29 C
Mumbai
August 21, 2026
Mumbai News Kannada
ಪ್ರಕಟಣೆ

ಫೆ.7, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ





ಮೀರಾ ರೋಡ್ ಫೆ.2: ಮೀರಾಭಾಯಂದರ್ ಪರಿಸರದಲ್ಲಿ ಬೆಳಗಾವಿ ಬೇವಿನಕೊಪ್ಪ ಶ್ರೀ ವಿಜಯಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಸ್ಥಾಪನೆಗೊಂಡ ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ಎಂಬ ಧಾರ್ಮಿಕ ಸಂಸ್ಥೆಯು ಭಕ್ತಾದಿಗಳ ಮತ್ತು ದಾನಿಗಳ ಸಹಕಾರದೊಂದಿಗೆ ತನ್ನ ವಾರ್ಷಿಕ ದಿನಾಚರಣೆಯ ಅಂಗವಾಗಿ ಕಳೆದ 16 ವರ್ಷಗಳಿಂದ ಶ್ರೀಕ್ಷೇತ್ರ ಗಣೇಶ್ ಪುರಿಗೆ ಪಾದಯಾತ್ರೆಯೊಂದಿಗೆ ಆಚರಿಸುತ್ತಾ ಬಂದಿದೆ. ಇದೀಗ ಸಂಸ್ಥೆಯ 17ನೇ ವಾರ್ಷಿಕ ದಿನಾಚರಣೆಯ ಅಂಗವಾಗಿ ಫೆ.7ರಂದು ಗಣೇಶ್ ಪುರಿ (ನಮ್ಮಯ ನಡಿಗೆ ಸ್ವಾಮಿಯ ನೆಡೆಗೆ) ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಸಂಜೆ 6 ಗಂಟೆಗೆ ಮೀರಾ ರೋಡ್ ಪೂರ್ವ ಸಿಲ್ವರ್ ಪಾರ್ಕ್ ಶ್ರೀಗಣೇಶ್ ಜೈ ಮಾತಾ ಮಂದಿರ ಇಲ್ಲಿ ಧಾರ್ಮಿಕ ವಿಧಿವಿಧಾನಗಳು, ಭಜನೆ ಹಾಗೂ ಮಂಗಳಾರತಿ ನಡೆಯಲಿದೆ. ಮೀರಾಗಾಂವ್ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಸಾಣೂರು ಸಾಂತಿಂಜ ಜನಾರ್ಧನ ಭಟ್ ಆಶೀರ್ವಚನ ನೀಡಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಹಿರಿಯ ನಾಗರಿಕರಿಗೆ ಹಾಗೂ ಅಸ್ವಸ್ತರಿಗೆ ಬಸ್ಸಿನ ವ್ಯವಸ್ಥೆ ಮಾಡಲಾಗುವುದು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಗುರು ಭಕ್ತರು ಭಾಗವಹಿಸಿ ಸಹಕರಿಸಬೇಕಾಗಿ ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ಜಿ.ಗಾಣಿಗ, ಗೌರವಾಧ್ಯಕ್ಷ ಆನಂದ ಶೆಟ್ಟಿ ಕುಕ್ಕುಂದೂರು , ಉಪಾಧ್ಯಕ್ಷರುಗಳಾದ ವಸಂತಿ ಶೆಟ್ಟಿ, ರವೀಂದ್ರ ಶೆಟ್ಟಿ ದೇರಳಕಟ್ಟೆ, ಸಂಚಾಲಕ ವೈ.ಟಿ.ಶೆಟ್ಟಿ, ಹೆಜಮಾಡಿ,ಗೌ.ಕಾರ್ಯದರ್ಶಿ ಸೀತಾರಾಮ್ ಸಿ. ಶೆಟ್ಟಿ ಅಮಾಸೆಬೈಲು , ಕೋಶಾಧಿಕಾರಿ ಶೈಲೇಶ್ ಶೆಟ್ಟಿ ಸೂಡ, ಜೊತೆ ಕಾರ್ಯದರ್ಶಿ ಬಾಬಾ ಪ್ರಸಾದ್ ಅರಸ ಕುತ್ಯಾರು, ಜೊತೆ ಕೋಶಾಧಿಕಾರಿ ಪ್ರಸಾದ್ ಶೆಟ್ಟಿ ನೀರೆ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಶ್ರೀ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ರಾಜೇಶ್ ಶೆಟ್ಟಿ ಕಾಪು, ಮುಖ್ಯ ಸಲಹೆಗಾರ ಗುಣಪಾಲ್ ಉಡುಪಿ , ಅರ್ಚಕರಾದ ಲಕ್ಷ್ಮಣ್ ಶೆಟ್ಟಿ, ನಾರಾಯಣ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ, ಭಜನಾ ಸಮಿತಿ ಹಾಗೂ ಸಾಂಸ್ಕೃತಿಕ ವಿಭಾಗದ ಸದಸ್ಯರು
ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ



Related posts

ಸೆ. 15 ರಂದು ಕನ್ನಡಿಗರ ಸ್ನೇಹ ಬಳಗ ಟ್ರಸ್ಟ್ ಡೊಂಬಿವಲಿಯ ಉದ್ಘಾಟನಾ ಕಾರ್ಯಕ್ರಮ.

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 16ರಂದು ಮಾಸಿಕಸಂಕ್ರಮಣ ಪೂಜೆ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಅ.17ಕ್ಕೆ 66ನೇ ಮಂಗಲೋತ್ಸವ.

Mumbai News Desk

SHREE JAI BHAVANI SHANEESHWARA MANDIR – Appeal

Mumbai News Desk

ಅಂದೇರಿ  :ಶ್ರೀ ಮದ್ಭಾರತ  ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ಮಂದಿರದ 22ನೇ ಪ್ರತಿಷ್ಟಾ ಮಹೋತ್ಸವ.

Mumbai News Desk

ಡೊಂಬಿವಲಿ: ಫೆ. 14ರಂದು ಶ್ರೀ ಜೈ ಭವಾನಿ ಶನೀಶ್ವರ ಮಂದಿರದ 36ನೇ ವಾರ್ಷಿಕ ಮಂಗಳೋತ್ಸವ

Mumbai News Desk