32.3 C
Mumbai
June 7, 2026
Mumbai News Kannada
ಮುಂಬಯಿ

ಮೂರು ದಶಕಗಳ ಅವಿರತ ಸೇವಾ ಪಯಣ: ಭಾರತ್ ಬ್ಯಾಂಕಿನ ಹಿರಿಯ ಅಧಿಕಾರಿ ಸುಧೀರ್ ಸುವರ್ಣರಿಗೆ ಅಭಿನಂದನಾ ಪೂರ್ವಕ ಬೀಳ್ಕೊಡುಗೆ





ಭಾರತ್ ಬ್ಯಾಂಕಿನ ಮುಂಬೈಯ ಮಲಾಡ್ ಪೂರ್ವ ರಾಣಿ ಸತಿ ಮಾರ್ಗ,ಶಾಖೆಯಲ್ಲಿ ಉಪ ಪ್ರಬಂಧಕರಾಗಿ ಸೇವೆ ಸಲ್ಲಿಸುತ್ತಿದ್ದ ಸುಧೀರ್ ಬಿ. ಸುವರ್ಣ ಅವರು 37 ವರ್ಷಗಳ ಸುದೀರ್ಘ ಹಾಗೂ ಸ್ತುತ್ಯಾರ್ಹ ಸೇವೆಯ ನಂತರ ದಿನಾಂಕ 31/01/2026 ರಂದು ಅಧಿಕೃತವಾಗಿ ಸೇವಾ ನಿವೃತ್ತಿ ಹೊಂದಿದರು.


1989ರ ಏಪ್ರಿಲ್‌ನಲ್ಲಿ ಮುಂಬೈನ ಮೋದಿ ಸ್ಟ್ರೀಟ್ ಶಾಖೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಇವರು, ನಂತರ ಗೊರೇಗಾಂವ್ (ಪಶ್ಚಿಮ )ದಹಿಸರ್, ಬೊರಿವಿಲಿ (ಪಶ್ಚಿಮ), ಬೆಂಗಳೂರು ಶಾಖೆಗಳು ಹಾಗೂ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ವಿವಿಧ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದರು. ಬ್ಯಾಂಕಿನ ಏಳಿಗೆಗಾಗಿ ಶ್ರಮಿಸಿದ ಇವರು ಅತ್ಯಂತ ಶಿಸ್ತುಬದ್ಧ, ಕಾರ್ಯದಕ್ಷ ಹಾಗೂ ಗ್ರಾಹಕ ಸ್ನೇಹಿ ಅಧಿಕಾರಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.


ಇವರ ನಿವೃತ್ತಿಯ ಅಂಗವಾಗಿ ದಿನಾಂಕ 03/02/2026 ರಂದು ಅವರ ಸ್ವಗ್ರಹ ಗೊರೇಗಾಂವ್ ಪೂರ್ವ ಗೋಕುಲ್ಧಾಮ್ ನಲ್ಲಿ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು.
ಅವರ ಆತ್ಮೀಯರಾದ ನವೀನ್ ಜೆ ಸುವರ್ಣ,ನರೇಶ್ ಟಿ. ಅಮೀನ್, ಸತೀಶ್ ಜೆ. ಬಂಗೇರ, ರೋಹಿತ್ ಜಿ. ಬಂಗೇರ, ತಾರಾನಾಥ್ ಎಸ್. ಅಮೀನ್ ಮತ್ತು ಉಮೇಶ್ ಜಿ. ಕೋಟ್ಯಾನ್ ಹಾಗೂ ಅಪಾರ ಹಿತೇಷಿಗಳ ಪರವಾಗಿ ಸುಧೀರ್ ಬಿ. ಸುವರ್ಣ ಅವರ ನಿಷ್ಠಾವಂತ ಸೇವೆಯನ್ನು ಗೌರವಿಸಿ ಅವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಹಾಗೂ ನೆನಪಿನ ಕಾಣಿಕೆಯನ್ನು ನೀಡಿ ಭವ್ಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಮಮತಾ ಸುವರ್ಣ ಹಾಗೂ ಪುತ್ರ ಪರಿತೋಷ್ ಸುವರ್ಣ ಅವರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಸುಧೀರ್ ಬಿ. ಸುವರ್ಣ ಅವರಿಗೆ ಮುಂದಿನ ನಿವೃತ್ತ ಜೀವನವು ಸುಖ, ಶಾಂತಿ ಮತ್ತು ಸುದೀರ್ಘ ಆರೋಗ್ಯದಿಂದ ಕೂಡಿರಲಿ ಎಂದು ಅವರ ಹಿತೇಷಿಗಲ್ಲರ ಶುಭ ಹಾರೈಕೆ.



Related posts

ಬಿಲ್ಲವರ ಅಸೋಸಿಯೇಶನಿನ ಮೀರಾ ರೋಡ್ ಸ್ಥಳೀಯ ಕಚೇರಿಯ ವತಿಯಿಂದ ಆಟಿಡೊಂಜಿ ದಿನ, ವಿದ್ಯಾರ್ಥಿ ವೇತನ ವಿತರಣೆ.

Mumbai News Desk

ಮೀರಾ- ಬಾಯಂದರ್ ನ  ರೈ  ಸುಮತಿ  ಎಜ್ಯುಕೇಶನ್ ಟ್ರಸ್ಟ್(ರಿ)   ನ ಸೈಂಟ್  ಆಗ್ನೆಸ್ ಇಂಗ್ಲಿಷ್ ಹೈ ಸ್ಕೂಲ್ ಗೆ  100% ಫಲಿತಾಂಶ.

Mumbai News Desk

ಶ್ರೀ ರಾಧಾಕೃಷ್ಣ ಶನೀಶ್ವರ ಮಂದಿರ ಡೊಂಬಿವಲಿ, ಸಂಚಾಲಕರು ಶ್ರೀ ರಾಧಾಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ಸೋಮನಾಥ ಪೂಜಾರಿ ಪುನರಾಯ್ಕೆ

Mumbai News Desk

ಕರ್ನಿರೆ ಗಂಗಾಧರ್ ಅಮೀನ್ ಅವರ “ಕೊಂಕಣ್ ಸ್ವಾದ್” ಗೆ ಟೈಮ್ಸ್ ಪುಡ್ ಪ್ರಶಸ್ತಿ.

Mumbai News Desk

ಕಾಪು ಮೊಗವೀರ ಮಹಾ ಸಭಾ ಹಾಗೂ ಮಹಿಳಾ ಮಂಡಳಿ ಇದರ ಮುಂಬಯಿ ಶಾಖೆವತಿಯಿಂದ “ ಆಟಿದ ಒಂಜಿ ಕೂಟ” , “ಅಭಿನಂದನಾ ಕಾರ್ಯಕ್ರಮ”

Mumbai News Desk

ಡೊಂಬಿವಿಲಿ ಶ್ರೀ ವರದ ಸಿದ್ಧಿವಿನಾಯಕ ಮಂಡಲದಲ್ಲಿ ದಿ. ಕುಕ್ಕೇಹಳ್ಳಿ  ವಿಠಲ್ ಪ್ರಭು ಸ್ಮರಣಾರ್ಥ ಯಕ್ಷಗಾನ ಪ್ರದರ್ಶನ

Mumbai News Desk