31 C
Mumbai
March 6, 2026
Mumbai News Kannada
ಸುದ್ದಿ

ಭಾರತ್ ಬ್ಯಾಂಕ್‌ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಐಕಾನಿಕ್ ಲೀಡರ್ಸ್ – ಯೂತ್ ಚೇರ್ಮನ್ ಅವಾರ್ಡ್ 2025’ ಗೌರವ





ನ್ಯಾಷನಲ್ ಕೋ-ಆಪರೇಟಿವ್ ಯೂನಿಯನ್ ಆಫ್ ಇಂಡಿಯಾ (NCUI), NAFCUB ಮತ್ತು ಕರ್ನಾಟಕ ಫೆಡರೇಶನ್ ಆಫ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ಗಳ ಸಹಯೋಗದೊಂದಿಗೆ ಇ-ಪ್ಲಸ್ ಇಂಟೆಲೆಕ್ಚುವಲ್ ಮೀಡಿಯಾ ಆಯೋಜಿಸಿದ್ದ ಸಹಕಾರಿ ಬ್ಯಾಂಕುಗಳ ಶೃಂಗಸಭೆಯಲ್ಲಿ, ನಮ್ಮ ಬ್ಯಾಂಕ್‌ನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ “ಐಕಾನಿಕ್ ಲೀಡರ್ಸ್ – ಯೂತ್ ಚೇರ್ಮನ್ ಅವಾರ್ಡ್ 2025” ನೀಡಿ ಗೌರವಿಸಲಾಗಿದೆ. ಮಹಾರಾಷ್ಟ್ರದ ಖೋಪೋಲಿಯ ನೊವೊಟೆಲ್ ಹೋಟೆಲ್‌ನಲ್ಲಿ 2026ರ ಜನವರಿ 31ರಂದು ನಡೆದ ಸಮಾರಂಭದಲ್ಲಿ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನ ಉಪ ಸಿಇಒ ಆದ ಗೋಪಾಲ್ ಎಂ. ಭಗತ್ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.


ಈ ಗಮನಾರ್ಹ ಸಾಧನೆಯು ಕೇವಲ ದೂರದೃಷ್ಟಿಯ ನಾಯಕತ್ವವನ್ನು ಮಾತ್ರವಲ್ಲದೆ, ಭಾರತ್ ಬ್ಯಾಂಕ್‌ನ ಪ್ರತಿಯೊಬ್ಬ ಉದ್ಯೋಗಿಯ ಸಮೂಹ ಶ್ರದ್ಧೆ, ಶಿಸ್ತು ಮತ್ತು ತಂಡದ ಕೆಲಸವನ್ನು ಪ್ರತಿಬಿಂಬಿಸುತ್ತದೆ. ಇದು ಪಾರದರ್ಶಕತೆ, ನಾವೀನ್ಯತೆ, ಗ್ರಾಹಕರ ನಂಬಿಕೆ ಮತ್ತು ಸಹಕಾರಿ ಮೌಲ್ಯಗಳ ಬಗ್ಗೆ ನಮ್ಮ ಬ್ಯಾಂಕ್ ಹೊಂದಿರುವ ಬದ್ಧತೆಗೆ ಸಂದ ಗೌರವವಾಗಿದೆ ಎಂದು ಪ್ರಶಸ್ತಿ ಸ್ವೀಕರಿಸಿ ಸೂರ್ಯಕಾಂತ್ ಸುವರ್ಣ ಪ್ರತಿಕ್ರಿಯಿಸಿದರು.


ಈ ಹೆಮ್ಮೆಯ ಸಂದರ್ಭದಲ್ಲಿ ಭಾರತ್ ಬ್ಯಾಂಕ್ ನ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ದಿನೇಶ್ ಬಿ. ಸಾಲ್ಯಾನ್ ಮತ್ತು ಸಿಐಎಸ್ಒ (CISO) ಭಾಸ್ಕರ್ ರಾವ್ ಅವರು ಉಪಸ್ಥಿತರಿದ್ದರು.



Related posts

ಮುಂಬೈ : ದಾರಾವಿಯಲ್ಲಿ ನಕಲಿ ಮದ್ಯ ಜಾಲಪತ್ತೆ, 4.32ಲಕ್ಷ ರೂ. ಮೌಲ್ಯದ ನಕಲಿ ಸ್ಕಾಚ್ ವಶ

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.

Mumbai News Desk

ಡಾ.ಈಶ್ವರ ಅಲೆವೂರು ಅವರಿಗೆ  ಕೆ.ವಿ.ಆರ್ ಠಾಗೋರ್ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ

Mumbai News Desk

ಮೊಗವೀರ ಮಹಾಜನ ಸೇವಾ ಸಂಘದ ವಾರ್ಷಿಕ ಮಹಾಸಭೆ. ಒಗ್ಗಟ್ಟಿನಿಂದ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸೋಣ, :ರಾಜು ಮೆಂಡನ್ 

Mumbai News Desk

ಡ್ರಾಮಾ ಜ್ಯೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಸಿಎಂ ಮೆಚ್ಚುಗೆ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನನೂತನ ಗುಡಿಯೊಳಗೆ ಗೋನಿವಾಸ ಸಂಪನ್ನ

Mumbai News Desk