32.3 C
Mumbai
June 7, 2026
Mumbai News Kannada
ಮುಂಬಯಿ

ಮುಂಬಯಿ: ನಾನಿಲ್ತಾರ್ ಅಭಿಮಾನಿ ಬಳಗದಿಂದ ಸಂಭ್ರಮದ ‘ಅರಿಶಿನ ಕುಂಕುಮ’ ಕಾರ್ಯಕ್ರಮ





ಮುಂಬಯಿ: ಇಲ್ಲಿನ ನಾನಿಲ್ತಾರ್ ಅಭಿಮಾನಿ ಬಳಗದ ಮಹಿಳಾ ಸದಸ್ಯರ ವತಿಯಿಂದ ಇತ್ತೀಚೆಗೆ ‘ಅರಿಶಿನ ಕುಂಕುಮ’ ಕಾರ್ಯಕ್ರಮವನ್ನು ಅತ್ಯಂತ ಸಡಗರದಿಂದ ಆಯೋಜಿಸಲಾಗಿತ್ತು. ಬಳಗದ ಹಿರಿಯ ಸದಸ್ಯೆ ರುಕ್ಮಿಣಿ ಸಾಲಿಯನ್ ಅವರ ಸಹಕಾರ ಹಾಗೂ ಮಹಿಳಾ ಸದಸ್ಯರ ಸಮ್ಮುಖದಲ್ಲಿ ಈ ಸಮಾರಂಭವು ಯಶಸ್ವಿಯಾಗಿ ನಡೆಯಿತು.

​ಮುಂಬಯಿ ಕುಲಾಲ ಸಂಘದ ದಹಿಸರ್-ಚರ್ಚ್‌ಗೇಟ್ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರತ್ನ ಡಿ. ಕುಲಾಲ್ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಅರಿಶಿನ ಕುಂಕುಮದ ಧಾರ್ಮಿಕ ಮಹತ್ವ ಹಾಗೂ ಅದರ ಪ್ರಯೋಜನಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಸದಸ್ಯರಿಗೆ ಉಡುಗೊರೆ ವಿತರಿಸಿ ಮಾತನಾಡಿದ ರುಕ್ಮಿಣಿ ಸಾಲಿಯನ್, “ಅಭಿಮಾನಿ ಬಳಗದ ಮಹಿಳಾ ಸದಸ್ಯರೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದರೆ ಪ್ರತಿಯೊಂದು ಕಾರ್ಯವನ್ನೂ ಯಶಸ್ವಿಯಾಗಿ ಪೂರೈಸಲು ಸಾಧ್ಯ,” ಎಂದು ಕರೆ ನೀಡಿದರು.

​ಬಳಗದ ಅಧ್ಯಕ್ಷ ಹರೀಶ್ ಡಿ. ಮೂಲ್ಯ ಮಾತನಾಡಿ, “ಮಹಿಳೆಯರ ಸಂಘಟಿತ ಶಕ್ತಿಯೇ ನಮ್ಮ ಬಳಗಕ್ಕೆ ಆನೆ ಬಲ ತಂದಿದೆ. ಎಲ್ಲರ ಸಹಕಾರದೊಂದಿಗೆ ಸಂಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯೋಣ,” ಎಂದರು. ಮಹಿಳಾ ಸದಸ್ಯೆ ಸರೋಜಾ ಎಚ್. ಮೂಲ್ಯ ಅವರು ಮಾತನಾಡಿ, ಸದಸ್ಯರ ಉತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಮುಂದಿನ ವರ್ಷ ಈ ಕಾರ್ಯಕ್ರಮವನ್ನು ಇನ್ನಷ್ಟು ಅರ್ಥಪೂರ್ಣವಾಗಿ ಆಯೋಜಿಸಲು ಎಲ್ಲರ ಬೆಂಬಲ ಕೋರಿದರು.

ವೇದಿಕೆಯಲ್ಲಿ ವನಿತಾ ಅಂಚನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಸಂಚಾಲಕ ಕೃಷ್ಣ ಮೂಲ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ನಳಿನಿ ಎನ್. ಬಂಜನ್ ಕಾರ್ಯಕ್ರಮ ನಿರೂಪಿಸಿದರೆ, ಅರ್ಚನಾ ಎಸ್. ಕುಲಾಲ್ ವಂದಿಸಿದರು. ಹೇಮಲತಾ ಸಾಲಿಯನ್ ಅವರು ಆಗಮಿಸಿದ ಸದಸ್ಯರಿಗೆ ವಿಶೇಷ ಉಡುಗೊರೆಗಳನ್ನು ವಿತರಿಸಿದರು.

​ಈ ಸಂದರ್ಭದಲ್ಲಿ ಜ್ಯೋತಿ ಸಾಲಿಯನ್, ದಿವ್ಯ ಸಾಲಿಯನ್, ದಿನೇಶ್ ಮೂಲ್ಯ, ದಿನೇಶ್ ಬಂಗೇರ, ರೋಹಿದಾಸ್ ಬಂಜನ್, ಲೋಕೇಶ್ ಸಾಲಿಯನ್, ಕೇಶವ ಬಂಜನ್, ಶ್ರೀಕಾಂತ್ ಮೂಲ್ಯ ಹಾಗೂ ನಾರಾಯಣ ಬಂಜನ್ ಸೇರಿದಂತೆ ಬಳಗದ ಪ್ರಮುಖರು ಪಾಲ್ಗೊಂಡಿದ್ದರು.



Related posts

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್: ಭಜನಾ ಮಂಡಳಿಯ ವರ್ಷಾಚರಣೆ

Mumbai News Desk

ಬಂಟರ ಸಂಘ ಮುಂಬಯಿ, ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಪದಗ್ರಹಣ

Mumbai News Desk

ಭಾಯಂದರ್ ಆರಾಧನಾ ಫ್ರೆಂಡ್ಸ್ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ- ಮುಂಬಯಿ: ಸಂಘದ ಗೌ.ಅಧ್ಯಕ್ಷ ಸುರೇಶ್ ಎಸ್ ಪೂಜಾರಿ ಪಡುಕೋಣೆಯವರಿಗೆ ನುಡಿ ನಮನ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) 25ನೇ ಸಂಸ್ಥಾಪನಾ ದಿನಾಚರಣೆ, 25 ಸಂಘ – ಸಂಸ್ಥೆಗಳಿಗೆ ವಿಶೇಷ ಪುರಸ್ಕಾರ ಸಮಾರಂಭಕ್ಕೆ ಚಾಲನೆ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬೈ ಇದರ ಭಾಂಡುಪ್ ಸ್ಥಳೀಯ ಕಚೇರಿಯ ಸಂಯೋಜನೆಯಲ್ಲಿ ಬಾಬು ಶಿವ ಪೂಜಾರಿ ಅವರ “ಬಿಲ್ಲವರ ಗುತ್ತು” ಗ್ರಂಥದ ಮುಂಬಯಿ ಅವೃತಿ ಬಿಡುಗಡೆ.

Mumbai News Desk