27.4 C
Mumbai
July 5, 2026
Mumbai News Kannada
ಸುದ್ದಿ

ಬೆಂಗಳೂರು : ಭಾರತ್ ಬ್ಯಾಂಕ್ ಅಧಿಕಾರಿ ಹೇಮಾ ಭಾಸ್ಕರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ





ವರದಿ: ಜಯ ಸಿ ಪೂಜಾರಿ, ಕೆಳಾರ್ಕಳ ಬೆಟ್ಟು.

ಭಾರತ್ ಬ್ಯಾಂಕಿನ ಬೆಂಗಳೂರಿನ ಮಾಗಡಿ ರಸ್ತೆ ಶಾಖೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹೇಮಾ ಭಾಸ್ಕರ್ ಅವರು 35 ವರ್ಷಗಳ ಸುದೀರ್ಘ ಹಾಗೂ ಸ್ತುತ್ಯಾರ್ಹ ಸೇವೆಯ ನಂತರ ದಿನಾಂಕ 31.01.2026 ರಂದು ಸೇವಾ ನಿವೃತ್ತಿ ಹೊಂದಿದರು. ತಮ್ಮ ವೃತ್ತಿಜೀವನದ ಆರಂಭದಲ್ಲಿ ಮುಂಬೈನ ಸಿ.ಎಸ್.ಟಿ ಪಕ್ಕದ ಬಳ್ಳಾರ್ಡ್ ಪೀಯರ್ ಹಾಗೂ ಮೀರಾ ರೋಡ್ ಭಾಯಂದರ್ ಶಾಖೆಗಳಲ್ಲಿ ದಕ್ಷತೆಯಿಂದ ಸೇವೆ ಸಲ್ಲಿಸಿದ್ದ ಇವರು, ಬ್ಯಾಂಕಿನ ಏಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅವರ ನಿವೃತ್ತಿಯ ಅಂಗವಾಗಿ ಮಾಗಡಿ ರಸ್ತೆ ಶಾಖೆಯಲ್ಲಿ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಭಾರತ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕರಾದ ಮುರಳೀಧರ ಕೋಟ್ಯಾನ್ ಅವರು ಉಪಸ್ಥಿತರಿದ್ದು, ಹೇಮಾ ಅವರ ನಿಷ್ಠಾವಂತ ಸೇವೆಯನ್ನು ಸ್ಮರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹೇಮಾ ಅವರ ಪತಿ ಭಾಸ್ಕರ್ ಪೂಜಾರಿ ಹಾಗೂ ಪುತ್ರ ಆಕಾಶ್ ಪೂಜಾರಿ ಅವರು ಜೊತೆಯಾಗಿದ್ದರು.
ಮಾಗಡಿ ರಸ್ತೆ ಶಾಖಾ ಪ್ರಬಂಧಕರಾದ ಗೋಪಾಲ್ ಪೂಜಾರಿ ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದರು. ಸಮಾರಂಭದಲ್ಲಿ ವಿವಿಧ ಶಾಖೆಗಳ ಪ್ರಬಂಧಕರು ಹಾಗೂ ಸಹೋದ್ಯೋಗಿಗಳು ಪಾಲ್ಗೊಂಡು ತಮ್ಮ ಆತ್ಮೀಯ ಸಹೋದ್ಯೋಗಿಗೆ ಸನ್ಮಾನಿಸಿ ಶುಭ ಕೋರಿದರು.



Related posts

ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರ ಬ್ಯಾಗ್ ಕಳವು: ಗೋವಾದ ಮಡಗಾಂವ್ ನಿಲ್ದಾಣದಲ್ಲಿ ಘಟನೆ

Mumbai News Desk

ಡಾ. ಭರತ್ ಕುಮಾರ್ ಪೊಲಿಪು ಅವರಿಗೆ ಮಾತೃ ವಿಯೋಗ.

Mumbai News Desk

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ,   ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಶೆಟ್ಟಿ ಆಯ್ಕೆ.

Mumbai News Desk

ಮುಲ್ಕಿ ಬಪ್ಪನಾಡು ಕ್ಷೇತ್ರದ ಅನುವಂಶೀಯ ಮೊಕ್ತೇಸರ ಎಸ್. ಎಸ್. ಮನೋಹರ ಶೆಟ್ಟಿ ನಿಧನ.

Mumbai News Desk

ಮುತ್ತೂಟ್ ಫೈನಾನ್ಸ್ ‘ವಿವಾಹ ಸಮ್ಮಾನ 2026’: ಮಂಗಳೂರಿನ 10 ಅರ್ಹ ಹೆಣ್ಣುಮಕ್ಕಳ ಮದುವೆಗೆ ಆರ್ಥಿಕ ಆಸರೆ

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ.ಯ  ವತಿಯಿಂದ ಭಕ್ತಿ ಸಡಗರದ ದುರ್ಗಾ ಪೂಜೆ 

Mumbai News Desk