ್ ಸನಿಲ್ ರವರು ಉಪಸ್ಥಿತರಿದ್ದರು.
ಅತಿಥಿಗಳು ತಮ್ಮ ಭಾಷಣದಲ್ಲಿ ತನ್ನ ಅನುಭವ ಮತ್ತು ಪ್ರಸಕ್ತ ದೇಶದ ರಾಜಕೀಯದ ಬಗ್ಗೆ ಮಾತನಾಡಿದರು.

ಗೌರವ ಕಾರ್ಯದರ್ಶಿ ಜೇ ಜೇ ಕೋಟ್ಯಾನ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.



Related posts

ಮಂಗಳೂರು: ಕುಲಶೇಖರ ಪದವು ಶ್ರೀ ಶನೈಶ್ಚರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ, ಮುಂಬೈ ಸಮಿತಿ ಅಧ್ಯಕ್ಷರಾಗಿ ಮಹೇಶ್ ಶೆಟ್ಟಿ ತೆಳ್ಳಾರ್ ಆಯ್ಕೆ

Mumbai News Desk

ಮುಂಬೈ : ವಿಕ್ರೋಲಿಯ ಪಾರ್ಕ್ ಸೈಟ್‌ನ ವರ್ಷಾ ನಗರದ ಜನಕಲ್ಯಾಣ್ ಸೊಸೈಟಿಯಲ್ಲಿ ಭೂಕುಸಿತ, ಇಬ್ಬರು ಸಾವು

Mumbai News Desk

ಕುಲಾಲ ಸಂಘ ಮುಂಬಯಿ, ಸಿ.ಎಸ್.ಟಿ. – ಮುಲುಂಡ್ – ಮಾನ್ ಖುರ್ಡ್ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ, ಕಿರು ನಾಟಕ, ಸಾಧಕರಿಗೆ ಸನ್ಮಾನ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ ಅಚರಣೆ

Mumbai News Desk

ಪಾಲ್ಗರ್ ಜಿಲ್ಲಾ ಬಿಲ್ಲವರಿಂದ ವಿಹಾರ ಕೂಟ : ಮುಂಬೈ ಬಿಲ್ಲವರ   ಒಗ್ಗಟ್ಟು ಬಲಿಷ್ಠ ಗೊಳಿಸಲು ಚಂದ್ರಶೇಖರ್ ಪೂಜಾರಿ ಕರೆ

Mumbai News Desk

ಭಾಯಂದರ್  ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ ಆಶಯದಲ್ಲಿ “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk