30.6 C
Mumbai
April 23, 2026
Mumbai News Kannada
ಸುದ್ದಿ

ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿನ ನೂತನ ಅಧ್ಯಕ್ಷ : ಜೆಸಿ ವಿಕ್ಕಿ ಪೂಜಾರಿ ಮಡುಂಬು





28 ವರುಷಗಳನ್ನು ಪೂರೈಸಿರುವ ವಲಯ 15ರ ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿಗೆ ನೂತನ ಅಧ್ಯಕ್ಷ ಜೆಸಿ ವಿಕ್ಕಿ ಪೂಜಾರಿ ಮಡುಂಬು ಅವರು ಆಯ್ಕೆಯಾಗಿದ್ದಾರೆ.

ಪದಪ್ರಧಾನ ಸಮಾರಂಭವು ಡಿಸೆಂಬರ್ 31ರ ಶನಿವಾರ ಕಾಪು ಜೆಸಿಐ ಭವನದಲ್ಲಿ ಜರಗಿತು.

ಸಮಾರಂಭದ ಮುಖ್ಯ ಅತಿಥಿಗಳಾಗಿ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವಲಯಾಧ್ಯಕ್ಷ ಜೆಸಿ ಸಂತೋಷ್ ಶೆಟ್ಟಿ ವಿಟ್ಲ, ವಲಯ ಪೂರ್ವಾಧ್ಯಕ್ಷ ಜೆಸಿ ರಾಕೇಶ್ ಕುಂಜೂರು, ವಲಯ ಉಪಾಧ್ಯಕ್ಷ ಜೆಸಿ ಅರುಣ್ ಮಾಂಜ, ನಿಕಟಪೂರ್ವ ಅಧ್ಯಕ್ಷೆ ಜೆಸಿ ಅನಿತಾ ಹೆಗ್ಡೆ ಉಪಸ್ಥಿತರಿದ್ದರು.

2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಗೃಹ ರಕ್ಷಕ ದಳದಲ್ಲಿ ಸೇವಾ ನಿರತರಾಗಿರುವ ಲಕ್ಷ್ಮೀ ನಾರಾಯಣ ರಾವ್ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

2026ನೇ ಸಾಲಿಗೆ ಜೆಸಿಐ ಕಾಪು ಘಟಕದ ಕಾರ್ಯದರ್ಶಿಯಾಗಿ ಜೆಸಿ ಶ್ರುತಿ ಶೆಟ್ಟಿ, ಲೇಡಿ ಜೆಸಿ ಕೋ-ಆರ್ಡಿನೆಟರ್ ಜೆಸಿ ಕವಿತಾ ಕುಂದರ್, ಜೂನಿಯರ್ ಜೆಸಿ ಅಧ್ಯಕ್ಷರಾಗಿ ಜೆಜೆಸಿ ಮನ್ವಿತ್ ಬಂಗೇರ, ಕೋಶಾಧಿಕಾರಿಯಾಗಿ ಜೆಸಿ ಶ್ರಾವ್ಯ ಜೆ. ಬಂಗೇರ ಕಾರ್ಯನಿರ್ವಹಿಸಲಿದ್ದಾರೆ.



Related posts

ಉಡುಪಿ : ಕೋಡಿಬೆಂಗ್ರೆ ಮಗುಚಿ ಬಿದ್ದ ಟೂರಿಸ್ಟ್ ಬೋಟ್, ಇಬ್ಬರು ಸಾವು

Mumbai News Desk

ಕೇಮುಂಡೇಲು : ಅಂಗಾಗ ಕೃಷಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿದ ಡಾ. ಕೆ. ಜಿ. ಸುರೇಶ್ ರಾವ್ ಅವರಿಗೆ ಹುಟ್ಟೂರ ಅಭಿನಂದನೆ.

Mumbai News Desk

ಶಷಾಂಕ್ ಅಶೋಕ್ ಐಲ್, ಸಿಎ ಉತ್ತೀರ್ಣ

Mumbai News Desk

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk